ಬೆಂಗಳೂರು | ಸ್ಟಾರ್‌ ಹೋಟೆಲ್ ಹೆಸರು ಹೇಳಿ ಹಣ ಲಪಟಾಯಿಸಿದ ಕಿಡಿಗೇಡಿಗಳು

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಂಜಿ ರೋಡ್, ಬ್ರಿಗೇಡ್ ರೋಡ್‌ನಲ್ಲಿ ಜನರು ಹೊಸ ವರ್ಷವನ್ನು ಆನಂದದಿಂದ ಬರಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಜೆಡಬ್ಲೂ ಮ್ಯಾರಿಯೆಟ್‌ನಲ್ಲಿ ಹೊಸ ವರ್ಷವನ್ನು ಬರಮಾಡಿಕೊಳ್ಳಲು ಬಯಸಿದ್ದ ಮಹಿಳೆಗೆ ಕಿಡಿಗೇಡಿಗಳು ವಂಚಿಸಿದ ಘಟನೆ ನಡೆದಿದೆ.

ಹೌದು, ಹೇಮಾ ಮಾಲಿನಿ ವಂಚನೆಗೆ ಒಳಗಾಗದವರು. ಹೊಸ ವರ್ಷದ ದಿನವನ್ನು ಜೆಡಬ್ಲೂ ಮ್ಯಾರಿಯೇಟ್ ಹೋಟೆಲ್‌ನಲ್ಲಿ ಪಾರ್ಟಿ ಮಾಡಿ ಸಂಭ್ರಮಾಚರಣೆ ಮಾಡಲು ಟಿಕೆಟ್ ಪಡೆಯಲು ಮುಂದಾಗಿದ್ದರು.

ಈ ವೇಳೆ, ಹೋಟೆಲ್ ನಂಬರ್‌ಗೆ ಕರೆ ಮಾಡಿದ್ದ ಮಹಿಳೆಗೆ ಸುರೇಂದರ್ ಕುಮಾರ್ ಎಂಬಾತ ಸಂಪರ್ಕಕ್ಕೆ ಬಂದಿದ್ದಾನೆ. ಮಹಿಳೆಗೆ ಟಿಕೆಟ್‌ ನೀಡುವುದಾಗಿ ಕೂಡ ಹೇಳಿದ್ದಾನೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬೆಳಿಗ್ಗೆ ಕೆಲಸಕ್ಕೆ ಸೇರಿ, ಮಧ್ಯಾಹ್ನ ಮಾಲೀಕನ ಮಗುವಿನ ಅಪಹರಣ

ಈಗಾಗಲೇ, ಟಿಕೆಟ್‌ಗಳು ಖಾಲಿ ಆಗುತ್ತಿದ್ದು, ಈಗಲೇ ಗೂಗಲ್ ಪೇ ಮೂಲಕ ಹಣವನ್ನು ಸಂದಾಯ ಮಾಡಿ ಎಂದು ಹೇಳಿದ್ದಾನೆ. ಅದರಂತೆ ಹೇಮಾ ಮಾಲಿನಿ ಅವರು ಆತನಿಗೆ ಗೂಗಲ್‌ ಪೇ ಮೂಲಕ ಟಿಕೆಟ್‌ಗಾಗಿ ಬರೋಬ್ಬರಿ ₹19,500 ಹಣವನ್ನು ವರ್ಗಾವಣೆ ಮಾಡಿದ್ದಾರೆ.

ಬಳಿಕ, ಹೋಟೆಲ್ ಮ್ಯಾನೇಜರ್ ಹೆಸರು ಹೇಳಿ ಟಿಕೆಟ್ ಪಡೆಯಲು ಸೂಚಿಸಿದ್ದನು. ಇದನ್ನು ನಂಬಿದ್ದ ಹೇಮಾ ಅವರು ಹೋಟೆಲ್ ಬಳಿ ಹೋಗಿ ಮ್ಯಾನೇಜರ್ ಹೆಸರು ಹೇಳಿದಾಗ ಆ ಹೆಸರಿನ ಸಿಬ್ಬಂದಿ ಇಲ್ಲ ಎಂಬುದು ತಿಳಿದುಬಂದಿದೆ.

ಬಳಿಕ, ಮಹಿಳೆ ವಂಚನೆಗೆ ಒಳಗಾಗಿರುವುದು ಗೊತ್ತಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ, ಮಹಿಳೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X