ಧಾರವಾಡ | ಪೊಲೀಸ್‌ ಠಾಣೆಗೆ ಮುತ್ತಿಗೆಗೆ ಯತ್ನ; ಆರ್ ಅಶೋಕ್ ಸೇರಿ ಬಿಜೆಪಿಗರು ಪೊಲೀಸರ ವಶಕ್ಕೆ

Date:

Advertisements

ಕರಸೇವಕರ ಬಂಧನವನ್ನು ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಶಹರ ಪೊಲೀಸ್‌ ಠಾಣೆಗೆ ಮುತ್ತಗೆ ಹಾಕಲು ಯತ್ನಿಸಿದ್ದಾರೆ. ಮುತ್ತಿಗೆಗೆ ಯತ್ನಿಸಿದ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್ ಸೇರಿದಂತೆ ಹಲವಾರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

30 ವರ್ಷಗಳ ಹಿಂದೆ, 1992ರಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಕರಸೇವಕ ಶ್ರೀಕಾಂತ್ ಪೂಜಾರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಬಂಧನವನ್ನು ಖಂಡಿಸಿ ಆರ್‌ ಅಶೋಕ್ ನೇತೃತ್ವದಲ್ಲಿ ಧಾರವಾಡದಲ್ಲಿ ಪ್ರತಿಭಟನೆ ನಡೆದಿದೆ.

ಪೊಲೀಸ್‌ ಠಾಣೆಗೆ ಮುತ್ತಿಗೆಗೆ ಯತ್ನಿಸುವುದಕ್ಕೂ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡದ ಆರ್‌ ಅಶೋಕ್, “ಶ್ರೀಕಾಂತ ಪೂಜಾರ ಬಂಧನಕ್ಕೆ ಮುನ್ನ ಬಂಧನ ಪೂರ್ವ ವಾರಂಟ್ ಮಾಡಿದ್ದರೆ? ಪೊಲೀಸ್‌ ದಾಖಲೆಯಲ್ಲಿ ಎಫ್‌ಐಆರ್‌ ಇದೆಯೇ? ದೂರು ಪ್ರತಿಗಳಿವೆಯೇ” ಎಂದು ಪ್ರಶ್ನಿಸಿದ್ದಾರೆ.

Advertisements

“ನ್ಯಾಯಾಲಯ ರಜೆ ಇದ್ದಾಗ ಆರೋಪಿಯನ್ನು ಬಂಧಿಸಬಾರದೆಂಬ ನಿಯಮವಿದೆ. ಆದರೂ, ಯಾರು ನಿರ್ದೇಶನದ ಮೇಲೆ ಶ್ರೀಕಾಂತನನ್ನು ಬಂಧಿಸಲಾಗಿದೆ. ಕರ್ನಾಟಕದಲ್ಲಿ 69,000 ಎಲ್‌ಪಿಆರ್ ಪ್ರಕರಣಗಳಿವೆ. ಅವುಗಳಲ್ಲಿ ಎಷ್ಟು ಆರೋಪಿಗಳನ್ನು ಬಂಧಿಸಲಾಗಿದೆ” ಎಂದು ಪ್ರಶ್ನಿಸಿದ್ದಾರೆ.

“ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ವಿರುದ್ಧವೂ ಪ್ರಕರಣಗಳಿವೆ. ಆದರೆ, ಅವರ ಬಂಧನವನ್ನು ವಿರೋಧಿಸುತ್ತಾರೆ. ಶ್ರೀಕಾಂತನನ್ನು ಬಂಧಿಸುತ್ತಾರೆ. ಪೊಲೀಸರು ಸರ್ಕಾರದ ಮಾತು ಕಳೆದೆ, ವಿಚಾರ ಮಾಡಬೇಕು. ರಾಮ ಭಕ್ತರನ್ನ ಕೆಣಕಿ ಸಿದ್ದರಾಮಯ್ಯ ತಪ್ಪು ಮಾಡಿದ್ದಾರೆ” ಎಂದು ಹೇಳಿದ್ದಾರೆ.

ಪ್ರತಿಭಟನೆ ಬಳಿಕ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದು, ಈ ವೇಳೆ, ಆರ್ ಅಶೋಕ್, ಶಾಸಕ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ, ಎಂ.ಆರ್. ಪಾಟೀಲ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X