1992ರ ಹುಬ್ಬಳ್ಳಿ ಗಲಭೆ ಪ್ರಕರಣ | ಬಂಧಿತ ಆರೋಪಿ ಶ್ರೀಕಾಂತ್ ಪೂಜಾರಿಗೆ ಷರತ್ತುಬದ್ಧ ಜಾಮೀನು

Date:

Advertisements

ರಾಜ್ಯದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿರುವ 1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ್ ಪೂಜಾರಿಗೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಮೂವತ್ತು ವರ್ಷಗಳ ಹಿಂದಿನ ಹುಬ್ಬಳ್ಳಿ ಗಲಭೆ ಆರೋಪಿಯಾಗಿರುವ ಶ್ರೀಕಾಂತ್ ಪೂಜಾರಿ ಅವರನ್ನು ಇತ್ತೀಚೆಗೆ ಬಂಧಿಸಲಾಗಿತ್ತು. ಈತನ ಬಂಧನದ ಬಳಿಕ ರಾಮಮಂದಿರದ ಉದ್ಘಾಟನೆಯ ಸಂದರ್ಭ ಕರಸೇವಕನನ್ನು ರಾಜ್ಯ ಸರ್ಕಾರ ಬಂಧಿಸಿದೆ ಎಂದು ಆರೋಪಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಈ ಬೆಳವಣಿಗೆ ರಾಜ್ಯದಲ್ಲಿ ರಾಜಕೀಯ ಕೆಸೆರೆರಚಾಟಕ್ಕೂ ಕಾರಣವಾಗಿತ್ತು.

ಈ ನಡುವೆ ಬಂಧಿತ ಶ್ರೀಕಾಂತ್ ಪೂಜಾರಿ ಜಾಮೀನಿಗಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರು, ಷರತ್ತುಬದ್ದ ಜಾಮೀನು ಮಂಜೂರು ಮಾಡಿದ್ದಾರೆ. ಹುಬ್ಬಳ್ಳಿ ನಗರ ಠಾಣೆಯ ಪೊಲೀಸರು ಈತನನ್ನು ಬಂಧಿಸಿದ್ದರು.

Advertisements

ಡಿ. 5, 1992ರಂದು ಹುಬ್ಬಳ್ಳಿ ನಗರದಲ್ಲಿ ಸಂಭವಿಸಿದ್ದ ಹಿಂಸಾಚಾರ ಸಂದರ್ಭ ಮಳಿಗೆಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಶ್ರೀಕಾಂತ್ ಪೂಜಾರಿ ಸೇರಿದಂತೆ ಒಟ್ಟು 9 ಜನರ ವಿರುದ್ಧ ಹುಬ್ಬಳ್ಳಿಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಿಜೆಪಿ ನಾಯಕರು ಶ್ರೀಕಾಂತ್ ಪೂಜಾರಿಯನ್ನು ಕರಸೇವಕ ಎಂದು ಹೇಳಿಕೊಂಡಿತ್ತು. ಹೀಗಾಗಿ, ಶ್ರೀಕಾಂತ್ ವಿರುದ್ಧ ಈ ಹಿಂದೆ ಅಂದರೆ 1992 ರಿಂದ 2014ರವರೆಗೆ ಒಟ್ಟು 16 ಪ್ರಕರಣಗಳು ದಾಖಲಾಗಿದ್ದಾಗಿ ಸ್ವತಃ ಸರ್ಕಾರವೇ ಮಾಹಿತಿ ಬಹಿರಂಗಗೊಳಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X