ಗದಗ | ಮಹಿಳಾ ವಿರೋಧಿ ಕಲ್ಲಡ್ಕ ಪ್ರಭಾಕರ ಭಟ್ಟ ಬಂಧಿಸಿ; ಅಂಜುಮಾನ್ ಇಸ್ಲಾಂ ಕಮೀಟಿ ಒತ್ತಾಯ

Date:

Advertisements

ಮುಸ್ಲಿಂ ಮಹಿಳೆಯರನ್ನು ನಿಂದಿಸಿರುವ ಆರೆಸ್ಸೆಸ್ಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ ಅವರನ್ನು ಬಂಧಿಸಬೇಕು ಎಂದು ಅಂಜುಮಾನ್ ಇಸ್ಲಾಂ ಕಮೀಟಿ ಮಾಜಿ ಕಾರ್ಯದರ್ಶಿ ದಾವಲಸಾಬ ತಾಳಿಕೋಟಿ ಅಗ್ರಹಿಸಿದರು.

ಕಲ್ಲಡ್ಕ ಪ್ರಭಾಕರ ಭಟ್ಟನನ್ನ ಬಂಧಿಸಲು ಒತ್ತಾಯಿಸಿ ಅಂಜುಮಾನ್ ಇಸ್ಲಾಂ ಕಮೀಟಿಯಿಂದ ಗಜೇಂದ್ರಗಡ ತಹಸೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.

ʼಯತ್ರ ನಾರ್ಯಸ್ತು ಪೂಜ್ಯಂತೆ ತತ್ರ ರಮಂತೆ ದೇವತಾಃʼ ಎಲ್ಲಿ ನಾರಿಯನ್ನು ಪೂಜಿಸಲಾಗುವುದೋ ಅಲ್ಲಿ ದೇವತೆಗಳು ನೆಲೆಸಿರುತ್ತಾರೆ ಎಂದು ನಮ್ಮ ಪರಂಪರೆ ಹೇಳುತ್ತದೆ. ಆದರೆ, ಇಂತಹ ಪರಂಪರೆಗೆ ದಕ್ಕೆ ಉಂಟು ಮಾಡಿದ, ಮುಸ್ಲಿಂ ಸಮುದಾಯದ ಮಹಿಳೆಯರಿಗೆ ಅವಮಾನ ಮಾಡಿದ ಕಲ್ಲಡ್ಕ ಪ್ರಭಾಕರ ಭಟ್ಟನನ್ನು ಕೂಡಲೇ ಬಂಧಿಸುವಂತೆ ಅಗ್ರಹಿಸಿದರು.

Advertisements

ಮಹಿಳೆಯರ ಕುರಿತು ಅವಮಾನಕರ ಹೇಳಿಕೆ ನೀಡಿದ ಮುಸ್ಲಿಂ ಸಮುದಾಯದ ಮಹಿಳೆಯರ ಬಗ್ಗೆ ಅವಮಾನಕರ ಹೇಳಿಕೆಯನ್ನು ನೀಡಿದ ಮಹಿಳಾ ವಿರೋಧಿ ಕಲ್ಲಡ್ಕ ಪ್ರಭಾಕರ ಭಟ್ಟನನ್ನ ತಕ್ಷಣವೇ ಸರ್ಕಾರ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕಿತ್ತು ಆದರೆ ಸರ್ಕಾರ ಕಣ್ಮುಚ್ಚಿ ಕುಳಿತುಕೊಂಡಿದೆ.

ಸಿದ್ದರಾಮಯ್ಯ ಸರ್ಕಾರ ಚುನಾವಣಾ ಪೂರ್ವದಲ್ಲಿ ಅಲ್ಪಸಂಖ್ಯಾತರ ಹಿತ ಕಾಯವುದಾಗಿ ವಚನ ನೀಡಿದ್ದು ಇದೀಗ ಅಲ್ಪಸಂಖ್ಯಾತರ ಮಹಿಳಯರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಸೌಹಾರ್ದತೆಗೆ ದಕ್ಕೆ ತರುವ ಹೇಳಿಕೆಯ ವಿರುದ್ಧವಾಗಿ ತುಟಿಪಿಟಕ್ಕ ಎನ್ನುತ್ತಿಲ್ಲ. ಇದು ಅತ್ಯಂತ ಖಂಡನೀಯ. ಕೂಡಲೇ ಸರ್ಕಾರ ಈ ವ್ಯಕ್ತಿಯ ಮೇಲೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಒದ್ದು ಒಳಗಡೆ ಹಾಕಬೇಕಿತ್ತು. ಆದರೆ, ಇದನ್ನು ಮಾಡದೇ ಆರೋಪಿಯನ್ನು ಬಂಧಿಸುವುದಿಲ್ಲ ಎಂದು  ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿದ ರೀತಿಯನ್ನು ಬಲವಾಗಿ ಖಂಡಿಸುವೆ ಎಂದರು.

ಪುರಸಭಾ ಸದಸ್ಯ ರಾಜು ಸಾಂಗ್ಲೀಕಾರ ಮಾತನಾಡಿ ಮಹಿಳೆಯರ ಬಗ್ಗೆ ಕೀಳು ಮಟ್ಟದಲ್ಲಿ ಮಾತನಾಡುವ ಇಂತಹ ವ್ಯಕ್ತಿಗಳಿಗೆ ಸರ್ಕಾರ ತಕ್ಕಪಾಠ ಕಲಿಸಬೇಕು. ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಲು ಮುಂದಾಗಬೇಕಿದೆ ಎಂದರು.

ಈ ವೇಳೆ ಅಂಜುಮಾನ್ ಇಸ್ಲಾಂ ಕಮೀಟಿ ಚೇರಮನ್ನ ಹಸನಸಾಬ ತಟಗಾರ, ನಾಸೀರ್ ಸುರಪುರ, ಶಾಮೀದಸಾಬ ದಿಂಡವಾಡ, ದಾದು ಹಣಗಿ, ಮುರ್ತುಜಾ ಡಾಲಾಯತ, ಭಾಷೇಸಾಬ ಮುದಗಲ್ಲ, ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

Download Eedina App Android / iOS

X