ಬೀದಿಬದಿ ವ್ಯಾಪಾರಿಗಳ ಆರ್ಥಿಕ ಹಿತರಕ್ಷಣೆ ಮತ್ತು ಸ್ವಾಭಿಮಾನದ ಬದುಕಿಗಾಗಿ ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ರಚನೆಯಾಗಿದೆ. ಇತ್ತೀಚೆಗೆ, ಸಂಘದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದೆ. 17 ಮಂದಿ ನಿರ್ದೇಶಕರನ್ನು ಆಯ್ಕೆ ಮಾಡಲಾಗಿದೆ. ಸಂಘದ ಅಧ್ಯಕ್ಷರಾಗಿ ಬಿ.ಕೆ ಇಮ್ತಿಯಾಝ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಹರೀಶ್ ಪೂಜಾರಿ ಅವಿರೋಧ ಆಯ್ಕೆಯಾಗಿದ್ದಾರೆ.
ಸಂಘದ ನಿರ್ದೇಶಕರಾಗಿ ಮೊಹಮ್ಮದ್ ಮುಸ್ತಫಾ, ದಯಾನಂದ ಶೆಟ್ಟಿ,ಮೊಹಮ್ಮದ್ ಆಸೀಫ್, ಮೇರಿ ಡಿಸೋಜಾ, ಮೇಬಲ್ ಡಿಸೋಜಾ,ಪಿ.ಜಿ ಅಬ್ದುಲ್ ರಫೀಕ್ ಬೆಂಗರೆ, ಅಬ್ದುಲ್ ರಹಿಮಾನ್, ಎಂ. ಕೆ ರಿಯಾಝ್, ಇಸ್ಮಾಯಿಲ್ ಉಳ್ಳಾಲ, ನೌಶಾದ್ ಉಳ್ಳಾಲ, ಶ್ರೀನಿವಾಸ್ ಕಾವೂರು, ಜಿತೇಂದ್ರ ಅತ್ತಾವರ, ಮೊಹಮ್ಮದ್ ತಂಜಿಲ್,ರೂಪೇಶ್ ನಾಯ್ಕ, ಆಯ್ಕೆಯಾಗಿದ್ದಾರೆ.
ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಯ ಹಿರಿಯ ಅಧಿಕಾರಿ ವಿಲಾಸ್ ಚುನಾವಣಾಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆ ನಡೆಸಿದ್ದಾರೆ.