ಮಹಾರಾಷ್ಟ್ರ | ಸಾರ್ವಜನಿಕ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷಗೈದ ಬಿಜೆಪಿ ಶಾಸಕ; ವಿಡಿಯೋ ವೈರಲ್

Date:

Advertisements

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಭಾಗವಹಿಸಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಶಾಸಕನೋರ್ವ, ಕರ್ತವ್ಯನಿರತ ಪೊಲೀಸ್ ಅಧಿಕಾರಿಯೋರ್ವರಿಗೆ ಕಪಾಳಮೋಕ್ಷಗೈದ ಘಟನೆ ನಡೆದಿದೆ.

ಘಟನೆಯ ದೃಶ್ಯಾವಳಿಗಳು ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

ಅಜಿತ್ ಪವಾರ್ ಅವರ ಕಾರ್ಯಕ್ರಮವೊಂದರ ವೇದಿಕೆಯಿಂದ ಇಳಿಯುತ್ತಿದ್ದ ಬಿಜೆಪಿ ಶಾಸಕ ಸುನೀಲ್ ಕಾಂಬ್ಳೆ ಅವರು ಸಮತೋಲನ ತಪ್ಪಿ ಬಿದ್ದಿದ್ದಾರೆ. ಈ ವೇಳೆ ಅಲ್ಲೇ ಇದ್ದ ಪೊಲೀಸ್ ಅಧಿಕಾರಿಯೊಬ್ಬರು ಅವರನ್ನು ಹಿಡಿದಿದ್ದಾರೆ. ಅಷ್ಟಕ್ಕೇ ಕೋಪಗೊಂಡ ಬಿಜೆಪಿ ಶಾಸಕ ಸುನೀಲ್ ಕಾಂಬ್ಳೆ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ್ದಾರೆ.

Advertisements

ಈ ಘಟನೆಯ ದೃಶ್ಯಾವಳಿಗಳು ಕ್ಯಾಮರಾವೊಂದರಲ್ಲಿ ದಾಖಲಾಗಿವೆ. ಈ ಸಮಯದಲ್ಲಿ ನಿಜವಾಗಿಯೂ ಏನಾಯಿತು ಎಂದು ಯಾರಿಗೂ ತಿಳಿದುಬಂದಿಲ್ಲವಾದರೂ, ಎಡಗೈ ಬಳಸಿ ಕಪಾಳಮೋಕ್ಷ ಮಾಡಿರುವುದು ಸೆರೆಯಾಗಿದೆ. ಕಪಾಳಕ್ಕೆ ಬಾರಿಸಿಕೊಂಡ ಪೊಲೀಸ್ ಅಧಿಕಾರಿ ಸಿವಿಲ್ ಬಟ್ಟೆಯನ್ನು ಧರಿಸಿದ್ದರು.

ಪುಣೆಯ ಸಾಸೂನ್ ಆಸ್ಪತ್ರೆಯಲ್ಲಿ ತೃತೀಯಲಿಂಗಿಗಳ ಆರೈಕೆಗಾಗಿ ವಿಶೇಷ ವಾರ್ಡ್ ಅನ್ನು ಸಿದ್ಧಪಡಿಸಲಾಗಿತ್ತು. ಅದನ್ನು ಮಹಾರಾಷ್ಟ್ರ ರಾಜ್ಯದ ಉಪಮುಖ್ಯಮಂತ್ರಿ ಮತ್ತು ಪುಣೆ ಜಿಲ್ಲೆಯ ಉಸ್ತುವಾರಿ ಸಚಿವ ಅಜಿತ್ ಪವಾರ್ ಉದ್ಘಾಟನೆ ಮಾಡುತ್ತಿದ್ದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ.

ಬಿಜೆಪಿ ಶಾಸಕ ಸುನೀಲ್ ಕಾಂಬ್ಳೆ ಅವರು ಮಹಾರಾಷ್ಟದಲ್ಲಿ ಸದಾ ವಿವಾದಗಳಲ್ಲಿ ಸಿಲುಕುತ್ತಲೇ ಬಂದಿದ್ದಾರೆ. ಈ ಹಿಂದೆ ಪಿಎಂಸಿಯಲ್ಲಿ ಮಹಿಳಾ ಉದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಇವರ ಮೇಲೆ ಕೇಳಿ ಬಂದಿತ್ತು. ಇದೀಗ ಈ ಘಟನೆಯ ಬಳಿಕ ಮತ್ತೊಮ್ಮೆ ವಿವಾದದಲ್ಲಿ ಸಿಲುಕಿದ್ದು, ಶಾಸಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ.

ಈ ಘಟನೆ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಅವರ ಎದುರೇ ನಡೆದಿದ್ದು, ಶಾಸಕರ ವಿರುದ್ಧ ಪ್ರಕರಣ ದಾಖಲಿಸಿ ಪೊಲೀಸರು ಕ್ರಮ ಕೈಗೊಳ್ಳುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X