ಯಾದಗಿರಿ | ರೈತ ಬೆಳೆದ ಕಲ್ಲಂಗಡಿ ಹಣ್ಣನ್ನು ಕಟ್‌ ಮಾಡುವ ಮೂಲಕ ಹೊಸ ವರ್ಷಾಚರಣೆ

Date:

Advertisements

ರೈತ ಬೆಳೆದ ಕಲ್ಲಂಗಡಿ ಹಣ್ಣನ್ನು ಕಟ್‌ ಮಾಡುವ ಮೂಲಕ ಸಾಮಾಜಿಕ ಹೋರಾಟಗಾರ ಉಮೇಶ್‌ ಕೆ ಮುದ್ನಾಳ್ ಹೊಸ ವರ್ಷಕ್ಕೆ ಸ್ವಾಗತ ಕೋರಿದರು.

“ಯಾದಗಿರಿ ತಾಲೂಕಿನ ಮುದ್ನಾಳ್ ಗ್ರಾಮದ ಹಣಮಂತಪ್ಪ ಚಂದಪ್ಪ ಕೋಳಿ ಇವರ ಜಮೀನಿನಲ್ಲಿ
ಸುಮಾರು 5 ವರ್ಷಗಳಿಂದ ಈ ಕಾರ್ಯವನ್ನು ನಾವು ನೈಸರ್ಗಿಕವಾಗಿ ಮತ್ತು ವಿನೂತನವಾಗಿ ಹೊಸ ವರ್ಷಾಚರಣೆ ಮಾಡುತ್ತಾ ಬಂದಿದ್ದೇವೆ. ಕೇಕ್ ಕತ್ತರಿಸುವುದು ಬೇಡ ಎಣ್ಣೆ ಪಾರ್ಟಿ ಬೇಡವೇ ಬೇಡ. ಗುಂಡಿನ ಪಾರ್ಟಿ ಮಾಡಿ ದುಂದು ವೆಚ್ಚ ಮಾಡುವುದಕ್ಕಿಂತ ರೈತ ಬೆಳೆದ ಹಣ್ಣು ಹಂಪಲು ಮತ್ತು ತರಕಾರಿ ಖರೀದಿಸಿ ಸೇವನೆ ಮಾಡಿ ಹೊಸ ವರ್ಷ ಆಚರಿಸಿ” ಎಂದು ಕರೆ ನೀಡಿದರು.

“ಇತ್ತೀಚಿನ ದಿನಗಳಲ್ಲಿ ಹೊಸ ವರ್ಷ ಸಮೀಸುತ್ತಿದ್ದಂತೆ ಬಹಳಷ್ಟು ಯುವಜನರು ಮದ್ಯಪಾನ ಸೇರಿದಂತೆ ಇತರೆ ದುಶ್ಚಟಕ್ಕೆ ಬಲಿಯಾಗುವುದು ಹೆಚ್ಚಾಗಿದೆ. ಯುವಜನರು ಈ ದುಶ್ಚಟದಿಂದ ದೂರವಿರಬೇಕು. ಗುಣಮಟ್ಟದ ಹಣ್ಣು ಹಂಪಲು ತಿನ್ನುವುದರಿಂದ ಯುವಜನರು ಆರೋಗ್ಯದಿಂದ ಸದೃಢರಾಗುತ್ತಾರೆ” ಎಂದು ಯುವಜನರಿಗೆ ಕಿವಿಮಾತು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | 48 ಸ್ಥಳಗಳಲ್ಲಿ ಜೀಬ್ರಾ ಕ್ರಾಸಿಂಗ್ ನಿರ್ಮಾಣ: ಎಂಸಿಸಿ

“ಈ ವರ್ಷ ಬರಗಾಲದಿಂದ ರೈತರು ಕಂಗಲಾಗಿದ್ದಾರೆ. ಅವರು ಕಷ್ಟವನ್ನು ಎದುರಿಸುತ್ತಿದ್ದಾರೆ. ಹೀಗಾಗಿ ಅವರ ಕಷ್ಟವನ್ನು ನಾವು ನೀಗಿಸಬೇಕೆಂದರೆ ಪ್ರತಿಯೊಬ್ಬರೂ ಅವರು ಬೆಳೆದಿರುವ ಬೆಳೆಯನ್ನು ಖರೀದಿಸಿ ಹೊಸ ವರ್ಷಾಚರಣೆ ಮಾಡಿದರೆ ಮುಂದಿನ ದಿನಗಳಲ್ಲಿ ಮುಂದೆ ಬರಲು ಸಾಧ್ಯವಾಗುತ್ತದೆ” ಎಂದರು.

ಈ ಸಂದರ್ಭದಲ್ಲಿ ಸುನಂದಾ, ಪವನ್, ವಿಶಾಲ್, ಹರ್ಷಿತಾ, ರವಿ, ಅನಿಲ್, ಶಿವು, ವಿಜಯ, ಪ್ರಭು, ಯಲಾಲಿಂಗ, ಜಗದೀಶ್, ಅಂಪಯ್ಯ, ಸಾಬರೆಡ್ಡಿ, ನೇತ್ರಾ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X