ಬೆಳಗಾವಿ | ಮಳೆ ಕೊರತೆ; ಗಗನಕ್ಕೇರಿದ ತರಕಾರಿ ದರ

Date:

Advertisements

ಮಳೆ ಕೊರತೆಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಈ ಬಾರಿ ತರಕಾರಿ ಬೆಳೆಯುವ ಪ್ರದೇಶ ಅರ್ಧದಷ್ಟು ಕಡಿತವಾಗಿದೆ. ಪರಿಣಾಮ, ಇಲ್ಲಿನ ಮಾರುಕಟ್ಟೆಗೆ ಬೇಡಿಕೆಗೆ ತಕ್ಕಷ್ಟು ತರಕಾರಿ ಪೂರೈಕೆಯಾಗದೆ, ಕೆಲವು ತರಕಾರಿಗಳ ಬೆಲೆ ಗಗನಕ್ಕೇರಿದೆ.

ನಾಲ್ಕು ತಿಂಗಳ ಹಿಂದೆ ಟೊಮೆಟೊ ದರ ಕೆಜಿಗೆ 100 ರೂ. ದಾಟಿತ್ತು. ನಂತರ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಟೊಮೆಟೊ ಬಂದಿದ್ದರಿಂದ ಕೆಜಿಗೆ 20ರಿಂದ 40 ರೂ.ಗೆ ದರ ಇಳಿದಿತ್ತು. ಈಗಲೂ ಅಷ್ಟೇ ದರ ಮುಂದುವರಿದಿದೆ. ಆದರೆ, ಬದನೆಕಾಯಿ ದರ ಕೆಜಿಗೆ 60ರಿಂದ 70 ರೂ, ಗಜ್ಜರಿ 40ರಿಂದ 50 ರೂ, ಬೆಂಡೆಕಾಯಿ 60ರಿಂದ 80 ರೂ, ಬೀನ್ಸ್‌ 80 ರೂ.ಗೆ ಏರಿಕೆಯಾಗಿದೆ. 25ರಿಂದ 30 ರೂ. ಒಂದು ಕೆ.ಜಿ ಆಲೂಗಡ್ಡೆ ಮಾರಾಟವಾಗುತ್ತಿದೆ.

ತರಕಾರಿಕೊಳ್ಳಲು ಬರುತ್ತಿರುವ ಗ್ರಾಹಕರು, ಕಳೆದೊಂದು ವಾರದಿಂದ ಮಾರುಕಟ್ಟೆಯಲ್ಲಿ ವಿವಿಧ ತರಕಾರಿಗಳ ದರ ಹೆಚ್ಚಿದೆ. ಇತ್ತೀಚಿನ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದೇವೆ. ಎಂದು ತಮ್ಮ ಬೇಸರ ಹೊರಹಾಕುತ್ತಿದ್ದಾರೆ.

Advertisements

ಬೆಳಗಾವಿ ನಗರ ಮಾತ್ರವಲ್ಲ, ಜಿಲ್ಲೆಯ ಎಲ್ಲ ಮಾರುಕಟ್ಟೆಗಳಲ್ಲೂ ಇದೇ ಪರಿಸ್ಥಿತಿಯಿದೆ. ಬರದ ಹಿನ್ನೆಲೆಯಲ್ಲಿ ಈ ಬಾರಿ ತರಕಾರಿ ಬೆಳೆ ಇಳುವರಿ ಕುಸಿದಿದೆ. ಎಷ್ಟೋ ಕಡೆ ಒಂದಿಷ್ಟು ಬೆಳೆಯೂ ಬಂದಿಲ್ಲ. ಹಾಗಾಗಿ ತರಕಾರಿ ದರ ಹೆಚ್ಚುತ್ತಲೇ ಇದೆ. ಜನರು ಚೌಕಾಸಿ ಮಧ್ಯೆಯೂ ಖರೀದಿಸುತ್ತಿದ್ದಾರೆ ಎನ್ನುತ್ತಿದ್ದಾರೆ ತರಕಾರಿ ಮಾರುವವರು.

ಬೆಳಗಾವಿ, ಖಾನಾಪುರ, ಚನ್ನಮ್ಮನ ಕಿತ್ತೂರು, ಗೋಕಾಕ, ಮೂಡಲಗಿ ತಾಲೂಕುಗಳಲ್ಲಿ ಹೆಚ್ಚಾಗಿ ತರಕಾರಿ ಬೆಳೆಯಲಾಗುತ್ತದೆ. ಕಳೆದ ವರ್ಷ ಹಿಂಗಾರು ಹಂಗಾಮಿನಲ್ಲಿ 8,900 ಹೆಕ್ಟೇರ್‌ನಲ್ಲಿ ತರಕಾರಿ ಬೆಳೆಯಲಾಗಿತ್ತು. ಈ ಬಾರಿಯೂ ಅಷ್ಟೇ ಬಿತ್ತನೆಯಾಗಬಹುದೆಂಬನಿರೀಕ್ಷೆ ಇತ್ತು. ಆದರೆ, ಬರದ ಪರಿಸ್ಥಿತಿಯಿಂದಾಗಿ ಶೇ. 52ರಷ್ಟು ಮಾತ್ರ ಬಿತ್ತನೆಯಾಗಿದೆ. ಈ ಬಾರಿ ಇಳುವರಿಯೂ ಕುಸಿದಿರುವುದು ತರಕಾರಿಗಳ ದರ ಹೆಚ್ಚಲು ಕಾರಣವಾಗಿರಬಹುದು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಮಹಾಂತೇಶ ಮುರಗೋಡ ಮಾದ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಬೆಳಗಾವಿ : ಜಿಲ್ಲೆಯಲ್ಲಿ ಮೋಡ ಕವಿದ ಹವಾಮಾನ – ಅಲ್ಪ ಮಳೆಯ ಸಾಧ್ಯತೆ

ಬೆಳಗಾವಿ ಜಿಲ್ಲೆಯಲ್ಲಿ ತಾಪಮಾನ 20 ರಿಂದ 25 ಡಿಗ್ರಿ ಸೆಲ್ಸಿಯಸ್ ದಾಖಲಾಗುವ...

Download Eedina App Android / iOS

X