ಹಾವೇರಿ | ಕಾಲಿಯಾಗುತ್ತಿದೆ ತುಂಗಭದ್ರಾ ನದಿ, ಆತಂಕದಲ್ಲಿ ರೈತರು

Date:

Advertisements

ಬೇಸಿಗೆಗೂ ಮುನ್ನವೇ ತುಂಗಭದ್ರಾ ನದಿಯ ನೀರು ಖಾಲಿಯಾಗುತ್ತಿದ್ದು ಶಿವಮೊಗ್ಗ, ದಾವಣಗೆರೆ, ಹಾವೇರಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ರೈತರಲ್ಲಿ ಆತಂಕ ಮನೆಮಾಡಿದೆ.

ಡಿಸೆಂಬರ್‌ನಿಂದ ಫೆಬ್ರುವರಿ ತಿಂಗಳಷ್ಟರಲ್ಲಿ ರೈತರು ಕಬ್ಬು, ಭತ್ತ ನಾಟಿ ಮಾಡುತ್ತಾರೆ. ಎಲ್ಲೆಡೆಯಲ್ಲೂ ನಾಟಿ ಕಾರ್ಯ ಭರದಿಂದ ಸಾಗಿದೆ. ಗೋವಿನಜೋಳ, ಶೇಂಗಾ, ಬಾಳೆ, ಅಡಿಕೆ, ಹೈಬ್ರಿಡ್ ಜೋಳ, ಈಗಾಗಲೆ ಬಿತ್ತನೆ ಮಾಡಿದ್ದಾರೆ. ಆದರೆ, ತುಂಗಭದ್ರಾ ನದಿಯಲ್ಲಿ ನೀರು ಖಾಲಿಯಾಗುತ್ತಿರುವುದು ಕಂಡು ರೈತರು ಚಿಂತೆಗೀಡಾಗಿದ್ದಾರೆ.

ಬೀಕರ ಬರಗಾಲದಿಂದ ರೈತರು ತತ್ತರಿಸಿದ್ದಾರೆ. ಸಾವಿರಾರು ಎಕರೆ ಪ್ರದೇಶದಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೀಜ ಗೊಬ್ಬರಗಳನ್ನು ಹಾಕಿ ಬೆಳೆ ಬೆಳೆಯುತ್ತಿದ್ದಾರೆ. ಆದರೆ, ತುಂಗಭದ್ರಾ ನದಿಯಲ್ಲಿ ನೀರು ಖಾಲಿಯಾಗುತ್ತಿರುವುದು ರೈತರನ್ನು ನಿದ್ದೆಗೆಡಿಸಿದೆ. ಸರ್ಕಾರ ತುಂಗಭದ್ರಾ ನದಿಗೆ ನೀರು ಹರಿಸುವುದಕ್ಕೆ ವ್ಯವಸ್ಥೆ ಮಾಡಬೇಕು ಎಂದು ರೈತರು ಆಗ್ರಹಿಸುತ್ತಿದ್ದಾರೆ.

Advertisements

ಹಾವನೂರ, ಮೈಲಾರ ಹಾಗೂ ಕುರವತ್ತಿ ಗ್ರಾಮಗಳ ದೊಡ್ಡ ಜಾತ್ರೆಗಳು ಫೆಬ್ರುವರಿಯಿಂದ ನಡೆಯುತ್ತಿವೆ. ಈ ಜಾತ್ರೆಗಳಿಗೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಭಕ್ತರಿಗೆ ಕುಡಿಯುವ ನೀರಿನ ಅನುಕೂಲಕ್ಕೆ ಕೂಡಲೇ ತುಂಗಭದ್ರಾ ನದಿಗೆ ನೀರು ಬಿಡಬೇಕೆಂಬುದು ಜನರ ಬೇಡಿಕೆ.

ತುಂಗಭದ್ರಾ ನದಿ ಖಾಲಿ ಆಗುತ್ತಿರುವುದರಿಂದ ಗುತ್ತಲ ಪಟ್ಟಣಕ್ಕೆ ತುಂಗಭದ್ರಾ ನದಿಯ ನೀರನ್ನು 20ರಿಂದ 25ದಿನಗಳಿಗೆ ಪೊರೈಕೆ ಮಾಡಲಾಗುತ್ತಿತ್ತು. ಆದರೆ, ಈಗ ನದಿ ನೀರು ಖಾಲಿ ಆಗಿರುವುದರಿಂದ ಪಟ್ಟಣಕ್ಕೆ ಕುಡಿಯುವ ನೀರು ಸ್ಥಗಿತಗೊಳಿಸಲಾಗಿದೆ ಎಂದು ಪಟ್ಟಣ ಪಂಚಾಯಿತಿ ಸದಸ್ಯ ಸಂಜಯ ಬಡ್ಡಿವಡ್ಡರ ಮಾಹಿತಿ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X