ಚಿತ್ರದುರ್ಗ | ಪಾಳುಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರ ಪತ್ತೆ

Date:

Advertisements

ಚಿತ್ರದುರ್ಗದ ಚಳ್ಳಕೆರೆ ಗೇಟ್‌ ಬಳಿ ಪಾಳುಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರ ಪತ್ತೆಯಾಗಿವೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಪರಿಶೀಲನೆ ನಡೆಸಿದಾಗ ಅಸ್ಥಿಪಂಜರಗಳು ಕಂಡುಬಂದಿವೆ.

ಘಟನೆ ಸಂಬಂಧ ಪವನ್ ಕುಮಾರ್ ಎಂಬವರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆ ಮನೆಯಲ್ಲಿ ತಮ್ಮ ಸಂಬಂಧಿ, ನಿವೃತ್ತ ಇಂಜಿನಿಯರ್ ಜಗನ್ನಾಥರೆಡ್ಡಿ, ಅವರ ಪತ್ನಿ ಪ್ರೇಮಕ್ಕ, ಪುತ್ರಿ ತ್ರಿವೇಣಿ, ಪುತ್ರ ಕೃಷ್ಣರೆಡ್ಡಿ ಹಾಗೂ ನರೇಂದ್ರರೆಡ್ಡಿ ವಾಸವಾಗಿದ್ದರು ಎಂದು ಪವನ್ ಕುಮಾರ್ ತಿಳಿಸಿದ್ದಾರೆ. ಈ ಅಸ್ಥಿಪಂಜರಗಳು ಅವರದ್ದೇ ಇರಬಹುದು ಎಂದು ಹೇಳಲಾಗಿದೆ.

ಆ ಐವರು ಆತ್ಮಹತ್ಯೆ ಮಾಡಿಕೊಂಡಿರಬಹುದೇ? ಅಥವಾ ಯಾರಾದರೂ ಕೊಲೆ ಮಾಡಿರಬಹುದೇ? ಎಂಬ ಅನುಮಾನಗಳು ವ್ಯಕ್ತವಾಗಿವೆ. ಅಸ್ಥಿಪಂಜರಗಳನ್ನು ಎಫ್‌ಎಸ್‌ಎಲ್‌ ಪರೀಕ್ಷೆಗೆ ಕಳಿಸಲಾಗಿದೆ. ವರದಿ ಬಂದ ಬಳಿಕ ಹೆಚ್ಚಿನ ಮಾಹಿತಿ ಗೊತ್ತಾಗಿದೆ ಎಂದು ತಿಳಿದುಬಂದಿದೆ.

Advertisements

WhatsApp Image 2023 12 29 at 1.14.30 PM

ಬುಧವಾರ ಯಾರೋ ಮನೆಯ ಬಾಗಿಲು ಹೊಡೆದಿದ್ದಾರೆ. ಹೀಗಾಗಿ, ನಾಯಿಗಳು ಮನೆ ಒಳಗೆ ಹೋಗಿದ್ದು, ಅಲ್ಲಿದ್ದ ಅಸ್ಥಿಪಂಜರದ ತಲೆಬುರುಡೆಯನ್ನು ಹೊರತಂದು ಹಾಕಿವೆ. ಅದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

“ಆ ಮನೆಯಲ್ಲಿ 2019ರ ಕ್ಯಾಲೆಂಡರ್ ಸಿಕ್ಕಿದೆ. ಕೊರೊನಾ ಸಮಯದಲ್ಲಿ ಅವರು ಸಾವಿಗೀಡಾಗಿರುವ ಅನುಮಾನವಿದೆ” ಎಂದು ಸ್ಥಳೀಯರು ಹೇಳಿದ್ದಾರೆ.

“ಜಗನ್ನಾಥರೆಡ್ಡಿ ಹಲವು ವರ್ಷಗಳಿಂದ ನಮ್ಮ ಸಂಪರ್ಕದಲ್ಲಿ ಇರಲಿಲ್ಲ. ಕೆಲ ವರ್ಷಗಳಿಂದ ಅವರ ಕುಟುಂಬ ಕಾಣಿಸಿರಲಿಲ್ಲ. ಅವರ ಮನೆಯಲ್ಲಿ ಪತ್ತೆಯಾಗಿರುವ ಅಸ್ಥಿಪಂಜರಗಳು ಅವರದ್ದೇ ಇರಬಹುದು. ವರ್ಷಗಳ ಹಿಂದೆಯೇ ಅವರು ಮೃತಪಟ್ಟಿರುವ ಸಾಧ್ಯತೆಗಳಿವೆ” ಎಂದು ಪವನ್ ಕುಮಾರ್ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

Download Eedina App Android / iOS

X