ಜಪಾನ್‌ | ಒಂದೇ ದಿನ 155 ಬಾರಿ ಕಂಪಿಸಿದ ಭೂಮಿ: 30 ಮಂದಿ ಮೃತ್ಯು; ಅಪಾರ ಆಸ್ತಿ-ಪಾಸ್ತಿ ಹಾನಿ

Date:

Advertisements

ತಂತ್ರಜ್ಞಾನದಲ್ಲಿ ಮುಂದುವರಿದಿರುವ ದೇಶವಾಗಿ ಗುರುತಿಸಿಕೊಂಡಿರುವ ಜಪಾನ್‌ನಲ್ಲಿ ಹೊಸ ವರ್ಷದ ಮೊದಲ ದಿನವೇ ಸಂಭವಿಸಿದ ಭಾರೀ ಭೂಕಂಪದಲ್ಲಿ ಈವರೆಗೆ ಒಟ್ಟು 30 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಒಂದೇ ದಿನ 155 ಬಾರಿ ಭೂಮಿ ಕಂಪಿಸಿದ್ದು, ಅಪಾರ ಸಾವು-ನೋವಿಗೆ ಕಾರಣವಾಗಿದೆ. ಈ ನಡುವೆ ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಅವಶೇಷಗಳ ಅಡಿಯಲ್ಲಿರುವವರನ್ನು ಪತ್ತೆ ಹಚ್ಚಲು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಜಪಾನ್‌ನ ಅಧಿಕಾರಿಗಳು ತಿಳಿಸಿದ್ದಾರೆ.

Japan earthquake 1

ರಿಕ್ಟರ್ ಮಾಪಕದಲ್ಲಿ 7.4ರಿಂದ 7.6 ರವರೆಗೂ ಭೂಕಂಪನ ಸಂಭವಿಸಿದ್ದು, ಜಪಾನ್ ನ ಈಶಾನ್ಯ ಭಾಗದ ನನಾವೋನಲ್ಲಿ ಭೂ ಕಂಪನದ ಕೇಂದ್ರ ಬಿಂದು ವರದಿಯಾಗಿದೆ. ಈ ಕಂಪನದಲ್ಲಿ ಕನಿಷ್ಠ 30 ಮಂದಿ ಸಾವನ್ನಪ್ಪಿದ್ದು, ಮನೆಗಳಿಗೆ ಹಾನಿಯಾದ ಪರಿಣಾಮ 32 ಸಾವಿರಕ್ಕೂ ಅಧಿಕ ಮಂದಿ ಭೂಕಂಪನದಿಂದ ಸಂತ್ರಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ.

Advertisements

ಹೊನ್ಶುವಿನ ಮುಖ್ಯ ದ್ವೀಪದಲ್ಲಿರುವ ಇಶಿಕಾವಾ ಪ್ರಾಂತ್ಯದಲ್ಲಿ 7.5 ತೀವ್ರತೆಯ ಭೂಕಂಪವು ಒಂದು ಮೀಟರ್ ಎತ್ತರದ ಸುನಾಮಿ ಅಲೆಗಳನ್ನು ಸೃಷ್ಟಿಸಿತ್ತು. ಭೂಕಂಪದ ತೀವ್ರತೆಗೆ ಕಟ್ಟಡಗಳು ನೆಲಕ್ಕುರುಳಿವೆ, ಪ್ರಮುಖ ಬಂದರೊಂದರಲ್ಲಿ ಬೆಂಕಿ ಅವಘಡ ಕೂಡ ಸಂಭವಿಸಿದ್ದು, ರಸ್ತೆಗಳು ಬಿರುಕು ಬಿಟ್ಟಿರುವುದರಿಂದ ವಾಹನ ಸಂಚಾರಕ್ಕೆ ತೊಡಕುಂಟಾಗಿದೆ.

jaapan

“ಜಪಾನ್‌ನಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದಿಂದಾಗಿ ಹಲವಾರು ಸಾವುನೋವುಗಳು, ಕಟ್ಟಡ ಕುಸಿತಗಳು ಮತ್ತು ಬೆಂಕಿ ಸೇರಿದಂತೆ ಬಹಳ ವ್ಯಾಪಕ ಹಾನಿಯಾಗಿದೆ” ಎಂದು ವಿಪತ್ತು ನಿರ್ವಹಣಾ ಸಭೆಯ ಬಳಿಕ ಪ್ರಧಾನ ಮಂತ್ರಿ ಫ್ಯೂಮಿಯೊ ಕಿಶಿಡಾ ತಿಳಿಸಿದ್ದಾರೆ.

ಜಪಾನ್

ವಾಜಿಮಾ ಬಂದರಿನಲ್ಲಿ ಏಳು ಮಂದಿ ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ ಎಂದು ಕ್ಯೋಡೋ ಸುದ್ದಿ ಸಂಸ್ಥೆ ವರದಿ ಮಾಡಿದೆ. ಏರಿಯಲ್ ನ್ಯೂಸ್ ಫೂಟೇಜ್ ಬಂದರಿನಲ್ಲಿ ಭೂಕಂಪದಿಂದ ಬೆಂಕಿ ಅವಘಡ ಸಂಭವಿಸಿತು. ಏಳು ಅಂತಸ್ತಿನ ಕಟ್ಟಡವು ಕುಸಿದಿದೆ. ಈ ಪ್ರದೇಶದಲ್ಲಿ ಸುಮಾರು 45,000 ಕುಟುಂಬಗಳು ವಿದ್ಯುತ್‌ ಸಮಸ್ಯೆಯಿಂದ ಕತ್ತಲಲ್ಲಿ ಜೀವನ ನಡೆಸುವಂತಾಗಿದೆ ಎಂದು ತಿಳಿಸಿದೆ. ಭೂಕಂಪದ ತೀವ್ರತೆ 7.5ರಷ್ಟಿತ್ತು ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ (ಯುಎಸ್‌ಜಿಎಸ್) ತಿಳಿಸಿದೆ.

ಜಾಪನ್

ಹೊಸ ವರ್ಷದ ಶುಭಾಶಯ ಕಾರ್ಯಕ್ರಮ ರದ್ದುಗೊಳಿಸಿದ ಚಕ್ರವರ್ತಿ
ಹೊಸ ವರ್ಷದ ಹಿನ್ನೆಲೆಯಲ್ಲಿ ಜಪಾನಿನ ಚಕ್ರವರ್ತಿ ನರುಹಿಟೊ ಮತ್ತು ಅವರ ಕುಟುಂಬ ಸದಸ್ಯರು ಭಾಗವಹಿಸಲು ಯೋಜಿಸಲಾಗಿದ್ದ ಸಾರ್ವಜನಿಕ ಹೊಸ ವರ್ಷದ ಶುಭಾಶಯ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಸಾರ್ವಜನಿಕರು ಭೂಕಂಪದಿಂದ ಸಂತ್ರಸ್ತರಾದವರೊಂದಿಗೆ ಸಹಕರಿಸುವಂತೆ ಚಕ್ರವರ್ತಿಯ ಕುಟುಂಬ ತಿಳಿಸಿರುವುದಾಗಿ ಎಂದು ಜಪಾನಿನ ಇಂಪೀರಿಯಲ್ ಹೌಸ್‌ ಹೋಲ್ಡ್ ಏಜೆನ್ಸಿಯು ಮಾಹಿತಿ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

Download Eedina App Android / iOS

X