ಅದಾನಿ – ಹಿಂಡನ್‌ಬರ್ಗ್‌ ಪ್ರಕರಣವನ್ನು ಸೆಬಿಯೇ ತನಿಖೆ ಮಾಡಲಿ ಎಂದ ಸುಪ್ರೀಂ

Date:

Advertisements

ಅದಾನಿ – ಹಿಂಡನ್‌ಬರ್ಗ್‌ ರೀಸರ್ಚ್‌ ವಿವಾದದ ಪ್ರಕರಣವನ್ನು ಸಿಬಿಐ ಅಥವಾ ಎಸ್‌ಐಟಿಗೆ ವಹಿಸದಿರಲು ಸುಪ್ರೀಂ ಕೋರ್ಟ್‌ ಆದೇಶಿಸಿದ್ದು ‘ಸೆಬಿ’ಯು ಉಳಿದ ಪ್ರಕರಣಗಳನ್ನು ತನಿಖೆ ನಡೆಸಲು ಆದೇಶಿಸಿದೆ.

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ನೇತೃತ್ವದ ಪೀಠವು, ಸೆಬಿ ತನಿಖೆಯಲ್ಲಿ ಮಧ್ಯ ಪ್ರವೇಶಿಸಲು ನಿರಾಕರಿಸುವ ಮೂಲಕ ಸೆಬಿ ನೀಡಿದ್ದ ಕ್ಲೀನ್‌ಚಿಟ್ ಅನ್ನು ಎತ್ತಿ ಹಿಡಿದಿದೆ. ಅಲ್ಲದೆ ಈ ಪ್ರಕರಣದ ತನಿಖೆಯನ್ನು ಸೆಬಿಯಿಂದ ಸಿಬಿಐ ಅಥವಾ ಎಸ್‌ಐಟಿಗೆ ವರ್ಗಾಯಿಸಲು ಯಾವುದೇ ಆಧಾರವಿಲ್ಲ ಎಂದು ತನ್ನ ತೀರ್ಪಿನಲ್ಲಿ ತಿಳಿಸಿದೆ.

ಅದಾನಿ – ಹಿಂಡನ್‌ಬರ್ಗ್‌ ರೀಸರ್ಚ್‌ ವಿವಾದದ ತನಿಖೆಯ ಉಳಿದ ಎರಡು ಪ್ರಕರಣಗಳನ್ನು ಸೆಬಿಯು ಮೂರು ತಿಂಗಳೊಳಗೆ ತನಿಖೆ ನಡೆಸಬೇಕೆಂದು ತಿಳಿಸಿದೆ.

Advertisements

ನ್ಯಾಯಾಲಯದ ನಿರ್ಧಾರವು ಪ್ರಾಥಮಿಕವಾಗಿ ವರದಿಗಳ ದೃಢೀಕರಣದ ಮೌಲ್ಯಮಾಪನಗಳು ಮತ್ತು ಸೆಬಿ ಅಧಿಕಾರ ವ್ಯಾಪ್ತಿಯನ್ನು ನಿರ್ಧರಿಸಿದೆ ಎಂದು ತಿಳಿಸಿದೆ.

ಅಲ್ಲದೆ ತಿರುಚಲಾಗಿದೆ ಎಂಬ ಜಾರ್ಜ್‌ ಒಸಿಸಿಆರ್‌ಪಿ ವರದಿಯ ವಿಶ್ವಾಸಾರ್ಹತೆಯ ಬಗ್ಗೆ ನ್ಯಾಯಾಲಯ ಸಂದೇಹ ವ್ಯಕ್ತಪಡಿಸಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೊಸವರ್ಷದ ಹೊಸ್ತಿಲಲ್ಲಿ ನಮ್ಮನ್ನಗಲಿದ ನಿಜಾಯತಿಯ ಪತ್ರಕರ್ತ ಜಾನ್ ಪಿಲ್ಜರ್

ವರದಿಗಳನ್ನು ಸ್ವತಂತ್ರವಾಗಿ ಪರಿಶೀಲಿಸಲಾಗಿಲ್ಲ ಹಾಗೂ ಅಧಿಕೃತ ಮಾಹಿತಿಯನ್ನು ಒಳಗೊಂಡಿಲ್ಲ ಎಂದು ತಿಳಿಸಿದೆ. ಇದಲ್ಲದೆ ಷೇರು ಬೆಲೆಗಳನ್ನು ತಗ್ಗಿಸಲಾಗಿದೆ ಎಂಬ ಆರೋಪವನ್ನು ಅಲ್ಲಗಳೆದಿದ್ದು ಎಫ್‌ಪಿಐ ನಿಯಮಗಳ ಸಿಂದುತ್ವವನ್ನು ಎತ್ತಿ ಹಿಡಿದಿದೆ. ಜೊತೆಗೆ ಸೆಬಿ ತನಿಖೆಯು ಕಾನೂನಿನ ಯಾವುದೇ ದೌರ್ಬಲ್ಯಗಳಿಂದ ಬಳಲುತ್ತಿಲ್ಲ ಎಂದು ತಿಳಿಸಿದೆ.

ಅದಾನಿ-ಹಿಂಡನ್ ಬರ್ಗ್‌ ಪ್ರಕರಣದ ಕುರಿತು ನಾಲ್ಕು ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಸಿಜೆಐ ಡಿ.ವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪಾರ್ಡಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ನೇತೃತ್ವದ ಪೀಠ ಈ ತೀರ್ಪನ್ನು ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರಾದ ವಿಶಾಲ್ ತಿವಾರಿ, ಎಂ ಎಲ್ ಶರ್ಮಾ ಮತ್ತು ಕಾಂಗ್ರೆಸ್ ಮುಖಂಡ ಜಯ ಠಾಕೂರ್ ಮತ್ತು ಅನಾಮಿಕಾ ಜೈಸ್ವಾಲ್ ಸಲ್ಲಿಸಿದ್ದ ಪಿಐಎಲ್‌ನ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌ ಪೀಠ ಕಳೆದ ವರ್ಷ ನವೆಂಬರ್ 24ರಂದು ತೀರ್ಪನ್ನು ಕಾಯ್ದಿರಿಸಿತ್ತು.

ಅದಾನಿ ಸಮೂಹ ಸಂಸ್ಥೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಜೊತೆ ನಿಕಟ ಸಂಪರ್ಕ ಹೊಂದಿದ್ದು, ಹಿಂಡನ್ ಬರ್ಗ್‌ ವರದಿ ಬಹಿರಂಗದ ನಂತರ ಅದಾನಿ ಸಮೂಹದ ಷೇರುಗಳ ಬೆಲೆ ಭಾರೀ ಕುಸಿತ ಕಂಡಿರುವುದಾಗಿ ಪಿಐಎಲ್‌ನಲ್ಲಿ ಆರೋಪಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X