ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಹೀನಾಯ ಸೋಲು: ಮೂರೇ ದಿನದಲ್ಲಿ ಮುಕ್ತಾಯವಾದ ಪಂದ್ಯ

Date:

Advertisements

ದಕ್ಷಿಣ ಆಫ್ರಿಕಾ ಬೌಲರ್‌ಗಳ ದಾಳಿಗೆ ಸಾಲುಸಾಲಾಗಿ ವಿಕೆಟ್ ಒಪ್ಪಿಸಿದ ಭಾರತ ತಂಡ, ಇನಿಂಗ್ಸ್ ಹಾಗೂ 32 ರನ್‌ಗಳ ಅಂತರದಲ್ಲಿ ಹಿನಾಯವಾಗಿ ಸೋತಿದೆ. ಈ ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾ ಬಾಕ್ಸಿಂಗ್‌ ಡೇ ಟೆಸ್ಟ್‌ ಎರಡು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಸಂಚೂರಿಯನ್‌ನ ಸೂಪರ್‌ಪಾರ್ಕ್‌ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯವು ಮೂರೇ ದಿನದಲ್ಲಿ 20 ಓವರ್‌ ಬಾಕಿಯಿರುವಂತೆಯೇ ಮುಕ್ತಾಯವಾಯಿತು. ದಕ್ಷಿಣ ಅಫ್ರಿಕಾ ತಂಡ ಮೊದಲ ಇನಿಂಗ್ಸ್‌ನಲ್ಲಿ 108.4 ಓವರ್‌ಗಳಲ್ಲಿ 408 ರನ್‌ ಕಲೆ ಹಾಕಿ 162 ರನ್‌ ಮುನ್ನಡೆ ಪಡೆದಿತ್ತು.

ಎರಡನೇ ಇನಿಂಗ್ಸ್ ಆರಂಭಿಸಿದ ರೋಹಿತ್‌ ಶರ್ಮಾ ನೇತೃತ್ವದ ಟೀಂ ಇಂಡಿಯಾ ಹರಿಣಗಳ ಬೌಲಿಂಗ್‌ ದಾಳಿಗೆ ತತ್ತರಿಸಿ 34.1 ಓವರ್‌ಗಳಲ್ಲಿ 131 ರನ್‌ಗಳಿಗೆ ಆಲೌಟ್‌ ಆಯಿತು. ಕೊನೆಯವರೆಗೂ ಆಡಿದ ವಿರಾಟ್‌ ಕೊಹ್ಲಿ (76) ಹಾಗೂ ಶುಭಮನ್‌ ಗಿಲ್‌ (26) ರನ್‌ ಗಳಿಸಿದ್ದನ್ನು ಬಿಟ್ಟರೆ ಉಳಿದ ಆಟಗಾರರ್ಯಾರು 10 ರ ಗಡಿ ದಾಟಲಿಲ್ಲ.

Advertisements

ದಕ್ಷಿಣ ಆಫ್ರಿಕಾ ಬೌಲರ್‌ಗಳಾದ ನಾಂದ್ರೆ ಬರ್ಗರ್ 33/4, ಮ್ಯಾಕ್ರೊ ಜಾನ್ಸನ್ 36/3 ಹಾಗೂ ಕಗಿಸೋ ರಬಾಡ 32/2 ವಿಕೆಟ್ ಪಡೆದು ಭಾರತದ ಬ್ಯಾಟ್ಸ್‌ಮನ್‌ಗಳನ್ನು ಒಬ್ಬರ ಹಿಂದೆ ಒಬ್ಬರಂತೆ ಪೆಲಿಯನ್‌ಗೆ ಅಟ್ಟಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ₹40 ಸಾವಿರ ಕೋಟಿ ಲೂಟಿ ಆರೋಪ; ಪ್ರಧಾನಿ ಮೋದಿ ಏನು ಹೇಳುತ್ತಾರೆ?

ದ್ವಿಶತಕ ವಂಚಿತ ಡೀನ್‌ ಎಲ್ಗರ್

256/5 ವಿಕೆಟ್‌ನೊಂದಿಗೆ ಮೂರನೇ ದಿನದಾಟ ಆರಂಭಿಸಿದ ಡೀನ್ ಎಲ್ಗರ್ ಹಾಗೂ ಮ್ಯಾಕ್ರೋ ಜಾನ್ಸನ್ 6ನೇ ವಿಕೆಟ್ ಜೊತೆಯಾಟಕ್ಕೆ 111 ರನ್‌ ಪೇರಿಸಿದರು. 185 ರನ್‌ ಗಳಿಸಿದ್ದ  ಡೀನ್ ಎಲ್ಗರ್ ಶಾರ್ದೂಲ್‌ ಠಾಕೂರ್‌ ಬೌಲಿಂಗ್‌ನಲ್ಲಿ ವಿಕೆಟ್‌ ಕೀಪರ್‌ ಕೆ ಎಲ್‌ ರಾಹುಲ್‌ಗೆ ಕ್ಯಾಚಿತ್ತು 15 ರನ್‌ಗಳಿಂದ ದ್ವಿಶತಕ ವಂಚಿತರಾದರು. ಅವರ 287 ಚೆಂಡುಗಳ ಸೊಗಸಾದ ಇನಿಂಗ್ಸ್‌ನಲ್ಲಿ 28 ಬೌಂಡರಿಗಳಿದ್ದವು

ಎಲ್ಗರ್‌ ನಂತರ ಮ್ಯಾಕ್ರೊ ಜಾನ್ಸ್‌ನ್ ಬಿಟ್ಟರೆ ಉಳಿದ ಬ್ಯಾಟ್ಸ್‌ಮನ್‌ಗಳು ಹೆಚ್ಚು ಆಟವಾಡಲಿಲ್ಲ. ಕೊನೆಯವರೆಗೂ ಅಜೇಯರಾಗಿ ಉಳಿದ  ಮ್ಯಾಕ್ರೊ ಜಾನ್ಸ್‌ನ್  11 ಬೌಂಡರಿ ಹಾಗೂ 1 ಸಿಕ್ಸರ್‌ನೊಂದಿಗೆ 84 ರನ್‌ಗಳನ್ನು ಸಿಡಿಸಿ ಅಜೇಯರಾಗಿ ಉಳಿದು ತಂಡದ ಮೊತ್ತವನ್ನು 408ರ ಗಡಿ ತಲುಪಲು ಕಾರಣರಾದರು

ಭಾರತದ ಪರ ಬುಮ್ರಾ 4, ಸಿರಾಜ್ 2 ಹಾಗೂ ಅಶ್ವಿನ್, ಶಾರ್ದೂಲ್‌, ಪ್ರಸಿದ್ಧ ತಲಾ ಒಂದೊಂದು ವಿಕೆಟ್ ಪಡೆದರು. 185 ರನ್‌ ಗಳಿಸಿದ ಡೀನ್ ಎಲ್ಗರ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

blank profile picture 973460 640
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X