ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಹಿಂದುಗಡೆಯಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ವಸತಿ ನಿಲಯ ಮೇಲ್ವಿಚಾರಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಬೀದರ್ ತಾಲೂಕಿನ ಹೊನ್ನಿಕೇರಿ ಕ್ರಾಸ್ ಬಳಿ ಶುಕ್ರವಾರ ಸಂಜೆ ನಡೆದಿದೆ.
ಅಪಘಾತದಲ್ಲಿ ಸಾವನಪ್ಪಿದ ಹಾಸ್ಟೆಲ್ ವಾರ್ಡನ್ ದೇಸುರಾವ ರಾಠೋಡ್ (40) ಮೂಲತಃ ಚಿಂಚೋಳಿ ತಾಲೂಕಿನವರಾಗಿದ್ದು ಕರ್ತವ್ಯ ನಿಮಿತ್ತ ಬೀದರ್ ನಲ್ಲಿ ನೆಲೆಸಿದ್ದರು. ಕರ್ತವ್ಯ ಮುಗಿಸಿಕೊಂಡು ಭಾಲ್ಕಿಯಿಂದ ಬೀದರ್ ನಗರಕ್ಕೆ ಹೋಗುವ ವೇಳೆ ಈ ಘಟನೆ ಸಂಭವಿಸಿದೆ ಎಂದು ಜನವಾಡ ಪೊಲೀಸ್ ಠಾಣೆ ಪಿಎಸ್ಐ ಈದಿನ.ಕಾಮ್ ದೊಂದಿಗೆ ಮಾತನಾಡಿ ತಿಳಿಸಿದ್ದಾರೆ.
ಮೃತ ವಾರ್ಡನ್ ಭಾಲ್ಕಿ ತಾಲೂಕಿನ ಲಖನಗಾಂವ ಗ್ರಾಮದ ವಸತಿ ನಿಲಯ ಮೇಲ್ವಿಚಾರಕ ಹಾಗೂ ಭಾಲ್ಕಿ ಪಟ್ಟಣದ ವಸತಿ ನಿಲಯದ ಪ್ರಭಾರಿ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜನವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.