₹105 ಕೋಟಿ ಬರ ಪರಿಹಾರ ಬಿಡುಗಡೆ | ರೈತರ ಮೂಗಿಗೆ ತುಪ್ಪ ಸವರುವ ಕೆಲಸ: ಮಾಜಿ ಸಿಎಂ ಬೊಮ್ಮಾಯಿ

Date:

Advertisements

ಕೇಂದ್ರ ಸರ್ಕಾರವು ಬರ ಪರಿಹಾರ ಬಿಡುಗಡೆಗೊಳಿಸದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ₹105 ಕೋಟಿ ಅನುದಾನ ಮಂಜೂರು ಮಾಡಿ ಇಂದು(ಜ.5) ಆದೇಶಿಸಿದೆ. ಸರ್ಕಾರದ ನಡೆಯನ್ನು ಪ್ರಶ್ನಿಸಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “₹105 ಕೋಟಿ ಬಿಡುಗಡೆ ಮಾಡಲು ಆರು ತಿಂಗಳು ರೈತರನ್ನು ಸತಾಯಿಸಬೇಕಿತ್ತೇ? ಇದು ರೈತರ ಮೂಗಿಗೆ ತುಪ್ಪ ಸವರುವ ಕೆಲಸ” ಎಂದು ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ರಾಜ್ಯದ ರೈತರಿಗೆ ಬರ ಪರಿಹಾರವಾಗಿ ಕೇವಲ 105 ಕೋಟಿ ರೂ. ಬಿಡುಗಡೆ ಮಾಡಲು ರಾಜ್ಯದ ರೈತರನ್ನು ಆರು ತಿಂಗಳು ಸತಾಯಿಬೇಕಾಗಿತ್ತಾ. 123 ತಾಲೂಕುಗಳು ಬರ ಪೀಡಿತ ಎಂದು ನೀವೇ ಘೋಷಣೆ ಮಾಡಿದ್ದು, ಅಷ್ಟು ದೊಡ್ಡ ಮಟ್ಟದ ಬರಕ್ಕೆ ಪ್ರತಿ ಹೆಕ್ಟೇರ್ ಗೆ ಕೇವಲ 2000 ರೂ. ನೀಡುತ್ತಿರುವುದೇಕೆ?” ಎಂದು ಕೇಳಿದ್ದಾರೆ.

“ರೈತರ ಖಾತೆಗಳಿಗೆ ಆಧಾರ್ ಲಿಂಕ್ ಆಗಿರುವ ಸತ್ಯ ಹೊರಬರುತ್ತಿದ್ದಂತೆ, ತಕ್ಷಣ ರೈತರ ಖಾತೆಗಳಿಗೆ ಹಣ ಬಿಡುಗಡೆ ಮಾಡಲು ಆದೇಶ ಮಾಡಿದ್ದು, ನೀವು ರಾಜಕಾರಣಕ್ಕಾಗಿ, ವಿಳಂಬ ಧೋರಣೆ ಅನುಸರಿಸಲು ಆಧಾರ್ ಲಿಂಕ್ ಮಾಡುವ ಸುಳ್ಳು ಕಥೆ ಹೇಳಿದ್ದೀರಿ ಎನ್ನುವುದು ನಿಮ್ಮ ನಡೆಯಿಂದ ಸ್ಪಷ್ಟವಾಗುತ್ತದೆ” ಎಂದು ಕಿಡಿಕಾರಿದ್ದಾರೆ.

Advertisements

“ರಾಜ್ಯದ 69 ಲಕ್ಷ ರೈತರ ಖಾತೆಗಳಿಗೆ ಆಧಾರ್ ಲಿಂಕ್ ಮಾಡಿರುವ ಮಾಹಿತಿ ಸರ್ಕಾರದ ಬಳಿ ಇದ್ದರೂ, ಸುಳ್ಳು ಹೇಳಿ ಜನರ ದಾರಿ ತಪ್ಪಿಸಿದ ಉದ್ದೇಶವೇನು? ನಮ್ಮ ಅವಧಿಯಲ್ಲಿ 2022-23 ನೇ ಸಾಲಿನಲ್ಲಿ ಪ್ರವಾಹದಿಂದ 13.09 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹಾನಿಯಾದ ಬೆಳೆಗೆ 14.63 ಲಕ್ಷ ರೈತರ ಖಾತೆಗೆ ನೇರವಾಗಿ 2,031 ಕೋಟಿ ರೂ.ಗಳನ್ನು 2 ತಿಂಗಳೊಳಗೆ ಜಮೆ ಮಾಡಲಾಗಿತ್ತು” ಎಂದು ಬೊಮ್ಮಾಯಿ ತಿಳಿಸಿದ್ದಾರೆ.

“ನಮ್ಮ ಅವಧಿಯಲ್ಲಿ ಪ್ರವಾಹದಿಂದ ಬೆಳೆ ಹಾನಿಯಾಗಿದ್ದಾಗ ಕೇಂದ್ರ ಸರ್ಕಾರದ ಅನುದಾನಕ್ಕಾಗಿ ಕಾಯದೇ ರಾಜ್ಯ ಸರ್ಕಾರವೇ ಎಸ್‌ಡಿಆರ್‌ಎಫ್ ಮಾರ್ಗಸೂಚಿ ದರಕ್ಕಿಂತಲೂ ಎರಡು ಪಟ್ಟು ಹೆಚ್ಚಳ ಮಾಡಿ ಮಳೆಯಾಶ್ರಿತ ಪ್ರದೇಶದ ಬೆಳೆ ಹಾನಿಗೆ ಎಸ್‌ಡಿಆರ್‌ಎಫ್ ದರ 6,800 ಇದ್ದರೆ, ನಮ್ಮ ಸರ್ಕಾರ 13,600 ರೂ.ಗಳನ್ನು ಪರಿಹಾರ ನೀಡಿದ್ದೆವು. ನೀರಾವರಿ ಜಮೀನಿಗೆ ಎಸ್‌ಡಿಆರ್‌ಎಫ್ ಮಾರ್ಗಸೂಚಿ ದರ 13,500 ಇದ್ದರೆ, ನಮ್ಮ ಸರ್ಕಾರದಿಂದ 25,000 ರೂ. ಪರಿಹಾರ ನೀಡಿದ್ದೆವು. ತೋಟಗಾರಿಕಾ ಬೆಳೆ ಹಾನಿಗೆ ಎಸ್‌ಡಿಆರ್‌ಎಫ್ ಮಾರ್ಗಸೂಚಿ ದರ 18,000 ರೂ. ಇದ್ದರೆ, ನಾವು 28,000 ರೂ. ಪರಿಹಾರ ನೀಡಿದ್ದೇವು” ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

“ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಕನಿಷ್ಠ ₹50,000ದಿಂದ 5 ಲಕ್ಷದವರೆಗೆ ರಾಜ್ಯ ಸರ್ಕಾರದಿಂದಲೇ ಪರಿಹಾರ ನೀಡಿದ್ದೆವು. ಇದು ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮಾರ್ಗಸೂಚಿ ದರಕ್ಕಿಂತ ಹೆಚ್ಚು. ಪ್ರವಾಹದಿಂದ ಬಾಧಿತರಾದ ಸಂತ್ರಸ್ತರ ನೆರವಿಗೆ ಪರಿಷ್ಕೃತ ದರದಂತೆ ರಾಜ್ಯ ಸರ್ಕಾರ 3326 ಕೋಟಿ ರೂ. ವೆಚ್ಚ ಮಾಡಿತ್ತು. ಅಲ್ಲದೇ ಮೂಲ ಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ. ಬಿಡುಗಡೆ ಮಾಡಿದ್ದೆವು.” ಎಂದು ಮಾಜಿ ಸಿಎಂ ಅಂಕಿ-ಅಂಶಗಳ ಮಾಹಿತಿ ನೀಡಿದ್ದಾರೆ.

“ರಾಜ್ಯದ ಜನರ ಸಂಕಷ್ಟದ ಬಗ್ಗೆ ಕಾಳಜಿ ಇರುವ ಯಾವ ಮುಖ್ಯಮಂತ್ರಿಯೂ ತನ್ನ ತಪ್ಪು ಮುಚ್ಚಿಕೊಳ್ಳಲು ಬೇರೆಯವರ ಕಡೆಗೆ ಬೆರಳು ಮಾಡಿ ತೋರಿಸುವುದಿಲ್ಲ. ತಮ್ಮ ಗ್ಯಾರಂಟಿ ಯೋಜನೆಗಳೂ ಅಸಮರ್ಪಕವಾಗಿದ್ದು, ನಿಜವಾದ ಫಲಾನುಭವಿಗಳಿಗೆ ತಲುಪಿಸದೇ ತಾಂತ್ರಿಕ ತೊಂದರೆಯ ಕಾರಣ ಹೇಳುತ್ತಿದ್ದೀರಿ. ಜಿಲ್ಲಾಧಿಕಾರಿಗಳ ಖಾತೆಗಳಲ್ಲಿ ಹಣವಿದ್ದರೂ, ಅದನ್ನು ಬಿಡುಗಡೆ ಮಾಡದೇ ಕೇವಲ ₹105 ಕೋಟಿ ಬಿಡುಗಡೆ ಮಾಡಿ ರೈತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದೀರಿ” ಎಂದು ಬೊಮ್ಮಾಯಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

“ರಾಜ್ಯದ ರೈತರ ಬಗ್ಗೆ ನಿಮಗೆ ಕಳಕಳಿ ಇದ್ದರೆ, ಕೇಂದ್ರದ ಅನುದಾನದ ನೆಪ ಹೇಳದೇ ಕೂಡಲೇ ಸಂಪೂರ್ಣ ಬೆಳೆ ಪರಿಹಾರ ಬಿಡುಗಡೆ ಮಾಡಿ. ಇಲ್ಲದಿದ್ದರೆ ಸಂಕಷ್ಟಕ್ಕೆ ಬಾರದ ನಿಷ್ಪ್ರಯೋಜಕ ಸರ್ಕಾರ ನಿಮ್ಮದು ಎಂದು ರಾಜ್ಯದ ರೈತರು ಶಾಪ ಹಾಕುವುದು ನಿಶ್ಚಿತ” ಎಂದು ಬೊಮ್ಮಾಯಿ ಕಿಡಿಕಾರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಪ್ರವಾಹ ಪೀಡಿತ ಪ್ರದೇಶಗಳ ಪ್ರವಾಸ ಮಾಡಲು ಬಂದ ನಿಮ್ಮ ಗೃಹ ಸಚಿವ ಬೆಳಗಾಂ ವಿಮಾನ ನಿಲ್ದಾಣದಲ್ಲಿ ಭಾಷಣ ಮಾಡಿ ವಾಪಸ್ ಹೋಗಿದ್ದು ಮರೆತು ಹೋಗಿದೆ ಮಾಜಿಗಳಿಗೆ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X