ಜಪಾನ್‌ನಲ್ಲಿ ಮತ್ತೆ ಭಾರೀ ಅವಘಡ | ಲ್ಯಾಂಡಿಂಗ್ ವೇಳೆ ಹೊತ್ತಿ ಉರಿದ 360ಕ್ಕೂ ಹೆಚ್ಚು ಜನರಿದ್ದ ವಿಮಾನ

Date:

Advertisements

ಹೊಸ ವರ್ಷದ ಮೊದಲ ದಿನವೇ ಭಯಾನಕ ಭೂಕಂಪನದಿಂದ ಸುದ್ದಿಯಾಗಿದ್ದ ಜಪಾನ್‌ನಲ್ಲಿ ಮತ್ತೊಂದು ಭಾರೀ ಅವಘಡ ಸಂಭವಿಸಿದೆ.

ರನ್‌ವೇಯಲ್ಲಿ ಲ್ಯಾಂಡ್‌ ಆಗುತ್ತಿದ್ದಾಗ ವಿಮಾನವೊಂದು ಇನ್ನೊಂದು ವಿಮಾನಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಘಟನೆ ಟೋಕಿಯೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಜಪಾನಿನ ಟೋಕಿಯೋದಲ್ಲಿರುವ ಹನೆಡಾ ವಿಮಾನ ನಿಲ್ದಾಣದಲ್ಲಿ ಈ ಅವಘಡ ಸಂಭವಿಸಿದ್ದು, ವಿಮಾನದಲ್ಲಿ 360ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು ಎಂದು ಜಪಾನಿನ ಮಾಧ್ಯಮಗಳು ವರದಿ ಮಾಡಿದೆ. ಈವರೆಗೆ ಸಾವು ನೋವಿನ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.

Advertisements

ವಿಮಾನದಲ್ಲಿದ್ದ ಎಲ್ಲಾ 379 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸ್ಥಳಾಂತರಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆಯನ್ನು ಉಲ್ಲೇಖಿಸಿ ಮಾಧ್ಯಮ ವರದಿಗಳು ವರದಿ ಮಾಡಿವೆ.

ಜಪಾನ್ ಏರ್‌ಲೈನ್ಸ್‌ನ 516, ಸ್ಥಳೀಯ ಸಮಯ 16:00 ಕ್ಕೆ ನ್ಯೂ ಚಿಟೋಸ್ ವಿಮಾನ ನಿಲ್ದಾಣದಿಂದ ಹೊರಟಿದ್ದು, 17:40 ಕ್ಕೆ ಹನೆಡಾದಲ್ಲಿ ಇಳಿಯಲು ನಿಗದಿಯಾಗಿತ್ತು. ಲ್ಯಾಂಡಿಗ್ ವೇಳೆ ಕೋಸ್ಟ್‌ ಗಾರ್ಡ್‌ ವಿಮಾನಕ್ಕೆ ಪ್ರಯಾಣಿಕರ ವಿಮಾನ ಡಿಕ್ಕಿ ಹೊಡೆದ ಪರಿಣಾಮ  ಈ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ.

ಹೊಸ ವರ್ಷದ ಮೊದಲ ದಿನ ಸಂಭವಿಸಿದ್ದ ಭೂಕಂಪದ ಸಂತ್ರಸ್ತರಿಗೆ ನೆರವನ್ನು ತಲುಪಿಸಲು ಜಪಾನ್ ಕೋಸ್ಟ್ ಗಾರ್ಡ್ DHC-8-315Q ವಿಮಾನವು ನಿಗಾಟಾಗೆ ಹೊರಡಲು ಕಾಯುತ್ತಿರುವಾಗ ಜಪಾನ್ ಏರ್‌ಲೈನ್ಸ್ ವಿಮಾನ ಡಿಕ್ಕಿ ಹೊಡೆದಿರುವುದಾಗಿ ತಿಳಿದುಬಂದಿದೆ. ಘಟನೆಯಿಂದಾಗಿ ಕೋಸ್ಟ್ ಗಾರ್ಡ್ ವಿಮಾನವು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಜೊತೆಗೆ ಪ್ರಯಾಣಿಕರಿದ್ದ ವಿಮಾನ ಕೂಡ ಬೆಂಕಿಯ ಕೆನ್ನಾಲಿಗೆಗೆ ನಾಶವಾಗಿದೆ.

ಕೋಸ್ಟ್ ಗಾರ್ಡಿಗೆ ಸೇರಿದ ವಿಮಾನದಲ್ಲಿ ಕ್ಯಾಪ್ಟನ್ ಸಹಿತ ಆರು ಮಂದಿ ಸಿಬ್ಬಂದಿ ಇದ್ದರು ಎಂದು ತಿಳಿದುಬಂದಿದೆ. ಕ್ಯಾಪ್ಟನ್ ಬಚಾವಾಗಿದ್ದು, ಉಳಿದ ಐದು ಮಂದಿಯ ವಿವರ ಪತ್ತೆಯಾಗಿಲ್ಲ ಎಂದು ಕೋಸ್ಟ್ ಗಾರ್ಡ್ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿರುವುದಾಗಿ ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮೇಲೆ ಅಮೆರಿಕ ದ್ವೇಷ: ಟ್ರಂಪ್‌ಗೆ ನೊಬೆಲ್ ನೀಡುವಂತೆ ಮೋದಿ ಶಿಫಾರಸು ಮಾಡಿದ್ರೆ ಎಲ್ಲವೂ ಸರಿಹೋಗತ್ತ?

ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರನ್ನು ಶಿಫಾರಸು ಮಾಡುವುದಾಗಿ...

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

Download Eedina App Android / iOS

X