ಮೈಸೂರು | ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಶೀಘ್ರವೇ ಕಠಿಣ ಕ್ರಮ: ಸಚಿವ ಶಿವರಾಜ್ ತಂಗಡಗಿ

Date:

Advertisements

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಶೀಘ್ರವೇ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಶ್ರೀರಂಗಪಟ್ಟಣದಲ್ಲಿ ಒಂದು ಸಮುದಾಯದ ಕುರಿತು ಅವಹೇಳನವಾಗಿ ಮಾತನಾಡಿರುವ ಕಲ್ಲಡ್ಕ ಪ್ರಭಾಕರ ಭಟ್ಟ ಬಗ್ಗೆ ಈಗಾಗಲೇ ಸರಕಾರದಲ್ಲಿ ಚರ್ಚೆ ನಡೆದಿದೆ . ಯಾರೇ ತಪ್ಪು ಮಾಡಿದರೂ ನಮ್ಮ ಆಡಳಿತದಲ್ಲಿ ಶಿಕ್ಷೆ ಆಗಬೇಕು . ಆತ ಏನು ಮೇಲಿಂದ ಇಳಿದು ಬಂದಿಲ್ಲ. ಕಾನೂನಿಗಿಂತ ಯಾರೂ ದೊಡ್ಡವರಿಲ್ಲ, ಒಂದು ಸಮುದಾಯದ ಮಹಿಳೆಯರ ವಿರುದ್ದ ಹೇಳಿಕೆ ನೀಡಿದ್ದು ಖಂಡನೀಯ” ಎಂದರು.

“ಸಿಎಂ ಸಿದ್ಧರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಯಾರೂ ದೊಡ್ಡವರಲ್ಲ. ಯಾರನ್ನು ಪೋಷಣೆ ಮತ್ತು ಪಾಲನೆ ಮಾಡುವ ಪ್ರಶ್ನೆಯೇ ಇಲ್ಲ. ತಪ್ಪು ಮಾಡಿದವರ ಮೇಲೆ ಕ್ರಮ ಜರುಗಿಸಲಾಗುವುದು, ಈ ವಿಚಾರದಲ್ಲಿ ಹೊಂದಾಣಿಕೆಯ ಪ್ರಶ್ನೆಯೇ ಇಲ್ಲ. ನಾಲ್ಕು ದಿನ ತಡವಾದರೂ ಆತನ ಮೇಲೆ ಕ್ರಮ ಆಗೇ ಆಗುತ್ತದೆ” ಎಂದು ಹೇಳಿದರು.

Advertisements

ಕನ್ನಡ ಪರ ಹೋರಾಟಕ್ಕೆ ಬೆಂಬಲ ಇದೆ:

ಕನ್ನಡ ಹೋರಾಟಗಾರರ ಬಂಧನ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, “ಹೋರಾಟ ಮಾಡಲು ನಮ್ಮ ಬೆಂಬಲ ಇದೆ. ಆದರೆ ಹೋರಾಟದ ಜೊತೆಗೆ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಕನ್ನಡ ನಾಫಲಕಗಳನ್ನು ಶೇ 40% ರಷ್ಟು ಕನ್ನಡ ಕಡ್ಡಾಯಕ್ಕಾಗಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಇದೆ. ಆದರೆ ಕಾನೂನು ತೊಡಕುಗಳನ್ನು ಸರಿಪಡಿಸಿ ಸುತ್ತೋಲೆ ಹೊರಡಿಸಲು ಫೆಬ್ರವರಿಯೊಳಗೆ ಕಾಲಾವಕಾಶ ನೀಡಲಾಗಿದೆ. ಅಷ್ಟರಲ್ಲಿ ಸರಕಾರದ ಗಮನಕ್ಕೆ ತರದೆ ಕನ್ನಡ ಹೋರಾಟಗಾರರು ಮುಂದಾಗಿದ್ದು ಸರಿಯಲ್ಲ” ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X