ಬಳ್ಳಾರಿ | ಅಂಗನವಾಡಿ ಜಾಗ ಒತ್ತುವರಿ ಆರೋಪ; ಕ್ರಮಕ್ಕೆ ಗ್ರಾಮಸ್ಥರ ಆಗ್ರಹ

Date:

Advertisements

ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಎಸ್. ಬಸಾಪುರ ಗ್ರಾಮದಲ್ಲಿ ಸರ್ಕಾರಿ ಅಂಗನವಾಡಿ ಜಾಗ ಒತ್ತುವರಿ ಮಾಡಿಕೊಂಡಿ ಮನೆ ನಿರ್ಮಾಣ ಮಾಡಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಸರ್ಕಾರಿ ಜಾಗದಲ್ಲಿರುವ ಮನೆ ತೆರವು ಮಾಡುವಂತೆ ಕೋರ್ಟ್ ಆದೇಶಿಸಿದ್ದರೂ, ಜಿಲ್ಲಾಡಳಿತ ನೋಟಿಸ್‌ ನೀಡಿದರೂ ತಲೆಕೆಡಿಸಿಕೊಳ್ಳದೇ ಮನೆ ಮಾಲೀಕ ನಿರ್ಲಕ್ಷ್ಯ ತೋರಿದ್ದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಬಿ.‌ಪಂಪಾಪತಿ ಎಂಬುವವರು ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡಿದ್ದಾರೆ. ಇದು ನಮ್ಮ ಪೂರ್ವಜರ ಆಸ್ತಿ ಎಂದು ಪಂಪಾಪತಿ‌ ವಾದ ಮಾಡುತ್ತಿದ್ದಾರೆ. ವಡ್ಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಸಾಪುರ ಗ್ರಾಮದ ಸರ್ಕಾರಿ ಜಾಗದಲ್ಲಿ ಅಂಗನವಾಡಿ ಕಟ್ಟಲು ಜಾಗ ನಿಗದಿ ಮಾಡಲಾಗಿತ್ತು. ಆದರೆ, ಅಂಗನವಾಡಿ ನಿರ್ಮಾಣ ಆಗ ಬೇಕಿದ್ದ ಜಾಗದಲ್ಲಿ ಮನೆ ನಿರ್ಮಾಣ ಮಾಡಲಾಗಿದೆ.

Advertisements

ಖಾತ ನಂ. 368 ಜಾಗ ಒತ್ತುವರಿ ಮಾಡಿ ಮನೆಗಳ ನಿರ್ಮಾಣ ಮಾಡಲಾಗಿದೆ. ಬಿ.‌ಪಂಪಾಪತಿ ಎಂಬುವವರು ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡು ಮನೆ ಕಟ್ಟಿದ್ದಾರೆ. ಮನೆ ನಿರ್ಮಾಣ ಆದ ಜಾಗ ಪಂಚಾಯ್ತಿಗೆ ಸೇರಿದ್ದು ಎಂದು ಮನೆಗಳ ತೆರವಿಗೆ ಹೈಕೋರ್ಟ್ ಆದೇಶ ಮಾಡಿದರೂ ಮನೆ ಮಾಲೀಕ ಯಾವುದಕ್ಕೂ ತಲೆ ಕೆಡಿಸಿಕೊಳ್ಳುತ್ತಿಲ್ಲ.

ಜಿಲ್ಲಾಡಳಿತ ನೋಟಿಸ್‌ಗಳಿಗೂ ತಲೆಬಾಗದೆ ಒತ್ತುವರಿ ಜಾಗದಲ್ಲಿ ಹೈಪೈ ಮನೆಗಳ ನಿರ್ಮಾಣ ಮಾಡಲಾಗಿದೆ. ಅಲ್ಲದೆ ಜಾಗ ಸರ್ವೆಗೆ ಬಂದ ಅಧಿಕಾರಿಗಳ ಮೇಲೂ ಮನೆ ಮಾಲೀಕ ಪಂಪಾಪತಿ ದರ್ಪ ಮೆರೆದಿದ್ದಾರೆ. ಇದು ನಮ್ಮ ಪೂರ್ವಾಜಿತರ ಆಸ್ತಿ. ರಾಜಕೀಯ ಷಡ್ಯಂತರದಿಂದ ದೌರ್ಜನ್ಯ ಆಗ್ತಿದೆ ಎಂದು ಕಣ್ಣೀರು ಹಾಕಿದ್ದಾರೆ. ನಿನ್ನೆ ಅಂಗನವಾಡಿ ತೆರೆಯುವುದರಿಂದ ಮಕ್ಕಳ ಭವಿಷ್ಯ ಉಜ್ವಲವಾಗುತ್ತೆ. ಹೀಗಾಗಿ ಮಕ್ಕಳ ಭವಿಷ್ಯಕ್ಕಾಗಿ ಜಾಗ ಬಿಟ್ಟು ಕೊಡಲು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X