ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವಿರುದ್ಧ ಫೇಸ್ಬುಕ್ನಲ್ಲಿ ಶರತ್ ಕಲ್ಯಾಣಿ ಎಂಬುವವರು ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದು, ಸಚಿವರ ತೇಜೋವಧೆ ಮಾಡಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲಾ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೇ ಆಗ್ರಹಿಸಿದ್ದಾರೆ.
ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಈ ಬಗ್ಗೆ ಮನವಿ ಸಲ್ಲಿಸಿರುವ ಅವರು, ಶರತ್ ಕಲ್ಯಾಣಿ ಎಂಬಾತ ಫೇಸ್ಬುಕ್ನಲ್ಲಿ ಮಧು ಬಂಗಾರಪ್ಪ ಅವರ ಮನೆಯ ವಿಚಾರವನ್ನು, ವೈಯಕ್ತಿಕ ವಿಚಾರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವಿಕೃತವಾಗಿ ಬರೆಯುವ ಮೂಲಕ ಶಿಕ್ಷಣ ಸಚಿವರ ಹೆಸರಿಗೆ ಕಳಂಕ ತರುವ ಪ್ರಯತ್ನ ಮಾಡಿದ್ದಾನೆ.
ಆದ್ದರಿಂದ, ಸಚಿವರಿಗೆ ಅವಮಾನ ಮಾಡಿರುವ ಶರತ್ ಕಲ್ಯಾಣಿ ಎಂಬಾತನ ವಿರುದ್ಧ ಎಫ್ಐಆರ್ ದಾಖಲಿಸಿ, ತಕ್ಷಣವೇ ಬಂಧಿಸಬೇಕು ಹಾಗೂ ಈತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿಮಾಡಿದ್ದಾರೆ.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡರಾದ ಡಾ. ಶರತ್ ಮರಿಯಪ್ಪ,ಎನ್ಎಸ್ಯುಐ ರಾಜ್ಯ ಕಾರ್ಯದರ್ಶಿ ಬಾಲಾಜಿ ಎಚ್.ಎಸ್, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಆಟೋಕ್, ಭರತ್ ದರ್ಶನ್, ಮಂಜುನಾಥ್ ಸೊರಬ, ದರ್ಶನ್.ಬಿ, ಜಗದೀಶ್, ಕಿಸಾನ್ ಸೆಲ್ ಅಧ್ಯಕ್ಷ ಗಿರೀಶ್, ಪ್ರದೀಪ್, ಸುಕೇಶ್ .ಜಿ, ಕಾಂಗ್ರೆಸ್ ಪದವೀಧರ ಘಟಕದ ಅರ್ಜುನ ಪಂಡಿತ್, ಪುನೀಲ್, ನವೀನ ಮತ್ತಿತರರು ಹಾಜರಿದ್ದರು.