ಯಾದಗಿರಿ | ಚಾಲಕನ ಸುರಕ್ಷತೆಯ ಹಕ್ಕು ಕಸಿದುಕೊಳ್ಳುವ ಕಾನೂನು ಹಿಂಪಡೆಯಲು ಚಾಲಕರ ಸಂಘ ಒತ್ತಾಯ

Date:

Advertisements

ಕೇಂದ್ರ ಗೃಹ ಸಚಿವ ಅಮೀತ್ ಷಾ ಅವರು ಭಾರತೀಯ ನ್ಯಾಯ ಸಂಹಿತೆಯಲ್ಲಿ ವಾಹನ ಚಾಲಕರಿಗೆ ʼಹಿಟ್ ಎಂಡ್ ರನ್ʼ ಪ್ರಕರಣದಲ್ಲಿ ಅತ್ಯುಗ್ರ ಶಿಕ್ಷೆ ನಿಗದಿಪಡಿಸಿರುವ ಹೊಸ ಕಾನೂನು ವಿರೋಧಿಸಿ ನಗರದಲ್ಲಿ ಚಾಲಕರ ಸಂಘಟನೆಗಳು ಪ್ರತಿಭಟನೆ ನಡೆಸಿದರು.

ಯಾದಗಿರಿ ನಗರದ ಸರ್ಕಾರಿ ಪದವಿ ಕಾಲೇಜು ಸಮೀಪದ ಹನುಮಾನ ದೇವಸ್ಥಾನದಿಂದ ನೇತಾಜಿ ಸುಭಾಶ್ಚಂದ್ರ ಬೋಸ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಚಾಲಕರು, ನಂತರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸಿದರೆ ಅದಕ್ಕೆ ಸಂಬಂಧಿಸಿದ ಚಾಲಕರಿಗೆ ಕನಿಷ್ಠ 10 ವರ್ಷಗಳವರೆಗೆ ಶಿಕ್ಷೆ ಮತ್ತು 7 ಲಕ್ಷ ರೂ. ದಂಡವನ್ನು ವಿಧಿಸುವ ಹೊಸ ಕಾನೂನು ಜಾರಿಗೊಳಿಸಿದ್ದು ಖಂಡನೀಯ. ಇದರಿಂದ ಚಾಲಕರ ಬದುಕನ್ನೇ ಕಸಿದುಕೊಳ್ಳಲಿದೆ, ಬೇಕೆಂತಲೇ ಯಾರೂ ಅಪಘಾತ ಮಾಡುವುದಿಲ್ಲ ಎಂಬುದನ್ನು ಸರ್ಕಾರ ಅರಿಯಬೇಕೆಂದು ಅಸಮಾನಧಾನ ವ್ಯಕ್ತಪಡಿಸಿದರು.

Advertisements

ಚಾಲಕರು ಉದ್ದೇಶಪೂರ್ವಕವಾಗಿ ಅಪಘಾತಗಳನ್ನು ಸಂಭವಿಸುವಂತೆ ಮಾಡುವುದಿಲ್ಲ. ಆ ಕಾನೂನು ಜಾರಿಗೆ ಬಂದರೆ ವಾಹನ ಚಾಲಕನ ಕುಟುಂಬದವರು ಬೀದಿಪಾಲಾಗುತ್ತಾರೆ. ಯಾವುದೇ ಕಾರಣಕ್ಕೂ ಈ ಕಾನೂನು ಜಾರಿಗೊಳಿಸಬಾರದು. ಒಂದು ವೇಳೆ ಜಾರಿಗೊಳಿಸಿದರೆ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚಾಗಿ ರೋಡ್ ಬ್ರೇಕರ್ ಗಳನ್ನು ಅಳವಡಿಸಿರುವುದು, ಟೋಲ್ ಸಂಗ್ರಹ ಸ್ಥಳದಿಂದ ಕೆಲವೇ ದೂರದವರೆಗೆ ಸುರಕ್ಷಿತವಾದ ರಸ್ತೆಗಳಿದ್ದು, ಮುಂದಿನ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟ ರಸ್ತೆ, ಸುರಕ್ಷತೆಯ ನಾಮಫಲಕಗಳನ್ನು ಅಳವಡಿಸಿದೆ ಇರುವುದು., ಅಪಘಾತ ನಿಯಂತ್ರಣಕ್ಕೆ ಸಿಸಿ ಕ್ಯಾಮೆರಾ ಅಳವಡಿಸಿದರೆ ಅಪಘಾತಗಳ ಸಂಖ್ಯೆ ಕಡಿಮೆಯಾಗಬಹುದು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಕನಾಟಕ ರಾಜ್ಯ ಚಾಲಕರ ಪರಿಷತ್ ಅಟೋ ಚಾಲಕರ ಸಂಘದ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಸೀಲ್ದಾರರಿಗೆ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸಾವಿತ್ರಿಬಾಯಿ ಫುಲೆ ಜನ್ಮದಿನಕ್ಕೆ ರಾಷ್ಟ್ರೀಯ ರಜೆ ಘೋಷಿಸಿ: ರಮೇಶ ಡಾಕುಳಗಿ

ಪ್ರತಿಭಟನೆಯಲ್ಲಿ ಚಾಲಕರ ಪರಿಷತ್ ಆಟೋ ಚಾಲಕರ ಜಿಲ್ಲಧ್ಯಕ್ಷ ಲಕ್ಷ್ಮಣ ಚವ್ಹಾಣ ಸೇರಿದಂತೆ ಪ್ರಮುಖರಾದ  ಶಿವಶರಣಪ್ಪ ಕುಂಬಾರ, ಹಣಮಯ್ಯ ಕಲಾಲ, ಸಾಬಯ್ಯ ತಾಂಡೂರಕರ್, ಈಶ್ವರ ನಾಯಕ, ಮರಗಪ್ಪ ನಾಯಕ, ಹಣಮಂತ ನಾಯಕ, ಮಹೇಶ ನಾಟೇಕಾರ, ಆಶಪ್ಪ ನಾಯಕ, ಹಣಮಂತ ಬಬಲಾದಿ, ಈರಪ್ಪ ಚವ್ಹಾಣ, ಮೋನೇಶ ಮಡಿವಾಳ, ಅಂಬೋಜಿ ರಾವ್, ಮಲ್ಲಯ್ಯ ಮುಷ್ಟೂರು ಹಾಗೂ ಗಿರಿನಾಡು ಚಾಲಕರ ಸಂಘದ ಅಧ್ಯಕ್ಷ ಬಸವರಾಜ ಇಟಗಿ, ಗೌರವಾಧ್ಯಕ್ಷ ಉಮೇಶ ಕೆ.ಮುದ್ನಾಳ ಸೇರಿದಂತೆ ಇತರರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

Download Eedina App Android / iOS

X