ಚಿತ್ರದುರ್ಗದಲ್ಲಿ ಜ.28ರಂದು ಶೋಷಿತರ ಜಾಗೃತಿ ಸಮಾವೇಶ

Date:

Advertisements

ಸಂವಿಧಾನ, ಸಾಮಾಜಿಕ ನ್ಯಾಯ, ಸಹಬಾಳ್ವೆ ಮತ್ತು ಸ್ವಾಭಿಮಾನದ ಸಂರಕ್ಷಣೆಗಾಗಿ ಚಿತ್ರದುರ್ಗದ ಮಾದಾರ ಚನ್ನಯ್ಯ ಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ಶೋಷಿತರ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕೆ.ಎಂ ರಾಮಚಂದ್ರಪ್ಪ ತಿಳಿಸಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಶೋಷಿತ ಸಮುದಾಯಗಳ ಮಹಾ ಒಕ್ಕೂಟ, ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಸಮಾವೇಶ ಆಯೋಜಿಸಲಾಗಿದೆ. ಜನವರಿ 28ರಂದು ಸಮಾವೇಶ ನಡೆಯಲಿದೆ” ಎಂದು ತಿಳಿಸಿದ್ದಾರೆ.

“ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರು ಹಾಗೂ ಮುಖಂಡರು ಭಾಗಿಯಾಗಲಿದ್ದಾರೆ. ಸುಮಾರು 10 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ” ಎಂದಿದ್ದಾರೆ.

Advertisements

“ಕಾಂತರಾಜು ವರದಿ ಸ್ವೀಕರಿಸಿ, ಯಥಾವತ್ತಾಗಿ ಅಂಗೀಕರಿಸಬೇಕು. ಕೇಂದ್ರ ಸರ್ಕಾರ ಜಾತಿವಾರು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡಿಸಬೇಕು. ಇಡಬ್ಲ್ಯೂಎಸ್ ಶೇ.10 ಮೀಸಲಾತಿ ರದ್ದುಪಡಿಸಬೇಕು. ಮಹಿಳಾ ರಾಜಕೀಯ ಮೀಸಲಾತಿ ಕಾಯಿದೆ ಕೂಡಲೇ ಜಾರಿ ಮಾಡಬೇಕು. ರಾಜಕೀಯ ಕ್ಷೇತ್ರದಲ್ಲೂ ಒಳಮೀಸಲಾತಿ ತರಬೇಕು. ರಾಜಕೀಯ ಮೀಸಲಾತಿಯಲ್ಲಿ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಹಿಂದುಳಿದ ಜಾತಿಗಳಿಗೆ ಮತ್ತು ಅಲ್ಪಸಂಖ್ಯಾತರಿಗೆ ಅವಕಾಶ ಕಲ್ಪಿಸಬೇಕು ಎಂಬುದು ಸೇರಿದಂತೆ ಹಲವು ಹಕ್ಕೊತ್ತಾಯಗಳನ್ನು ಸಮಾವೇಶದಲ್ಲಿ ಮಂಡಿಸಲಾಗುವುದು” ಎಂದು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಹೊದಿಗೆರೆ ರಮೇಶ್.ಡಿ.ಬಸವರಾಜ್, ಎಣ್ಣೆಗೆರೆ ಆರ್ ವೆಂಕಟರಾಮು. ಎಂ.ರಾಮಚಂದ್ರಪ್ಪ, ಅಂಜಿನಪ್ಪ,ಸುಬ್ರಹ್ಮಣ್ಯ, ಹೆಚ್.ಚಂದ್ರಪ್ಪ ಮತ್ತಿತರರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X