ಬೀದರ್‌ | ಕೇಂದ್ರ ಸರ್ಕಾರ ಕೊಲೆಗಡುಕರಿಗೆ ವಿಧಿಸುವ ಕಾನೂನು ವಾಹನ ಚಾಲಕರ ಮೇಲೆ ಹೇರುತ್ತಿದೆ

Date:

Advertisements

ರಸ್ತೆ ಅಪಘಾತ ಸಂಭವಿಸಿದ ಬಳಿಕ ಪರಾರಿಯಾಗುವ ಪ್ರಕರಣಗಳಿಗೆ ಸಂಬಂಧಿಸಿದಂತೆ ವಾಹನ ಚಾಲಕನಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 10 ಲಕ್ಷ ರೂ. ದಂಡ ವಿಧಿಸುವುದಕ್ಕೆ ಕೇಂದ್ರ ಸರ್ಕಾರ ಜಾರಿಗೆ ತರಲಿರುವ ಹೊಸ ಕಾನೂನು ವಿರೋಧಿಸಿ ಬೀದರ್‌ ನಲ್ಲಿ ವಾಹನ ಚಾಲಕರ ಒಕ್ಕೂಟದಿಂದ ಪ್ರತಿಭಟನೆ ನಡೆಯಿತು.

ಕರ್ನಾಟಕ ಚಾಲಕರ ಒಕ್ಕೂಟ ಹಾಗೂ ಜಿಲ್ಲಾ ಲಾರಿ ಚಾಲಕರು ಮತ್ತು ಮಜ್ದೂರ್‌ ಅಸೋಸಿಯೇಷನ್ ಪದಾಧಿಕಾರಿಗಳು ನಗರದ ಗಾಂಧಿ ಗಂಜ್‌ ದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು.

“ಕೇಂದ್ರ ಸರ್ಕಾರ ಅವೈಜ್ಞಾನಿಕವಾದ ಕಾನೂನು ಜಾರಿಗೆ ತರಲು ಹೊರಟಿದೆ,ಕಳೆದ 25ರಂದು ಸಂಸತ್ತಿನಲ್ಲಿ ಒಪ್ಪಿಗೆ ಪಡೆದು ರಾಷ್ಟ್ರಪತಿಗಳ ಅಂಕಿತಕ್ಕೆ ಕಳಿಸಲಾಗಿದೆ. ಚಾಲಕ ರಸ್ತೆಯಲ್ಲಿ ಅಪಘಾತ ಮಾಡಿದಂತಹ ಸಂದರ್ಭದಲ್ಲಿ ಅಪಘಾತಕ್ಕೆ ಒಳಗಾದ ವ್ಯಕ್ತಿಯನ್ನು ರಸ್ತೆಯಲ್ಲಿ ಬಿಟ್ಟು ಹೋಗುವ ಹಾಗಿಲ್ಲ, ಸ್ಥಳದಲ್ಲೇ ಇದ್ದು ಆಸ್ಪತ್ರೆಗೆ ಸಾಗಿಸಬೇಕು. ಮಹಜರು ಮಾಡುವ ಸಂದರ್ಭದಲ್ಲಿ ಸ್ಥಳದಲ್ಲಿ ಇರಬೇಕು. ಚಾಲಕನು ಅಲ್ಲಿಂದ ಪರಾರಿಯಾದರೆ ಕಠಿಣ ಶಿಕ್ಷೆ ವಿಧಿಸಬೇಕೆಂಬ ನೂತನ ಕಾನೂನು ಜಾರಿಗೆ ತರುವುದು ಖಂಡನೀಯ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

Advertisements

“ಅಪಘಾತ ನಡೆದ ವೇಳೆ ಸ್ಥಳಿಯರು ಮತ್ತು ಸಂಬಂಧಿಕರು ಎಷ್ಟೋ ಚಾಲಕರನ್ನು ಕೊಂದಿರುವ ಉದಾಹರಣೆಗಳಿವೆ. ಹೀಗಾದರೆ ಚಾಲಕರ ಜೀವಕ್ಕೆ ಹೊಣೆಗಾರರು ಯಾರಾಗುತ್ತಾರೆ. ಕೆಂದ್ರ ಸರ್ಕಾರ ಈ ಹೊಣೆಯನ್ನು ಹೊರಲು ಸಾಧ್ಯವೇ. ಕೇಂದ್ರ ಸರ್ಕಾರ ಕೊಲೆಗಡುಕರಿಗೆ ವಿಧಿಸುವಂತಹ ಕಾನೂನನ್ನು ಚಾಲಕರ ಮೇಲೆ ಹೇರಲು ಹೊರಟಿದೆ, ಚಾಲಕರನ್ನು ರಸ್ತೆಯಲ್ಲಿ ಕೊಲ್ಲಿಸುವ ಪ್ರಯತ್ನ ನಡೆಸಿದೆ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ಇರಾನ್‌ನಲ್ಲಿ ಬಾಂಬ್ ಸ್ಪೋಟ: 103 ಕ್ಕೂ ಅಧಿಕ ಮಂದಿ ಸಾವು

ಚಾಲಕರ ವಿರುದ್ದ ಜಾರಿಗೆ ತರಲು ಹೊರಟಿದ ಕಾನೂನನ್ನು ರಾಜ್ಯ ಸರ್ಕಾರ ಜಾರಿಗೆ ತರಬಾರದು. ಈಗಾಗಲೇ ಸಾವಿರಾರು ಚಾಲಕರು ಚಾಲಕರು ಕೆಲಸ ಬಿಟ್ಟು ಮನೆಯಲ್ಲೇ ಕೂತಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ದೇಶವ್ಯಾಪಿ ಪ್ರತಿಭಟನೆಗಳು ನಡೆಯುತ್ತಿವೆ. ರಾಜ್ಯದ ಸಾರಿಗೆ ಸಚಿವರು ಚಾಲಕರಿಗೆ ನ್ಯಾಯ ಕೊಡಿಸಬೇಕೆಂದು ಒತ್ತಾಯಿಸಿದರು.

ವರದಿ ಮಾಹಿತಿ : ರೇವಣಸಿದ್ದ ಹಡಪದ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X