ಬೆಳಗಾವಿ | ಮಕ್ಕಳು ಹೂವು ಕಿತ್ತಿದ್ದಕ್ಕೆ ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿದ ಮಾಲೀಕ

Date:

Advertisements

ಅಂಗನವಾಡಿ ಮಕ್ಕಳು ಮನೆ ಆವರಣದಲ್ಲಿದ್ದ ಗಿಡಗಳಲ್ಲಿ ಹೂವು ಕಿತ್ತಿದ್ದಕ್ಕೆ, ವಿಕೃತ ಮನೆ ಮಾಲೀಕನೊಬ್ಬ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿರುವ ದುರ್ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಇತ್ತೀಚೆಗೆ, ಮಹಿಳೆಯರ ಮೇಲಿನ ದೌರ್ಜನ್ಯಗಳಿಂದಲೇ ಬೆಳಗಾವಿ ಕುಖ್ಯಾತಿ ಗಳಿಸುತ್ತಿದೆ. ಇದೀಗ, ಮತ್ತೊಂದು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ನಡೆದಿದೆ.

ಬೆಳಗಾವಿ ತಾಲೂಕಿನ ಬಸುರ್ಗೆ ಗ್ರಾಮದಲ್ಲಿ ಸೋಮವಾರ ಘಟನೆ ನಡೆಸಿದೆ. ಅಂಗನವಾಡಿ ಸಮೀಪವಿದ್ದ ಮನೆಯ ಅಂಗಳದಲ್ಲಿ ಹೂವಿನ ಗಿಡಗಳಿದ್ದವು. ಅವುಗಳಲ್ಲಿದ್ದ ಹೂವುಗಳನ್ನು ಅಂಗನವಾಡಿಯ ಮಕ್ಕಳು ಕಿತ್ತಿದ್ದಾರೆ.

Advertisements

ಇದರಿಂದ ಉದ್ರಿಕ್ತಗೊಂಡ ದುಷ್ಟ ಮನಸ್ಸಿನ ಮನೆ ಮಾಲೀಕ ಕಲ್ಯಾಣಿ ಮೋರೆ ಎಂಬಾತ ಮಕ್ಕಳನ್ನು ಹೊಡೆಯಲು ಮುಂದಾಗಿದ್ದಾನೆ. ಮಧ್ಯ ಪ್ರವೇಶಿಸಿದ ಅಂಗನವಾಡಿ ಸಹಾಯಕಿ ಸುಗಂಧಾ ಮೋರೆ ಅವರು ಮಕ್ಕಳನ್ನು ಹೊಡೆಯದಂತೆ ತಡೆದಿದ್ದಾರೆ. ಇದರಿಂದ ವಿಚಲಿತನಾದ ಕಲ್ಯಾಣಿ ಮೋರೆ ಕುಡುಗೋಲಿನಿಂದ ಸುಗಂಧಾ ಮೋರೆ ಅವರ ಮೂಗನ್ನೇ ಕತ್ತರಿಸಿದ್ದಾನೆ.

ಈ ಸುದ್ದಿ ಓದಿದ್ದೀರಾ?: ಕಾಂಗ್ರೆಸ್ ಸರ್ಕಾರ ಮುಂದಿನ 16ನೇ ಹಣಕಾಸು ಆಯೋಗದ ಮುಂದೆ ಯಾವ ರೀತಿ ತನ್ನ ಬೇಡಿಕೆ ಮಂಡಿಸಲಿದೆ?

ಸಂತ್ರಸ್ತ ಮಹಿಳೆಯನ್ನು ಆಸ್ಪತ್ರೆಗೆ ದಾಖಲಾಸಲಾಗಿದೆ. ಮೂಗು ಕತ್ತರಿಸಿದ್ದರಿಂದ ಆಕೆಯ ಶ್ವಾಸಕೋಶಕ್ಕೂ ರಕ್ತ ಹೋಗಿದೆ ಎಂದು ತಿಳಿದುಬಂದಿದೆ. ಆಕೆ ಸಾವು-ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.

ಘಟನೆ ನಡೆದು ಎರಡು ದಿನಗಳಾಗಿವೆ. ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೂ, ಆರೋಪಿಯನ್ನು ಪೊಲೀಸರು ಬಂಧಿಸಿಲ್ಲವೆಂದು ಸಂತ್ರಸ್ತೆಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

Download Eedina App Android / iOS

X