ಬೆಳಗಾವಿ | ಪ್ರಾಮಾಣಿಕತೆ ಮೆರೆದ ಅಥಣಿ ‘108 ಆ್ಯಂಬುಲೆನ್ಸ್‌’ ಸಿಬ್ಬಂದಿ

Date:

Advertisements

ಅಪಘಾತದಲ್ಲಿ ಮೃತಪಟ್ಟಿದ್ದ ವ್ಯಕ್ತಿಯೊಬ್ಬರ ಹಣವನ್ನು ಅವರ ಕುಟುಂಬಕ್ಕೆ ಮರಳಿಸಿ ಅಥಣಿಯ ‘108 ಆ್ಯಂಬುಲೆನ್ಸ್‌’ ಸಿಬ್ಬಂದಿ ಪ್ರಾಮಾಣಿಕತೆ ಮೆರೆದಿದ್ದಾರೆ. ಗ್ರಾಮಸ್ಥರು ಮತ್ತು ಆಸ್ಪತ್ರೆ ಸಿಬ್ಬಂದಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಡಿಸೆಂಬರ್ 27ರಂದು ವ್ಯಕ್ತಿಯೊಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದರು. ಅವರ ಮೃತದೇಹವನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಈ ವೇಳೆ, ಅವರ ಕುಟುಂಬಸ್ಥರು ಯಾರೂ ಇಲ್ಲದ ಕಾರಣ, ಅವರ ಜೇಬಿನಲ್ಲಿದ್ದ 30,500 ರೂ. ಹಣವನ್ನು ಆ್ಯಂಬುಲೆನ್ಸ್‌ ಸಿಬ್ಬಂದಿ ನಿರ್ಮಲಾ ಬನಸೋಡೆ ಮತ್ತು ಚಾಲಕ ವಿಜಯಕುಮಾರ್ ಎತ್ತಿಟ್ಟಿದ್ದರು. ಅವರ ಕಟುಂಬಸ್ಥರು ಬಂದ ಬಳಿಕ ಹಣವನ್ನು ಅವರಿಗೆ ಮರಳಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ, ಅನಾರೋಗ್ಯಕ್ಕೀಡಾಗಿದ್ದ ವೃದ್ಧ ಮಹಿಳೆ ಪಾರ್ವತೆವ್ವ ಪವಾರ ಎಂಬವರನ್ನು ಆ್ಯಂಬುಲೆನ್ಸ್‌ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ, ಆಕೆ ಮೃತಪಟ್ಟಿದ್ದರು. ಆಕೆಯ ಬಳಿಯಿದ್ದ ಬಂಗಾರದ ಒಡವೆಗಳನ್ನು ಎತ್ತಿಟ್ಟಿದ್ದ ಇದೇ ಸಿಬ್ಬಂದಿಗಳು, ಒಡವೆಗಳನ್ನು ಆಕೆಯ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

Advertisements

ಎರಡು ಪ್ರತ್ಯೆಕ ಪ್ರಕರಣಗಳಲ್ಲಿ ಹಣ ಮತ್ತು ಆಭರಣಗಳನ್ನು ಮರಳಿ ಕುಟುಂಬಕ್ಕೆ ಹಣ ನೀಡಿ ಆ್ಯಂಬುಲೆನ್ಸ್‌ ಸಿಬ್ಬಂದಿಗಳಾದ ನಿರ್ಮಲಾ ಬನಸೋಡೆ ಹಾಗೂ ಡ್ರೈವರ ವಿಜಯ ಕುಮಾರ್ ಅವರ ಪ್ರಾಮಾಣಿಕತೆಗೆ ಆಸ್ಪತ್ರೆಯ ಸಿಬ್ಬಂದಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X