ರಾಮನಗರ | ಪಶು ಚಿಕಿತ್ಸಾ ವಾಹನದ ಮೇಲೆ ಮೋದಿ ಮುಖ ಕಾಣುತ್ತಿಲ್ಲವೆಂದು ಬಿಜೆಪಿಗರ ಪ್ರತಿಭಟನೆ

Date:

Advertisements

ಸಂಚಾರಿ ಪಶು ಚಿಕಿತ್ಸಾಲಯದ ವಾಹನದ ಮೇಲೆ ಅಂಟಿಸಲಾಗಿರುವ ಪೋಸ್ಟರ್‌ನಲ್ಲಿ ಪ್ರಧಾನಿ ಮೋದಿ ಮುಖ ಸರಿಯಾಗಿ ಕಾಣುತ್ತಿಲ್ಲ. ಅವರ ಮುಖವನ್ನು ಕಾಣದಂತೆ ಮಾಡಲಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ರಾಮನಗರ ಕೆಂಗಲ್ ಹನುಮಂತಯ್ಯ ವೃತ್ತದಲ್ಲಿ ಪಶು ಚಿಕಿತ್ಸಾಲಯ ವಾಹನವನ್ನು ತಡೆದ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ವಾಹನದ ಮೇಲೆ ಹತ್ತಿ ದಾಂಧಲೆ ನಡೆಸಿದ್ದಾರೆ.

ಹುಬ್ಬಳ್ಳಿಯನ್ನು ಕರಸೇವಕರನ್ನು ಬಂಧಿಸಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ, ಅದೇ ಮಾರ್ಗದಲ್ಲಿ ಹಾದುಹೋಗುತ್ತಿದ್ದ ಪಶು ಚಿಕಿತ್ಸಾಲಯ ವಾಹನದ ಮೇಲಿನ ಪೋಸ್ಟರ್‌ನಲ್ಲಿ ಮೋದಿ ಫೋಟೋ ಸರಿಯಾಗಿ ಕಾಣದೇ ಇರುವುದನ್ನು ಗಮನಿಸಿ, ವಾಹನ ತಡೆದಿದ್ದಾರೆ.

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಪಶುಸಂಗೋಪನ ಸಚಿವ ಕೆ ವೆಂಕಟೇಶ್ ವಿರುದ್ಧ ಘೊಷಣೆ ಕೂಗಿದ್ದಾರೆ. ಬಿಜೆಪಿ ಸದಸ್ಯೆಯೊಬ್ಬರು ವಾಹನದ ಮೇಲಿನ ಪೋಸ್ಟರ್‌ನಲ್ಲಿದ್ದ ಸಿದ್ದರಾಮಯ್ಯ ಅವರ ಭಾವಚಿತ್ರಕ್ಕೆ ಮಸಿ ಬಳಿದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಸಂಚಾರಿ ಪಶು ಚಿಕಿತ್ಸಾಲಯವು ಕೇಂದ್ರ ಸರ್ಕಾರದ ಅನುದಾನದಿಂದ ಅನುಷ್ಠಾನ ಆಗಿದ್ದರೆ ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಪಶುಸಂಗೋಪನಾ ಇಲಾಖೆ ಸಚಿವರ ಭಾವಚಿತ್ರಕ್ಕೆ ಸಮನಾಗಿ ಪ್ರಧಾನ ಮಂತ್ರಿಗಳ ಭಾವಚಿತ್ರವನ್ನೂ ಹಾಕುವುದು ಶಿಷ್ಟಾಚಾರ. ಹಾಗೇನಾದರೂ ಶಿಷ್ಟಾಚಾರ ಉಲ್ಲಂಘನೆ ಆಗಿದ್ದರೆ ರಾಜ್ಯದ ಮುಖ್ಯಮಂತ್ರಿಗಳೇ ಜವಾಬ್ದಾರರಾಗಿರುತ್ತಾರೆ. ಒಂದು ವೇಳೆ ಈ ಯೋಜನೆ ರಾಜ್ಯ ಸರ್ಕಾರದ್ದಾಗಿದ್ದರೆ ಈ ಘಟನೆ ತಪ್ಪು.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

Download Eedina App Android / iOS

X