ಬೀದರ್‌ | ಭೀಮಾ ಕೋರೆಗಾಂವ ವಿಜಯೊತ್ಸವ : ಜ.7ರಂದು ಕುಸ್ತಿ ಪಂದ್ಯಾವಳಿ

Date:

Advertisements

ಶೌರ್ಯ ದಿನದ ಸಂಕೇತವಾದ ಭೀಮಾ ಕೋರೆಗಾಂವ್ ವಿಜಯೋತ್ಸವ ಅಂಗವಾಗಿ ಜನವರಿ 7 ರಂದು ದಲಿತ್ ಯುನಿಟಿ ಮೂವ್ಮೆಂಟ್ ವತಿಯಿಂದ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿದೆ.

ಬೀದರ್ ನಗರದ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆಯಲ್ಲಿ ದಲಿತ ಯುನಿಸಿ ಮೂವ್ಮೆಂಟ್ ರಾಜ್ಯಾಧ್ಯಕ್ಷ ಪ್ರಕಾಶ ರಾವಣ ಮಾತನಾಡಿ, “ಜಗತ್ತಿನಲ್ಲಿ ಆಸ್ತಿ, ಅಧಿಕಾರ, ಸಂಪತ್ತಿಗಾಗಿ ಅನೇಕ ಸಂಘರ್ಷಗಳು ನಡೆದಿವೆ, ಆದರೆ ಭೀಮಾ ಕೋರೆಗಾಂವ್ ನಲ್ಲಿ ಸ್ವಾಭಿಮಾನಕ್ಕಾಗಿ ನಡೆದ ಏಕೈಕ ಯುದ್ದವಾಗಿದೆ. ಅಂತಹ ಸ್ವಾಭಿಮಾನಿ ವೀರರಿಗೆ ವಂದನೆ ಸಲ್ಲಿಸುವ ಉದ್ದೇಶದಿಂದ ದಲಿತ್ ಯುನಿಟಿ ಮೂವ್ಮೆಂಟ್ ಕುಸ್ತಿ ಪಂದ್ಯಾವಳಿ ಆಯೋಜಿಸುವ ಮೂಲಕ ವಿಶೇಷವಾಗಿ ಆಚರಿಸಲಾಗುತ್ತಿದೆ” ಎಂದು ತಿಳಿಸಿದರು.

ದಲಿತ್ ಯುನಿಟಿ ಮೂವ್ಮೆಂಟ್ ಸಂಸ್ಥಾಪಕ ವಿನೋದ್ ರತ್ನಾಕರ್ ಮಾತನಾಡಿ, “ಭೀಮಾ ಕೋರೆಗಾಂವ್‌  ನಲ್ಲಿ ಐನೂರು ಮಹರ್ ಸೈನಿಕರು, ಹೋರಾಟಗಾರರು ಆಹಾರ, ನೀರು ಹಾಗೂ ವಿಶ್ರಾಂತಿ ಇಲ್ಲದೆ ಇಪ್ಪತ್ತೆಂಟು ಸಾವಿರ ಪೇಶ್ವೆ ಸೈನ್ಯ ಬಲದ ವಿರುದ್ಧ ನಿರಂತರ ಹನ್ನೆರಡು ಗಂಟೆಗಳ ಕಾಲ ಹೋರಾಡಿದ ಸ್ಮರಣೀಯ ಕದನವಾಗಿದೆ. ಇದೀಗ 206 ನೇ ವರ್ಷದ  ಭೀಮಾ ಕೋರೆಗಾಂವ ವಿಜಯೋತ್ಸವ ನಿಮಿತ್ಯವಾಗಿ ಬೀದರ್‌ ನಲ್ಲಿ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿದೆ. ಆಸ್ತಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು” ಹೇಳಿದರು.

Advertisements

ಸಭೆಯಲ್ಲಿ ಬೀದರ್ ಜಿಲ್ಲಾಧ್ಯಕ್ಷ ಆನಂದ್ ಮಸಿಮಾಡೆ ಸೇರಿದಂತೆ ಪ್ರಮುಖರಾದ ಸಂವಿಧಾನ ಶಿಂಧೆ, ಆಕಾಶ್ ಶಿಂಧೆ, ಸಿದ್ಧಾರ್ಥ್ ಗೌರೆ, ರಾಘವೇಂದ್ರ ಭಾವಿದೊಡ್ಡಿ, ಉಮೇಶ್ ರಮೇಶ್ ಮಾಲೆ, ಬಾಬು ಕೊಹಿರ್, ಸಕ್ಪಾಲ್ ಕಾಂಬ್ಳೆ, ದರ್ಶನ್, ಸುಧಾಕರ್, ಶ್ರೀನಿವಾಸ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

Download Eedina App Android / iOS

X