ಶಾಸಕರ ವೇತನ ಪರಿಷ್ಕರಣೆಗೂ ಆಯೋಗ ರಚಿಸಲಿ: ಅರವಿಂದ ಬೆಲ್ಲದ ಸಲಹೆ

Date:

Advertisements

ಶಾಸಕರಿಗೆ ಇರುವಂತಹ ವೇತನದಲ್ಲಿ ಎಲ್ಲ ಕಚೇರಿ, ವಾಹನ, ಚಾಲಕ ನಿರ್ವಹಣೆ ಸಾಧ್ಯ ಇಲ್ಲ ಎಂಬುದು ಎಲ್ಲ ಶಾಸಕರಿಗೂ ಗೊತ್ತಿದೆ. ಹೀಗಾಗಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ವೇತನ ಆಯೋಗ ರಚಿಸುವಂತೆ ಶಾಸಕರ ವೇತನ ಪರಿಷ್ಕರಣೆಗೂ ಆಯೋಗ ರಚಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು.

ಧಾರವಾಡ ಜರ್ನಲಿಸ್ಟ್‌ ಗಿಲ್ಡ್‌ ವತಿಯಿಂದ ನಗರದ ಪತ್ರಿಕಾಭವನದಲ್ಲಿ ಗುರುವಾರ ಆಯೋಜಿಸಿದ್ದ ಸಂವಾದದಲ್ಲಿ ಅವರು ಮಾತನಾಡಿ, “ಶಾಸಕರ ಪಗಾರವನ್ನು ಶಾಸಕರೇ ಹೆಚ್ಚಿಸಿಕೊಳ್ಳುವುದು ತಪ್ಪು” ಎಂದರು.

“ಶಾಸಕರಿಗೆ ಏನೇನು ಖರ್ಚುಗಳು ಇರುತ್ತವೆ, ಖರ್ಚು ನಿಭಾಯಿಸಲು ಸರ್ಕಾರದಿಂದ ಏನು ವ್ಯವಸ್ಥೆ ಮಾಡಬೇಕು, ಶಾಸಕರ ಆಪ್ತ ಸಹಾಯಕರ ಪಗಾರ, ಅವರ ಪ್ರವಾಸ ಭತ್ಯೆ ಇತ್ಯಾದಿ ಯಾರು ನೀಡಬೇಕು ಇತ್ಯಾದಿ ಕುರಿತು ಆಯೋಗವು ಪರಿಶೀಲಿಸಿ ನಿರ್ಧಾರ ಕೈಗೊಳ್ಳುವಂತಾಗಬೇಕು” ಎಂದು ಸಲಹೆ ನೀಡಿದರು.

Advertisements

“ಜಿಲ್ಲಾಧಿಕಾರಿ ಸಹಿತ ವಿವಿಧ ಅಧಿಕಾರಿಗಳಿಗೆ ಕಚೇರಿ, ವಾಹನ, ಮನೆ ಎಲ್ಲ ಸೌಲಭ್ಯ ಇರುತ್ತದೆ. ಶಾಸಕರಿಗೆ ವಾಹನ ಸೌಲಭ್ಯ ಇಲ್ಲ. ಶಾಸಕ ಬಸ್‌ನಲ್ಲಿ ಎಲ್ಲ ಕಡೆ ಓಡಾಡಿ ಕೆಲಸ ಮಾಡಲು ಆಗುತ್ತದೆಯೇ? ಶಾಸಕರ ಆಪ್ತ ಸಹಾಯಕರ ಸಂಬಳ ಯಾರು ಪಾವತಿಸುವುದು? ಈ ಹಿನ್ನೆಲೆಯಲ್ಲಿ ಆಡಳಿತದಲ್ಲಿ ಬಹಳಷ್ಟು ಸುಧಾರಣೆಗಳು ಆಗಬೇಕಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜೈಲುಗಳಲ್ಲಿ ಜಾತಿಭೂತ- ಸುಪ್ರೀಮ್ ಕೋರ್ಟ್ ಕಳವಳ

ಶ್ರೀಕಾಂತ ಪೂಜಾರಿ ಬಂಧನ ವಿಚಾರವಾಗಿ ಮಾತನಾಡಿ, “1992ರಲ್ಲಿ ಹುಬ್ಬಳ್ಳಿ ನಗರದಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ ಪೂಜಾರಿ ಬಂಧಿಸಿರುವುದು ರಾಮಮಂದಿರ ಕರಸೇವೆ ಪ್ರಕರಣದಲ್ಲಿ. ಅದಕ್ಕೆ ನಾವು ಖಂಡನೆ ವ್ಯಕ್ತಪಡಿಸಿದೆವು. ಶ್ರೀಕಾಂತ ವಿರುದ್ಧದ ಬೇರೆ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾವು ಮಾತಾಡಿಲ್ಲ, ಕ್ರಮ ಜರುಗಿಸುವುದಕ್ಕೆ ನಮ್ಮ ಆಕ್ಷೇಪ ಇಲ್ಲ” ಎಂದರು.

“ಶ್ರೀಕಾಂತ್‌ ಮನೆ ಪಕ್ಕದವರೊಬ್ಬರು (ವೃದ್ಧ) ಈ ಪ್ರಕರಣದಲ್ಲಿಇದ್ದರು. ಪೊಲೀಸರು ಆ ವೃದ್ಧನನ್ನು ಬಿಟ್ಟು ಶ್ರೀಕಾಂತ್‌ನನ್ನು ಕರೆತಂದಿರುವುದು ನಮಗೆ ಗೊತ್ತಾಯಿತು. ಶ್ರೀಕಾಂತನನ್ನು ಗುರಿಯಾಗಿಸಿಕೊಂಡು ಬಂಧಿಸಿದ್ದಾರೆ” ಎಂದು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಎಷ್ಟು ಶಾಸಕರು ಬಡವರು ಮತ್ತು ಬಡಮಧ್ಯಮ ವರ್ಗದವರಿರುವರು,,,, ಚುನಾವಣೆಯಲ್ಲಿ ಕೋಟಿ ಕೋಟಿ ಗಳಲ್ಲಿ ಖರ್ಚು ಮಾಡುವವರು ಸಹ ವೇತನ ಪರಿಷ್ಕರಣೆ ಕೇಳಿದರೆ,,, ದಿನಗೂಲಿ ಮಾಡಿ ಹೊಟ್ಟೆ ಪಾಡಿಗಾಗಿ ಶ್ರಮಿಸುತ್ತಿರುವ ರೈತ ರೈತಕಾರ್ಮಿಕರು,, ಪರಿಷ್ಕರಣೆ ಕೇಳಿದರೆ ಕೊಡುವಿರಾ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X