ರಾಯಚೂರು | ಮುಟ್ಟಿನ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಕೆಲಸವಾಗಬೇಕು: ಸಿಇಒ

Date:

Advertisements

ಶಿಕ್ಷಣ ಇಲಾಖೆ ಮೂಲಕ ಗ್ರಾಮೀಣ ಮಹಿಳೆಯರಿಗೆ ಮುಟ್ಟಿನ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಕೆಲಸ ಆಗಬೇಕು, ಇದಕ್ಕೆ ಮುಟ್ಟಿನ ನೈರ್ಮಲ್ಯ ನಿರ್ವಹಣಾ ಸಮಿತಿಯಲ್ಲಿರುವ ಎಲ್ಲ ಇಲಾಖೆಗಳು ಕೆಲಸ ಮಾಡಬೇಕು ಎಂದು ರಾಯಚೂರು ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ತುಕಾರಾಂ ಪಾಂಡ್ವೆ ಹೇಳಿದರು.

ರಾಯಚೂರು ನಗರದ ಜಿಲ್ಲಾ ಪಂಚಾಯತ್ ಜಲ ನಿರ್ಮಲ ಸಭಾಂಗಣದಲ್ಲಿ‌ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸುಸ್ಥಿರ ಮುಟ್ಟಿನ ನೈರ್ಮಲ್ಯ ನಿರ್ವಹಣೆ ಸಮಿತಿ ಸಭೆಯಲ್ಲಿ ಮಾತನಾಡಿದರು.

“ಮಹಿಳೆಯರು ಮುಟ್ಟನ್ನು ಆರೋಗ್ಯಕರವಾಗಿ ಹಾಗೂ ಸುರಕ್ಷಿತವಾಗಿ ನಿರ್ವಹಿಸುವ ಹಿತದೃಷ್ಟಿಯಿಂದ ರಾಯಚೂರು ಜಿಲ್ಲಾ ಮಟ್ಟದಲ್ಲಿ ಮುಟ್ಟಿನ ನೈರ್ಮಲ್ಯ ನಿರ್ವಹಣಾ ಸಮಿತಿ ಮಾಡಿದ್ದು, ಸರ್ಕಾರಿ ಇಲಾಖೆಗಳಲ್ಲಿರುವ ಮಹಿಳೆಯರಿಗೆ ಜಾಗೃತಿ ಮೂಡುತ್ತಿದೆ. ಮುಖ್ಯವಾಗಿ ಗ್ರಾಮೀಣ ಮ‌ಹಿಳೆಯರಿಗೆ ಈ ಕುರಿತು ಅರಿವು ಮೂಡಿಸಬೇಕು” ಎಂದು ತಿಳಿಸಿದರು.

Advertisements

“ಜಿಲ್ಲಾ ಮಟ್ಟದಲ್ಲಿ ಸಮಿತಿ ರಚನೆ ಮಾಡಿದ್ದು, ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕೆಎಸ್‌ಆರ್‌ಎಲ್‌ಪಿಎಸ್ ಸಂಜೀವ ಪ್ರತಿನಿಧಿಗಳು ಸೇರಿದಂತೆ 12 ಇಲಾಖೆಗಳ ಅಧಿಕಾರಿಗಳಿದ್ದಾರೆ. ಈ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಮುಂದಾಗಬೇಕು” ಎಂದರು.

“ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಾಹಿತಿ ಕೊರತೆ ಇದ್ದು, ಜಾಗೃತಿ ಮೂಡಿಸುವ ಕೆಲಸ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಸಮಿತಿಯಲ್ಲಿರುವ ಇಲಾಖಾ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು” ಎಂದು ಸೂಚಿಸಿಸಿದರು.

ಯುನಿಸೆಫ್ ಅಧಿಕಾರಿ ಪ್ರಭಾತ್ ಕಲ್ಕೂರು ಮಾತನಾಡಿ, “ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಯುನಿಸೆಫ್ ಸಂಸ್ಥೆ ಸಹಯೋಗದೊಂದಿಗೆ ಕಲ್ಯಾಣ ಕರ್ನಾಟಕ ಜಿಲ್ಲೆಯಲ್ಲಿ ಮುಟ್ಟಿನ ನಿರ್ವಹಣೆ ಕುರಿತು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಾಗೃತಿ ಮೂಡಿಸಲಾಗುತ್ತಿದೆ. ಆರೋಗ್ಯ ಇಲಾಖೆ ಮೂಲಕ ಮುಟ್ಟಿನ ಕಪ್ ವಿತರಣೆ ಮಾಡಲು ಮೈತ್ರಿ ಯೋಜನೆಯನ್ನು ಆರಂಭಿಸಿದೆ. ಕಲ್ಯಾಣ ಕರ್ನಾಟಕ ಭಾಗದ 6 ಜಿಲ್ಲೆಗಳಲ್ಲಿ ಮಹಿಳಾ ಸರ್ಕಾರಿ ನೌಕರರು, ಅಧಿಕಾರಿಗಳಿಗೆ ತರಬೇತಿ ನೀಡಲಾಗಿದ್ದು, ಮುಟ್ಟಿನ ಕಪ್ ವಿತರಣೆ ಮಾಡಲಾಗಿದೆ. ಈ ಕುರಿತು ಸಮಿತಿ ಮೂಲಕ ಜಾಗೃತಿ ಮಾಡಿಸಬೇಕಾಗಿದೆ. ಜಾಗೃತಿಗಾಗಿ ವಿವಿಧ ಕಾರ್ಯಕ್ರಮಗಳಿಗೆ ಜಿಲ್ಲೆಗೆ ₹40 ಲಕ್ಷ ಅನುದಾನ ನೀಡಲಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ವೈ ಸುರೇಂದ್ರ ಬಾಬು, ಜಿಲ್ಲಾ ಆರ್‌ಸಿಎಚ್ ಡಾ ನಂದಿನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚೇತನ್ ಪಾಟೀಲ್, ಸಮಾಜ ಕಲ್ಯಾಣ ಇಲಾಖೆಯ ಮಹೇಶ ಪೋತೆದಾರ, ಪರಿಶಿಷ್ಟ ವರ್ಗಗಳ ಅಧಿಕಾರಿ ರಾಜೇಂದ್ರ ಜಲ್ದಾರ್ ಸೇರಿದಂತೆ ಯುನಿಸೆಫ್ ಸಂಸ್ಥೆ ಸಿಬ್ಬಂದಿಗಳು, ಅಧಿಕಾರಿಗಳು ಇದ್ದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X