ಕೋಮು ದ್ವೇಷ ಹರಡಲು ಯತ್ನ: ಪುನೀತ್ ಕೆರೆಹಳ್ಳಿ ವಿರುದ್ಧ ಪೊಲೀಸ್ ದೂರು

Date:

Advertisements

“ರಾಷ್ಟ್ರ ರಕ್ಷಣಾ ಪಡೆ” ಎಂಬ ವಾಟ್ಸಪ್ ಗ್ರೂಪಿನ ಮೂಲಕ ಕೋಮು ದ್ವೇಷ ಹರಡಲು ಪ್ರಯತ್ನಿಸುತ್ತಿರುವ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಅಲಸೂರು ಪೊಲೀಸ್ ಠಾಣೆಯ ಸೈಬರ್‌ ಅಪರಾಧ ವಿಭಾಗದಲ್ಲಿ ದೂರು ದಾಖಲಿಸಲಾಗಿದೆ.

ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಬಿ ಎಲ್‌ ಚೇತನ್‌ ಎಂಬುವರು ಪುನೀತ್‌ ಕೆರೆಹಳ್ಳಿ ವಿರುದ್ಧ ದೂರು ದಾಖಲಿಸಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ  “ಜೈ ರಾಷ್ಟ್ರ ರಕ್ಷಣಾ ಪಡೆ” ಎಂಬ ಹೆಸರಿನಡಿ ಸಕ್ರಿಯವಾಗಿರುವ ವಾಟ್ಸಾಪ್ ಗ್ರೂಪ್‌ನಲ್ಲಿ 95907 34057 ಸಂಖ್ಯೆಯ ಮೂಲಕ  ಕರ್ನಾಟಕದಲ್ಲಿ ಕೋಮುಗಲಭೆ ಎಬ್ಬಿಸಲು ಪುನೀತ್ ಕೆರೆಹಳ್ಳಿ ಪ್ರಯತ್ನಿಸುತ್ತಿದ್ದಾನೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಲಾ ಸಿಬ್ಬಂದಿಗೆ ‘ನಡತೆ ಸರ್ಟಿಫಿಕೇಟ್‌ʼ ಮಕ್ಕಳೇ ಕೊಡುವಂತಾಗಬೇಕು

“ಕರ್ನಾಟಕದಲ್ಲಿ ಕೋಮು ಗಲಭೆ ಎಬ್ಬಿಸೋಕೆ ಬಿಜೆಪಿ ನಮಗೆ ಬೆಂಬಲ ಕೊಟ್ಟಿದೆ, ಆದ್ದರಿಂದ ಎಲ್ಲ ಕಾರ್ಯಕರ್ತರು ತಯಾರಿಗಿ. ಎಲ್ಲಿ ಏನು ಮಾಡಬೇಕು ಎಂಬುದು ನಾವು ಈ ವಾಟ್ಸಾಪ್ ಗ್ರೂಪ್‌ನಲ್ಲಿ ಮಾಹಿತಿ ಕೊಡುತ್ತಾ ಇರುತ್ತೇವೆ” ಎಂದು ಸಂದೇಶ ತಿಳಿಸಿರುವುದು ಕರ್ನಾಟಕ ರಾಜ್ಯದಲ್ಲಿ ಕೋಮು ಗಲಭೆ ಸೃಷ್ಟಿಸಲು ಸಂಚು ರೂಪಿಸುತ್ತಿರುವುದು ಕಂಡುಬರುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ

ಆದ ಕಾರಣ ಮತ್ತೊಮ್ಮೆ ಕರ್ನಾಟಕದಲ್ಲಿ ಶಾಂತಿಯನ್ನು ಕದಡುವ, ಜನಾಂಗೀಯ ದ್ವೇಷವನ್ನು ಹುಟ್ಟು ಹಾಕುವ ಈತನ ಹಾಗೂ ಈತನ ಸಂಗಡಿಗರ ಬಂಧನದ ಜೊತೆ ಕೋಮು ಗಲಭೆ ಎಬ್ಬಿಸಲು ಸುಪಾರಿಯನ್ನು ಕೊಟ್ಟಿರುವ ಬಿಜೆಪಿ ಮುಖಂಡರ ವಿರುದ್ಧವು ತನಿಖೆ ನಡೆಸಬೇಕೆಂದು ದೂರಿನಲ್ಲಿ ತಿಳಿಸಲಾಗಿದೆ.

Kerehalli compliant 1

kerehalli compliant

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X