ಜನವರಿ 22 ರಂದು ಅಯೋಧ್ಯೆಗೆ ಬರಬೇಡಿ: ದೇಶದ ಜನರಿಗೆ ಮೋದಿ ಮನವಿ

Date:

Advertisements

ಇಡೀ ವಿಶ್ವವೇ ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯುವ ಐತಿಹಾಸಿಕ ರಾಮ ಮಂದಿರ ಪ್ರತಿಷ್ಠಾಪನಾ  ಕಾರ್ಯಕ್ರಮಕ್ಕೆ ಕಾಯುತ್ತಿದೆ. ಆದರೆ ಆ ದಿನದಂದು ಜನರು ನಗರಕ್ಕೆ ಬರಬೇಡಿ ಎಂದು ಸಾರ್ವಜನಿಕರಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ಕೆಲವು ಜನರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಅವರು ಆಗಮಿಸಿ ಐತಿಹಾಸ ದಿನಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ಮೋದಿ ಹೇಳಿದರು.

ಅಯೋಧ್ಯೆಯಲ್ಲಿ ರೈಲ್ವೆ ನಿಲ್ದಾಣ ಹಾಗೂ ವಿಮಾನ ನಿಲ್ದಾಣ ನವೀಕರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಅಭಿವೃದ್ಧಿ ಹಾಗೂ ಪರಂಪರೆ ದೇಶವನ್ನು ಮುನ್ನಡೆಸುತ್ತಿದೆ ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ; ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಏನು ಮಾಡುತ್ತಿವೆ?

ಜನವರಿ 22 ರಂದು ದೇಶದ ಎಲ್ಲ ಜನರು ತಮ್ಮ ಮನೆಗಳಲ್ಲಿ ದೀಪವನ್ನು ಬೆಳಗಿಸಿ ಇಡೀ ದೇಶವನ್ನು ಪ್ರಜ್ವಲಿಸುವಂತೆ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಜನವರಿ 14 ರಿಂದ 22ರವರೆಗೆ ದೇಶಾದ್ಯಂತವಿರುವ ದೇಗುಲಗಳು ಹಾಗೂ ಪ್ರೇಕ್ಷಣೀಯ ಸ್ಥಳಗಳಲ್ಲಿ ಶುಚಿತ್ವ ಅಭಿಯಾನವನ್ನು ಕೈಗೊಳ್ಳಬೇಕೆಂದು ಸಾರ್ವಜನಿಕರಿಗೆ ಮೋದಿ ಕರೆ ನೀಡಿದರು.

ಭಗವಾನ್‌ ರಾಮನು ಗುಡಿಸಲಿನಲ್ಲಿ ವಾಸಿಸುತ್ತಿದ್ದ ಕಾಲವೊಂದಿತ್ತು, ಆದರೆ ಈಗ ದೇಶದ ಕೋಟ್ಯಂತರ ಬಡವರಂತೆ ಕಾಂಕ್ರೀಟ್ ಮನೆಯನ್ನು ಪಡೆದಿದ್ದಾನೆ. ಉಜ್ವಲ ಯೋಜನೆಯಿಂದ ಕೋಟ್ಯಂತರ ತಾಯಿ ಮತ್ತು ಸಹೋದರಿಯರು ತಮ್ಮ ಜೀವನವನ್ನು ಹಸನಾಗಿಸಿಕೊಂಡಿದ್ದಾರೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. ಕರೋನಾ ಸಮಯದಲ್ಲಿ ದಿಯಾ ಜಲಾವೊ ಗಂಟಿ ಬಜಾವೋ,,,ದೇಶದ ಜನರ ಹಿತಾಸಕ್ತಿ ಕಾಪಾಡುವ ಮುಖ್ಯಸ್ಥ ದೇವರು ಧರ್ಮ ಅಂದುಕೊಂಡು ಕೇವಲ ಚುನಾವಣೆ ದುರುದ್ದೇಶದಿಂದ ಭಾಷಣ ಮಾಡಿಕೊಂಡು ಕೆಲವೇ ಆಪ್ತ ಬಂಡವಾಳಿಗರ ಬೊಕ್ಕಸ ತುಂಬಿಸಲು ಹಗಲಿರುಳು ದುಡಿದವರು ,, ಮೆದುಳು ಹಳಸಿದ ಎರಡು ರೂಪಾಯಿ ಭಕ್ತರ ದೊಡ್ಡ ಪಡೆಯನ್ನು ಸೃಷ್ಟಿ ಮಾಡಿ,,,ಬಿಕರಿಯಾದ ಮೋಧ್ಯಮಗಳು, ಕೋಮು ದ್ವೇಷ ಬಿತ್ತುವ ಬಿಸ್ಕೆಟ್ ಚಾನಲ್ ಗಳು,, ಗ್ಯಾಸ್ ಸಿಲಿಂಡರ್ ದರ ಮೂರು ಪಟ್ಟು , ಅಡುಗೆ ಎಣ್ಣೆ ಮೂರು ಪಟ್ಟು, ದಿನಸಿ ಪದಾರ್ಥಗಳ ಬೆಲೆ ಗಗನಕ್ಕೇರುತ್ತಿದೆ ಡೀಸೆಲ್ ಪೆಟ್ರೋಲ್ ಬೆಲೆ ಹೇಳುವವರಿಲ್ಲ ಕೇಳುವವರಿಲ್ಲ , ಇಂಥಾ ವಿಷಯಗಳ ಕಡೆ ಗಮನ ಕೊಡಬೇಕಾದವರು ಅಧಿಕಾರಕ್ಕಾಗಿ ಬಹುಕೃತ ವೇಷ ಹಾಕಿದರೆ,,,ಆ ದೇಶದ ಜನರ ಸ್ಥಿತಿ ಏನಾಗಬೇಡ,,,

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X