‘ನನ್ನನ್ನೂ ಬಂಧಿಸಿ’ ಎನ್ನುತ್ತಿರುವ ಬಿಜೆಪಿಗರು; ಬಂಧನಕ್ಕೆ ಸೂಕ್ತ ಕಾರಣಗಳನ್ನಿಟ್ಟ ಕಾಂಗ್ರೆಸ್‌!

Date:

Advertisements

1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಭೆ ಪ್ರಕರಣದಲ್ಲಿ ಆರೋಪಿ, ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಬಿಡುಗಡೆಗೆ ಒತ್ತಾಯಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಗುರುವಾರ, ಬಿಜೆಪಿ ನಾಯಕರು ‘ನಾನೂ ಕರಸೇವಕ, ನನ್ನನ್ನೂ ಬಂಧಿಸಿ’ ಎಂಬ ಪೋಸ್ಟರ್‌ ಹಿಡಿದು ಪ್ರತಿಭಟನಾ ಅಭಿಯಾನ ನಡೆಸಿದ್ದಾರೆ. ಬಿಜೆಪಿಗರ ಪ್ರತಿಭಟನೆಗೆ ಕುಹಕವಾಡಿರುವ ಕಾಂಗ್ರೆಸ್‌, ಬಿಜೆಪಿ ನಾಯಕರ ಮೇಲಿರುವ ಆರೋಪಿಗಳನ್ನು ಪೋಸ್ಟರ್‌ನಲ್ಲಿ ಎಡಿಟ್‌ ಮಾಡಿ ಹಂಚಿಕೊಂಡಿದೆ.

ಬಿಜೆಪಿ ನಾಯಕರ ವಿರುದ್ಧ ವ್ಯಂಗ್ಯವಾಡಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್‌, “ಬಿಜೆಪಿಗರೆಲ್ಲರೂ ‘ನನ್ನನ್ನೂ ಬಂಧಿಸಿ’ ಎಂದು ಒತ್ತಾಯಿಸುತ್ತಿರುವುದು ತಾವು ಮಾಡಿದ ಅಕ್ರಮಗಳ, ಹಗರಣಗಳ ಪ್ರಾಯಶ್ಚಿತ್ತಕ್ಕಾಗಿಯೇ? ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಈ ಪೋಸ್ಟರ್ ಹಿಡಿದು ಕುಳಿತರೆ ಸೂಕ್ತ” ಎಂದು ಹೇಳಿದೆ. ವಿಜಯೇಂದ್ರ ಅವರು ಹಿಡಿದಿದ್ದ ಪೋಸ್ಟರ್‌ ಅನ್ನು ಎಡಿಟ್ ಮಾಡಿ, “ನಾನು ಆರ್‌ಟಿಜಿಎಸ್‌ ಮೂಲಕ ಲಂಚ ಪಡೆದಿದ್ದೇನೆ. 40,000 ಕೋಟಿ ರೂ. ಅಕ್ರಮದಲ್ಲಿ ಪಾಲುದಾರ, ನನ್ನನ್ನು ಬಂಧಿಸಿ” ಎಂದು ಬರೆದಿದೆ.

 

ಈಶ್ವರಪ್ಪ ಅವರ ಪೋಸ್ಟರ್‌ಅನ್ನು ‘ನಾನು 40 ಪರ್ಸೆಂಟ್ ಕಮಿಷನ್ ನುಂಗಿ ಸಂತೋಷ್ ಪಾಟೀಲ್ ಸಾವಿಗೆ ಕಾರಣನಾಗಿದ್ದೇನೆ. ನನ್ನನ್ನು ಬಂಧಿಸಿ’ ಎಂದು ಎಡಿಟ್ ಮಾಡಲಾಗಿದ್ದು, “ಈಶ್ವರಪ್ಪ ಅವರು ಹಿಡಿಯಬೇಕಾದ ಪೋಸ್ಟರ್ ಇದು! ನ್ಯಾಯಾಲಯದಲ್ಲಿ ಬಿಜೆಪಿಗರ ಅಕ್ರಮಗಳು, ಅನಾಚಾರಗಳು, ಹಗರಣಗಳು ಸಾಬೀತಾದರೆ ನನ್ನನ್ನೂ ಬಂಧಿಸಿ ಎಂದು ಹೇಳುವುದೇ ಬೇಡ, ಬಂಧನ ಆಗೇ ಆಗುತ್ತದೆ!” ಎಂದು ಕಾಂಗ್ರೆಸ್‌ ಪೋಸ್ಟ್‌ ಮಾಡಿದೆ.

Advertisements

ಈ ಸುದ್ದಿ ಓದಿದ್ದೀರಾ?: ಬಾಬಾಬುಡನ್‌ಗಿರಿ ಗೋರಿ ಧ್ವಂಸ ಕೇಸ್ ರೀ ಓಪನ್ ಆಗಿಲ್ಲ | ದೃಶ್ಯ ಮಾಧ್ಯಮಗಳ ವರದಿ ಸುಳ್ಳು: ಸಿಎಂ ಕಚೇರಿ ಸ್ಪಷ್ಟನೆ

ಮಾಜಿ ಸಚಿವ ಸುನೀಲ್ ಕುಮಾರ್ ಅವರ ಪೋಸ್ಟರ್‌ಅನ್ನು, ‘ಪರಶುರಾಮ ಮೂರ್ತಿಯ ಕಂಚನ್ನು ಕದ್ದಿದ್ದೇನೆ. ಸರ್ಕಾರಿ ಸಿಮೆಂಟ್ ಕದ್ದಿದ್ದೇನೆ. ನನ್ನನ್ನೂ ಬಂಧಿಸಿ’ ಎಂದು ಎಡಿಟ್‌ ಮಾಡಿದ್ದು, “ನನ್ನನ್ನೂ ಬಂಧಿಸಿ ಎನ್ನುತ್ತಿರುವ ಸುನಿಲ್ ಕುಮಾರ್ ಅವರೇ, ಪರಶುರಾಮ ಮೂರ್ತಿಗೆ ಕಂಚಿನ ಬದಲು ಫೈಬರ್ ಹಾಕಿದ್ದಕ್ಕೆ ನಿಮ್ಮನ್ನು ಬಂಧಿಸಬೇಕೆ? ಅಥವಾ ಸರ್ಕಾರದ ಸಿಮೆಂಟ್ ಕಳ್ಳತನದ ಆರೋಪಕ್ಕಾಗಿ ಬಂಧಿಸಬೇಕೆ? ರಾಮನ ಹೆಸರಲ್ಲಿ ರಾವಣನ ಕೆಲಸ ಮಾಡುವ ಆರೋಪಿಗಳನ್ನು ಬಂಧಿಸಬೇಕಲ್ಲವೇ?” ಎಂದು ಟೀಕಿಸಿದೆ.

ಬಿಜೆಪಿ ಮಾಜಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರ ಪೋಸ್ಟ್‌ಅನ್ನು ‘ನಾನು ಕಾರು ಚಲಾಯಿಸಿ ಇಬ್ಬರ ಹತ್ಯೆ ಮಾಡಿದ್ದೇನೆ, ನನ್ನನ್ನೂ ಬಂಧಿಸಿ’ ಎಂದು ಎಡಿಟ್ ಮಾಡಿರುವ ಕಾಂಗ್ರೆಸ್‌, “ರಾಜ್ಯ ಬಿಜೆಪಿ ನಾಯಕರು ನಿಜವಾಗಿಯೂ ಹಿಡಿದು ಕೂರಬೇಕಾದ ಪೋಸ್ಟರ್ ಹೀಗಿರಬೇಕು. ಸಿಟಿ ರವಿ ಅವರೇ ನಿಮ್ಮನ್ನು ಬಂಧಿಸಬೇಕಾದ ಕಾರಣಗಳು ಬೇರೆ ಇವೆಯಲ್ಲವೇ?” ಎಂದು ವ್ಯಂಗ್ಯವಾಡಿದೆ.

ಸಂಸದ ಪ್ರತಾಪ್ ಸಿಂಹ ಅವರ ಪೋಸ್ಟರ್‌ಅನ್ನು, ‘ನಾನು ಸಂಸತ್ ದಾಳಿಕೋರರಿಗೆ ಪಾಸ್ ಕೊಟ್ಟು ಸಹಕರಿಸಿದ್ದೇನೆ, ನನ್ನನ್ನೂ ಬಂಧಿಸಿ’ ಎಂದು ಎಡಿಟ್ ಮಾಡಿರುವ ಕಾಂಗ್ರೆಸ್, “ಪ್ರತಾಪ್ ಸಿಂಹ ಅವರೇ, ನೀವು ಈ ಪೋಸ್ಟರ್ ಹಿಡಿದು ಕೂರುವ ಧೈರ್ಯ ತೋರಿಸಿ, ನಿಮ್ಮವರೇ ಹೇಳುವ ದಮ್ಮು, ತಾಕತ್ತು ಪ್ರದರ್ಶಿಸಿ!” ಎಂದು ಕುಟುಕಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. ಹಾವಿನಪುರದ ಬಾಸ್ ನನ್ನು ಮೆಚ್ಚಿಸಲು,,, ಬುದ್ಧಿ ಉಪಯೋಗಿಸದೇ ಪೆದ್ದು ಪೆದ್ದಾಗಿ ವರ್ತಿಸಿ ಇದ್ದ ಕಾಸಿನ ಕಿಮ್ಮತ್ತು ಕಳೆದುಕೊಳ್ಳುವರು,,, ಕೊನೆಗೆ ನೋಟು ಎಣಿಸುವ ಮೆಷೀನ್ ಈಶ್ವರಪ್ಪ,,ಎತ್ತಿನಾಳ, ಸದಾಆನಂದ ಗೌಡರು,,ತರಹ ಮೂಲೆಯಲ್ಲಿ ಕೂಡಿಸಿ ತಮ್ಮ ಕೈಗೊಂಬೆಯಾಗಿ ಕುಣಿಯುವ ಕೋಮುದ್ವೇಷಿ ಪಡ್ಟಿಡೆಗೆ ಟಿಕೆಟ್ ಕೊಟ್ಟು,,ಮಂಗ ಮಾಡುವರು,,,

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X