ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ ಆಹಾರದಲ್ಲಿ ಜಿರಳೆ ಪತ್ತೆ: ಪ್ರಶ್ನಿಸಿದ್ದಕ್ಕೆ ಹೈಕೋರ್ಟ್‌ ವಕೀಲೆ ಮೇಲೆ ಹಲ್ಲೆ

Date:

Advertisements

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ವೊಂದಕ್ಕೆ ಊಟಕ್ಕೆ ತೆರಳಿದ ವಕೀಲರೊಬ್ಬರಿಗೆ ನೀಡಿದ ಆಹಾರದಲ್ಲಿ ಜಿರಳೆ ಕಾಣಿಸಿಕೊಂಡಿದ್ದು, ಈ ಬಗ್ಗೆ ಪ್ರಶ್ನಿಸಿದ್ದಕ್ಕೆ ಹೋಟೆಲ್‌ ಸಿಬ್ಬಂದಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಶೀಲಾ ದೀಪಕ್‌ ವಕೀಲೆ. ಗುರುವಾರ ಸಂಜೆ ಬೆಂಗಳೂರಿನ ರಾಜಭವನ ರಸ್ತೆಯಲ್ಲಿರುವ ಕ್ಯಾಪಿಟಲ್ ಹೋಟೆಲ್‌ಗೆ ಊಟಕ್ಕೆಂದು ತೆರಳಿದ್ದಾರೆ. ಊಟಕ್ಕೆಂದು ರೋಟಿ ಹಾಗೂ ಪನ್ನೀರ್ ಗ್ರೇವಿ ಆರ್ಡರ್ ಮಾಡಿದ್ದರು. ಒಂದೆರಡು ತುತ್ತು ತಿಂದ ಬಳಿಕ ಪನ್ನೀರ್ ಗ್ರೇವಿಯಲ್ಲಿ ಸತ್ತ ಜಿರಳೆ ಪತ್ತೆಯಾಗಿದೆ.

ಜಿರಳೆ ಪತ್ತೆಯಾದ ಕೂಡಲೇ ಹೋಟೆಲ್ ಸಿಬ್ಬಂದಿಯನ್ನ ವಕೀಲೆ ತರಾಟೆಗೆ ತೆಗೆದುಕೊಂಡಿದ್ದರು. ಹೋಟೆಲ್ ಸಿಬ್ಬಂದಿ ‘ಬೇರೆ ಊಟ ನೀಡುವುದಾಗಿ’ ಗ್ರಾಹಕರಿಗೆ ಮನವರಿಕೆ ಮಾಡಿಕೊಂಡಿದ್ದಾರೆ.

Advertisements

ವಕೀಲೆ, ತಮ್ಮ ಮೊಬೈಲ್‌ ಫೋನ್‌ನಲ್ಲಿ ಜಿರಳೆ ಫೋಟೋ ಸೆರೆ ಹಿಡಿದಿದ್ದಾರೆ. ನಂತರ, ಅಡುಗೆ ಮನೆಯ ವಿಡಿಯೋ ರೆಕಾರ್ಡ್ ಮಾಡಲು ಮುಂದಾದಾಗ ಇಬ್ಬರು ಮಹಿಳಾ ಸಿಬ್ಬಂದಿ ಮತ್ತು ಒಬ್ಬ ಪುರುಷ ಕೆಲಸಗಾರ ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆಹಾರ ಅಧಿಕಾರಿಗೆ ಕರೆ ಮಾಡಿ ತಮಗೆ ನೀಡಿದ ಆಹಾರದ ಬಗ್ಗೆ ದೂರು ನೀಡಿದ್ದಾರೆ. ಟ್ರಾಫಿಕ್​​ನಿಂದಾಗಿ ಅದೇ ದಿನ ಹೋಟೆಲ್ ತಲುಪಲು ಸಾಧ್ಯವಾಗದ ಕಾರಣ ಮರುದಿನ ಹೋಟೆಲ್ ಪರಿಶೀಲನೆ ನಡೆಸುವುದಾಗಿ ಆಹಾರ ಅಧಿಕಾರಿ ಶೀಲಾ ಅವರಿಗೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದೆಹಲಿ, ಪಂಜಾಬ್ ಮಾದರಿಯಲ್ಲಿ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಿ: ಸಿದ್ದರಾಮಯ್ಯಗೆ ಎಎಪಿ ಪತ್ರ

ಆಹಾರ ಅಧಿಕಾರಿ ಹೋಟೆಲ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸುವವರೆಗೂ ಅಡುಗೆ ಕೋಣೆಯನ್ನು ಸ್ವಚ್ಛಗೊಳಿಸದಂತೆ ಸಿಬ್ಬಂದಿಗೆ ಶೀಲಾ ಮನವಿ ಮಾಡಿದ್ದರು. ಆದರೆ, ಶೀಲಾ ಅವರು ಆಹಾರ ಅಧಿಕಾರಿಗೆ ದೂರು ನೀಡಿದ ನಂತರ ಹೋಟೆಲ್ ಸಿಬ್ಬಂದಿ ಅಡುಗೆ ಕೋಣೆಯನ್ನು ಸ್ವಚ್ಛಗೊಳಿಸಲು ಆರಂಭಿಸಿದರು ಎಂದು ಹೇಳಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ವಕೀಲೆ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X