2024ರ ವರ್ಷದ ಆರಂಭದಲ್ಲೇ ಏಕದಿನ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಡೇವಿಡ್ ವಾರ್ನರ್

Date:

Advertisements

ಪಾಕಿಸ್ತಾನ ವಿರುದ್ಧದ ತಮ್ಮ ವಿದಾಯ ಟೆಸ್ಟ್‌ ಪಂದ್ಯ ಆಡಲು ಸಜ್ಜಾಗುತ್ತಿರುವ ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್, ಏಕದಿನ ಕ್ರಿಕೆಟ್‌ಗೆ ಹಠಾತ್‌ ವಿದಾಯ ಘೋಷಿಸಿದ್ದಾರೆ. ಆ ಮೂಲಕ ವರ್ಷದ ಆರಂಭದ ದಿನವೇ ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ.

2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ಟ್ರೋಫಿ ಜಯಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದ ವಾರ್ನರ್, ಆಗಲೇ ಏಕದಿನ ಕ್ರಿಕೆಟ್‌ ನಿವೃತ್ತಿ ಘೋಷಿಸುವ ಬಗ್ಗೆ ನಿರ್ಧರಿಸಿದ್ದರು. ಏಕದಿನ ವಿಶ್ವಕಪ್ ಟೂರ್ನಿಯಲ್ಲಿ 535 ರನ್ ಗಳಿಸಿದ್ದ ವಾರ್ನರ್ ಆಸ್ಟ್ರೇಲಿಯಾ ಪರ ಹೆಚ್ಚು ರನ್‌ ಗಳಿಸಿದ್ದ ಬ್ಯಾಟರ್ ಕೂಡ ಆಗಿದ್ದರು.161 ಏಕದಿನ ಪಂದ್ಯಗಳಿಂದ ಆಸ್ಟ್ರೇಲಿಯಾದ ಮಾಜಿ ನಾಯಕ 6932 ರನ್ ಗಳಿಸಿದ್ದಾರೆ.

ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವ ದೃಷ್ಟಿಯಿಂದ ವಾರ್ನರ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳಿದ್ದರೂ 2025 ರಲ್ಲಿ ನಡೆಯುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವುದಾಗಿ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಹೇಳಿದ್ದಾರೆ.

Advertisements

ಸಿಡ್ನಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ತಮ್ಮ ಏಕದಿನ ನಿವೃತ್ತಿಯ ಬಗ್ಗೆ ಘೋಷಿಸಿದ್ದಾರೆ.

“ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವ ಸಲುವಾಗಿ ನಾನು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಏಕದಿನ ವಿಶ್ವಕಪ್ ಟೂರ್ನಿಯ ಸಮಯದಲ್ಲೇ ನಾನು ಈ ಬಗ್ಗೆ ಕ್ರಿಕೆಟ್ ಮಂಡಳಿಗೆ ತಿಳಿಸಿದ್ದೆ. ಭಾರತದ ವಿರುದ್ಧ ಅದರ ನೆಲದಲ್ಲೇ ವಿಶ್ವಕಪ್ ಗೆದ್ದಿರುವುದು ದೊಡ್ಡ ಸಾಧನೆಯಾಗಿದೆ,” ಎಂದು ಹೇಳಿದ್ದಾರೆ.

ಏಕದಿನ ಕ್ರಿಕೆಟ್‌ಗೆ ಡೇವಿಡ್ ವಾರ್ನರ್ ವಿದಾಯ ಹೇಳಿದ್ದರೂ ಕೂಡ, “2025ರಲ್ಲಿ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾಕ್ಕೆ ಆರಂಭಿಕ ಆಟಗಾರರ ಅವಶ್ಯಕತೆ ಕಂಡುಬಂದರೆ ನಿವೃತ್ತಿ ನಿರ್ಧಾರದಿಂದ ವಾಪಸ್ ಬಂದು ಆಡುತ್ತೇನೆ” ಎಂದೂ ತಿಳಿಸಿದ್ದಾರೆ.

“ಮುಂದಿನ ದಿನಗಳಲ್ಲಿ ಏಕದಿನ ರೂಪದ ಚಾಂಪಿಯನ್ಸ್ ಟ್ರೋಫಿ ಬರುತ್ತದೆ ಎಂಬುದು ನನಗೆ ತಿಳಿದಿದೆ. ಈ ಎರಡು ವರ್ಷಗಳಲ್ಲಿ ನಾನು ಉತ್ತಮ ಕ್ರಿಕೆಟ್ (ಫ್ರಾಂಚೈಸಿ ಲೀಗ್) ಆಡಿದರೆ ಮತ್ತು ಆಸ್ಟ್ರೇಲಿಯಾಕ್ಕೆ ಆರಂಭಿಕ ಆಟಗಾರನ ಸಮಸ್ಯೆ ಕಂಡುಬಂದರೆ ತಂಡಕ್ಕೆ ನಾನು ಲಭ್ಯವಾಗುತ್ತೇನೆ” ಎಂದು ಡೇವಿಡ್ ವಾರ್ನರ್ ಹೇಳಿದ್ದಾರೆ.

2009 ಜನವರಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಹೊಬರ್ಟ್‌ನಲ್ಲಿ ನಡೆದಿದ್ದ ಪಂದ್ಯದ ಮೂಲಕ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಡೇವಿಡ್ ವಾರ್ನರ್ 97.26ರ ಸ್ಟ್ರೆಕ್ ರೇಟ್‌ನಲ್ಲಿ 161 ಪಂದ್ಯಗಳಿಂದ 6932 ರನ್ ಗಳಿಸಿದ್ದು, 22 ಶತಕ ಹಾಗೂ 33 ಅರ್ಧಶತಕ ಸಿಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X