26/11 ಮುಂಬೈ ದಾಳಿಯ ರೂವಾರಿ ಹಫೀಜ್ ಸಯೀದ್‌ನನ್ನು ಹಸ್ತಾಂತರಿಸಲು ಪಾಕ್‌ಗೆ ಭಾರತ ಮನವಿ

Date:

Advertisements

26/11ರ ಮುಂಬೈ ದಾಳಿಯ ಪ್ರಮುಖ ರೂವಾರಿ ಭಯೋತ್ಪಾದಕ ಹಫೀಜ್‌ ಸಹೀದ್‌ನನ್ನು ಭಾರತಕ್ಕೆ ಹಸ್ತಾಂತರಿಸಲು ವಿದೇಶಾಂಗ ಇಲಾಖೆ ಪಾಕಿಸ್ತಾನಕ್ಕೆ ಮನವಿ ಮಾಡಿದೆ.

ಈ ಬಗ್ಗೆ ಪ್ರಕಟಣೆ ಹೊಡಿಸಿರುವ ವಿದೇಶಾಂಗ ಇಲಾಖೆಯ ವಕ್ತಾರರಾದ ಅರಿಂದಮ್ ಬಗ್ಚಿ, “ಭಾರತದಲ್ಲಿ ಹಲವಾರು ಪ್ರಕರಣಗಳಿಗೆ ಬೇಕಾಗಿರುವ ಉಗ್ರಗಾಮಿ ಹಫೀಜ್‌ ಸಹೀದ್‌ನನ್ನು ವಿಚಾರಣೆ ಸಲುವಾಗಿ ಭಾರತಕ್ಕೆ ಹಸ್ತಾಂತರಿಸಬೇಕು” ಎಂದು ಮನವಿ ಮಾಡಿದ್ದಾರೆ.

2008ರ ಮುಂಬೈ ದಾಳಿಯ ಪ್ರಮುಖ ರೂವಾರಿಯಾದ ಕುಖ್ಯಾತ ಭಯೋತ್ಪಾದಕನಾದ ಹಫೀಜ್ ಸಹೀದ್‌ಗೆ ಅಮೆರಿಕವು 10 ಮಿಲಿಯನ್ ಡಾಲರ್ ಬಹುಮಾನ ಘೋಷಿಸಿದೆ. 2008ರ ನವೆಂಬರ್ 26ರಂದು ಮುಂಬೈನಲ್ಲಿ ನಡೆದ ದಾಳಿಯಲ್ಲಿ 166 ಮಂದಿ ಮೃತಪಟ್ಟು, 300ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಹಫೀಜ್ ಸಹೀದ್‌ ವಿಶ್ವಸಂಸ್ಥೆಯಿಂದ ನಿಷೇಧಿಸಲ್ಪಟ್ಟ ಭಯೋತ್ಪಾದಕನಾಗಿದ್ದಾನೆ.

Advertisements

“ಭಾರತದಲ್ಲಿನ ನಿಗದಿತ ವಿಚಾರಣೆಯ ಸಲುವಾಗಿ ಆತನನ್ನು ಹಸ್ತಾಂತರಿಸುವಂತೆ ನಾವು ಸೂಕ್ತ ಬೆಂಬಲಿತ ಆಧಾರಗಳನ್ನು ಪಾಕಿಸ್ತಾನ ಸರ್ಕಾರಕ್ಕೆ ಕಳುಹಿಸಿದ್ದೇವೆ. ಇತರ ದೇಶಗಳ ಚುನಾವಣಾ ಪ್ರಕ್ರಿಯೆಯ ಬಗ್ಗೆ ಪ್ರತಿಕ್ರಯಿಸುವುದಿಲ್ಲ. ಆದಾಗ್ಯೂ, ತೀವ್ರಗಾಮಿಗಳು ಚುನಾವಣೆಯಲ್ಲಿ ಭಾಗವಹಿಸುವುದು, ಮುಖ್ಯವಾಹಿನಿಗೆ ಬರುವುದು ಪಾಕಿಸ್ತಾನದಲ್ಲಿ ಹೊಸದೇನಲ್ಲ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹಿಜಾಬ್ ಹಿಂಜರಿಕೆ; ರಣತಂತ್ರವೋ, ಇಲ್ಲವೇ ಪಲಾಯನ ಮಂತ್ರವೇ?

“ಇಂತಹ ಘಟನೆಗಳು ನಮ್ಮ ದೇಶದ ಭದ್ರತೆಗೆ ತೀವ್ರ ಪರಿಣಾಮ ಉಂಟು ಮಾಡುತ್ತವೆ. ನಮ್ಮ ದೇಶದ ಭದ್ರತಾ ಹಿತದೃಷ್ಟಿಯಿಂದ ನಮ್ಮ ಕಡೆಯಿಂದ ಎಲ್ಲ ಬೆಳವಣಿಗೆಗಳ ಬಗ್ಗೆ ಮೇಲ್ವಿಚಾರಣೆಗೊಳಿಸುತ್ತೇವೆ” ಎಂದು ಅರಿಂದಮ್ ಬಗ್ಚಿ ತಿಳಿಸಿದ್ದಾರೆ.

ಪಾಕಿಸ್ತಾನದಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ಪಿಎಂಎಂಎಲ್ ಪಕ್ಷದಿಂದ ಹಫೀಜ್‌ ಸಯೀದ್‌ ಪುತ್ರ ಸ್ಪರ್ಧಿಸುತ್ತಿರುವ ವರದಿಗಳು ಬಂದ ನಂತರದಲ್ಲಿ ಭಾರತದಿಂದ ಪ್ರತಿಕ್ರಿಯೆ ಬಂದಿದೆ. ಹಫೀಜ್‌ ಸಯೀದ್‌ ಪುತ್ರ ತಹ್ಲಾ ಸಹೀದ್ ಲಾಹೋರ್‌ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾನೆ.

ಹಫೀಜ್‌ ಸಹೀದ್ ಉಗ್ರಗಾಮಿ ಸಂಘಟನೆಯಾದ ಎಲ್‌ಇಟಿಯ ಪ್ರಮುಖ ನಾಯಕನಾಗಿದ್ದು, ಆತನ ಪುತ್ರ ತಹ್ಲಾ ಸಹೀದ್ ಕೂಡ ಎಲ್‌ಇಟಿಯ ಎರಡನೇ ಪ್ರಮುಖ ನಾಯಕನಾಗಿದ್ದಾನೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X