ಹಾವೇರಿ | ಭಾರತೀಯ ಇತಿಹಾಸದಲ್ಲಿ ಭೀಮಾ ಕೋರೆಗಾಂವ್ ವಿಜಯೋತ್ಸವ ಅವಿಸ್ಮರಣೀಯ: ಉಡಚಪ್ಪ ಮಳಗಿ

Date:

Advertisements

ಭಾರತೀಯ ಇತಿಹಾಸದಲ್ಲಿ ಭೀಮಾ ಕೋರೆಗಾಂವ್ ವಿಜಯೋತ್ಸವ ಅವಿಸ್ಮರಣೀಯವಾಗಿದೆ. ಅಸ್ಪೃಶ್ಯತೆ ವಿರುದ್ದ ನಡೆದ ಸಂಘರ್ಷ ಸ್ವಾಭಿಮಾನದ ಸಂಕೇತವಾಗಿದೆ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ರಾಜ್ಯಾಧ್ಯಕ್ಷ ಉಡಚಪ್ಪ ಮಾಳಗಿ ಹೇಳಿದರು.

ಹಾವೇರಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ನಗರದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯಿಂದ ಆಯೋಜಿಸಿದ ಭೀಮಾ ಕೋರೆಗಾಂವ್ ವಿಜಯ ದಿವಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

“ಅಸ್ಪೃಶ್ಯತೆಯ ನೋವುನ್ನುಂಡು ಅನ್ಯಾಯದ ವಿರುದ್ಧ ಹೋರಾಡಿ ಜೀವತೆತ್ತ 21 ಮಂದಿ ಮಹಾರ್ ಸೈನಿಕರ ವೀರ ಬಲಿದಾನದ ಚರಿತ್ರೆಯನ್ನು ಶೋಷಿತ ಸಮುದಾಯ ಮರೆಯಲು ಸಾಧ್ಯವಿಲ್ಲ. ಭೀಮಾ ಕೋರೆಗಾಂವ ಐತಿಹಾಸಿಕ ಘಟನೆಯಿಂದ ನಮ್ಮ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಪ್ರತಿಭಟಿಸಲು ನಾವೆಲ್ಲರೂ ಸಿದ್ಧರಾಗೋಣ” ಎಂದು ಕರೆ ನೀಡಿದರು.

Advertisements

ಲಿಡ್ಕರ್ ಮಾಜಿ ಉಪಾಧ್ಯಕ್ಷ ಡಿ.ಎಸ್.ಮಾಳಗಿ ಮಾತನಾಡಿ,”ಭೀಮಾ ಕೋರೆಗಾಂವ ವಿಜಯೋತ್ಸವ ನಮಗೆ ಪ್ರೇರಣೆಯಾಗಬೇಕು. ಸ್ವಾಭಿಮಾನದ ಬದುಕಿಗೆ ನಾವು ಬದ್ಧರಾಗೋಣ. ಭೀಮಾ ಸೈನಿಕರ ಹೋರಾಟದ ಸ್ಫೂರ್ತಿ ನಮ್ಮೆಲ್ಲರಿಗೂ ಆದರ್ಶವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಬಿಹಾರ | ದಲಿತ ಮಹಿಳೆಗೆ ಮನಬಂದಂತೆ ಲಾಠಿಯಿಂದ ಬಡಿದ ಪೊಲೀಸ್; ವಿಡಿಯೋ ವೈರಲ್

ಕಾರ್ಯಕ್ರಮದಲ್ಲಿ ಮುಖಂಡರಾದ ಬಸವರಾಜ ಹೇಡಿಗೊಂಡ,  ಲಿಂಗರಾಜ ದಂಡೆಮ್ಮನವರ, ಬಸವರಾಜ ಮಾಸೂರ, ಮರಿಯಪ್ಪ ನಡುವಿನಮನಿ, ಶೆಟ್ಟಿ ವಿಭೂತಿ, ರೆಹಮತವುಲ್ಲಾ ಮುಲ್ಲಾ, ಮಂಜಪ್ಪ ಮರೋಳ, ರಮೇಶ ಜಾಲಿಹಾಳ, ಬಸವರಾಜ ಕಾಳೆ, ಸುನೀಲ ಭೇಟಗೇರಿ, ಹನಮಂತಪ್ಪ ಹುಚ್ಚಣ್ಣನವರ, ಚಿಕ್ಕಪ್ಪ ಆಡೂರ, ಮಂಜಪ್ಪ ಹರಪನಹಳ್ಳಿ, ಹನಮಂತಪ್ಪ ಹರಿಜನ, ಶಂಭಲಿಂಗಪ್ಪ ದೀವಟಗೇರ, ಪ್ರೇಮಾ ಹರಿಜನ ಸೇರಿದಂತೆ ವಿವಿಧ ಸಂಘಟನೆಯ ಮುಖಂಡರು ಹಾಗೂ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X