ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಪೊಲೀಸರು, ಸೈನಿಕರಿಗೆ ಗಾಯ

Date:

Advertisements

ಮಣಿಪುರದಲ್ಲಿ ಮಂಗಳವಾರ (ಜ.2) ಮರುಕಳಿಸಿದ ಹಿಂಸಾಚಾರದಲ್ಲಿ ಬಂಡುಕೋರರು ದಾಳಿ ನಡೆಸಿದ ಪರಿಣಾಮ ನಾಲ್ವರು, ಒರ್ವ ಬಿಎಸ್‌ಎಫ್‌ ಸೈನಿಕ ಒಳಗೊಂಡು ಸ್ಥಳೀಯ ಪೊಲೀಸರು ಗಾಯಗೊಂಡಿದ್ದಾರೆ

ಮಣಿಪುರದ ತೌಬಾಲ ಜಿಲ್ಲೆಯ ಅಲ್ಪಸಂಖ್ಯಾತರು ಹೆಚ್ಚಿರುವ ಪ್ರದೇಶದಲ್ಲಿ ಅಪರಿಚಿತರಿಂದ ನಾಲ್ವರು ಸ್ಥಳೀಯರು ಹತ್ಯೆಯಾದ ಮರುದಿನ ಈ ಘಟನೆ ಸಂಭವಿಸಿದೆ.

ಡಿ.30 ರಂದು ಮಣಿಪುರದ ಮೊರೆಯಲ್ಲಿ ಪೊಲೀಸ್ ಕಮಾಂಡೊಗಳು ಹಾಗೂ ಅಪರಿಚಿತ ಬಂದೂಕುದಾರಿಗಳ ನಡುವೆ ನಡೆದ ತೀವ್ರ ಗುಂಡಿನ ಚಕಮಕಿಯಲ್ಲಿ ಒರ್ವ ಪೊಲೀಸ್‌ ತೀವ್ರವಾಗಿ ಗಾಯಗೊಂಡಿದ್ದರು. ಅದೇ ದಿನ ಕಂಗೋಪೊಕ್ಪಿ ಜಿಲ್ಲೆಯಲ್ಲಿ ಮೈತೇಯಿ ಹಾಗೂ ಕುಕಿ ಗುಂಪುಗಳ ನಡುವೆ ನಡೆದ ಇನ್ನೊಂದು ಹಿಂಸಾಚಾರ ಘಟನೆಯಲ್ಲಿ ಮೈತೇಯಿ ಸಮುದಾಯದ ಯುವಕನೊಬ್ಬ ಮೃತಪಟ್ಟಿದ್ದ.

Advertisements

ಡಿಸೆಂಬರ್‌ 4ರಂದು ತೆಂಗೋಪಾಲ್‌ ಜಿಲ್ಲೆಯಲ್ಲಿ ನಡೆದ ಹಿಂಸಾಚಾರದಲ್ಲಿ 13 ಮಂದಿ ಸಾವಿಗೀಡಾಗಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅತ್ತ ಅತಿಥಿ ಉಪನ್ಯಾಸಕರು ಇತ್ತ ಸರಕಾರ; ನಡುವೆ ನಲುಗದಿರಲಿ ವಿದ್ಯಾರ್ಥಿಗಳು

ಇತ್ತೀಚಿಗೆ ಮತ್ತೆ ಮರುಕಳಿಸಿರುವ ಹಿಂಸಾಚಾರವನ್ನು ಖಂಡಿಸಿರುವ ಮಣಿಪುರ ಮುಖ್ಯಮಂತ್ರಿ ಎನ್‌ ಬಿರೇನ್‌ ಸಿಂಗ್‌ ಗಲಭೆಕೋರರನ್ನು ಬಂಧಿಸುವ ವಿಶ್ವಾಸವ್ಯಕ್ತಪಡಿಸಿದ್ದು ಕಾನೂನಿನ ನಿಯಮದಂತೆ ತಪ್ಪಿತಸ್ಥರನ್ನು ಬಂಧಿಸಿ ಶಿಕ್ಷೆ ನೀಡುವುದಾಗಿ ಭರವಸೆ ನೀಡಿದ್ದಾರೆ. ಹಾಗೆಯೇ ಗಲಭೆಪೀಡಿತ ಪ್ರದೇಶಗಳಲ್ಲಿ ಶಾಂತಿಸ್ಥಾಪನೆಗೆ ಮನವಿ ಮಾಡಿದ್ದಾರೆ.

ಸದ್ಯ ಪೂರ್ವ ಇಂಪಾಲ್, ಪಶ್ಚಿಮ ಇಂಪಾಲ್, ಕಾಕ್ಚಿಂಗ್ ಹಾಗೂ ಬಿಷ್ಣೂಪುರ ಜಿಲ್ಲೆಗಳಲ್ಲಿ ಕರ್ಫ್ಯೂ ಮುಂದುವರೆಸಲಾಗಿದೆ.

ಕಳೆದ 6 ತಿಂಗಳಿನಿಂದ ಮಣಿಪುರದಲ್ಲಿ ನಡೆದ ಎರಡು ಕೋಮುಗಳ ನಡುವೆ ಘರ್ಷಣೆಯಲ್ಲಿ 200 ಕ್ಕೂ ಹೆಚ್ಚು ಮಂದಿ ಮೃತಪಟ್ಟು 60 ಸಾವಿರಕ್ಕೂ ಹೆಚ್ಚು ಮಂದಿ ವಸತಿಯಿಲ್ಲದೆ ನಿರಾಶ್ರಿತರಾಗಿದ್ದಾರೆ. ಹಿಂಸಾಚಾರದಿಂದ ವಸತಿ ಕಳೆದುಕೊಂಡಿರುವವರೆಗೆ ಹಾಗೂ ಸ್ಥಳಾಂತರವಾದವರು ಹಿಂತಿರುಗಲು ಸಿಎಂ ಬಿರೇನ್‌ ಸಿಂಗ್ ಆರ್ಥಿಕ ಪ್ಯಾಕೇಜ್‌ ಘೋಷಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X