ಚಿತ್ರಸಂತೆಗೆ 50 ಲಕ್ಷ ರೂ. ಅನುದಾನ: ಸಿಎಂ ಸಿದ್ದರಾಮಯ್ಯ ಭರವಸೆ

Date:

Advertisements

ಬೆಂಗಳೂರಿನ ಚಿತ್ರಸಂತೆಗೆ ಇನ್ನು ಮುಂದೆ ಸರ್ಕಾರದಿಂದ 50 ಲಕ್ಷ ರೂ. ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ನಗರದ ಕುಮಾರಕೃಪಾ ರಸ್ತೆಯಲ್ಲಿರುವ ಚಿತ್ರಕಲಾ ಪರಿಷತ್‌ನಲ್ಲಿ ಇಂದು 21ನೇ ಚಿತ್ರಸಂತೆ ಉದ್ಘಾಟಿಸಿ ಮಾತನಾಡಿದ ಅವರು, 1,500ಕ್ಕೂ ಹೆಚ್ಚು ಕಲಾವಿದರು ಚಿತ್ರಸಂತೆಯಲ್ಲಿ ಭಾಗವಹಿಸಿದ್ದಾರೆ. 24 ರಾಜ್ಯದ ಕಲಾವಿದರಿಗೆ ನನ್ನ ಕಡೆಯಿಂದ ಅಭಿನಂದನೆ. ಇನ್ಮುಂದೆ ಚಿತ್ರಸಂತೆಗೆ ಸರ್ಕಾರದಿಂದ 50 ಲಕ್ಷ ರೂ. ಅನುದಾನ ನೀಡುತ್ತೇನೆ ಎಂದರು.

“ಅತ್ಯಂತ ಸಂತೋಷದಿಂದ ಚಿತ್ರಸಂತೆಯನ್ನ ಉದ್ಘಾಟನೆ ಮಾಡಿದ್ದೇನೆ. 3 ರಿಂದ 4 ಲಕ್ಷ ಜನರು ಬರುತ್ತಾರೆ. ಬಿ ಎಲ್ ಶಂಕರ್ ಅವರು ಅರ್ಟ್ ಗ್ಯಾಲರಿ ಬಗ್ಗೆ ಹೇಳಿದ್ದಾರೆ. ನಮ್ಮ ಸರ್ಕಾರ ಅದಕ್ಕೆ ಬೆಂಬಲಿಸಲಿದೆ. ನಮ್ಮ ಸರ್ಕಾರ ತೆರೆದ ಮನಸ್ಸಿನಲ್ಲಿದೆ. ಎಲ್ಲ ರೀತಿಯ ಸಹಕಾರವನ್ನು ನಮ್ಮ ಸರ್ಕಾರ ನೀಡಲಿದೆ” ಎಂದು ಸಿಎಂ ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಲಾ ಸಿಬ್ಬಂದಿಗೆ ‘ನಡತೆ ಸರ್ಟಿಫಿಕೇಟ್‌ʼ ಮಕ್ಕಳೇ ಕೊಡುವಂತಾಗಬೇಕು

ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ ಎಲ್ ಶಂಕರ್ ಮಾತನಾಡಿ, ಇಂದಿನ ಚಿತ್ರಸಂತೆಯನ್ನು ಇಸ್ರೋ ವಿಜ್ಞಾನಿಗಳಿಗೆ ಅರ್ಪಿಸಿದ್ದೇವೆ. ಈ ಬಾರಿ ಚಿತ್ರಸಂತೆಯಲ್ಲಿ 1680 ಕಲಾವಿದರು ಭಾಗಿಯಾಗಿದ್ದಾರೆ. 205 ವಿಶೇಷಚೇತನರು, ಹಿರಿಯ ಕಲಾವಿದರು ಭಾಗಿಯಾಗಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಹೆಚ್​.ಕೆ. ಪಾಟೀಲ್, ಎಂ.ಸಿ. ಸುಧಾಕರ್, ಶಾಸಕರಾದ ಅಜಯ್ ಸಿಂಗ್​, ರಿಜ್ವಾನ್ ಅರ್ಷದ್​ ಸೇರಿ ಹಲವರು ಭಾಗಿಯಾಗಿದ್ದರು.

ಕಲಾವಿದರಿಂದ ನೇರವಾಗಿ ಮಾರಾಟ

ಈ ಬಾರಿಯ ಚಿತ್ರಸಂತೆಯನ್ನು ಶಿವನಂದ ಸರ್ಕಲ್​​ನಿಂದ ಸ್ಟೀಲ್ ಬ್ರಿಡ್ಜ್ ಕೆಳಗಿನವರೆಗೆ ಕಲಾವಿದರಿಗೆ ಅವಕಾಶ ಮಾಡಿಕೊಡಲಾಗಿದೆ. ಚಿತ್ರಸಂತೆಯಲ್ಲಿ 100 ರೂ.ದಿಂದ ಆರಂಭವಾಗಿ ಲಕ್ಷದವರೆಗೂ ಚಿತ್ರಕಲೆಗಳು ಮಾರಾಟಕ್ಕೆ ಇರಲಿವೆ. ಮೈಸೂರು ಶೈಲಿಯ ಕಲೆ, ತಂಜಾವೂರಿನ ಶೈಲಿ, ರಾಜಾಸ್ಥಾನಿ ಶೈಲಿ, ಮಧುಬನಿ ಶೈಲಿ, ತೈಲ‌ ಮತ್ತು ಜಲವರ್ಣಗಳಲ್ಲಿ ಚಿತ್ರಗಳನ್ನು ಬಿಡಸಲಾಗುತ್ತದೆ. ಅಲ್ಲದೇ ಆಕ್ರಿಕಲ್ , ಕೊಲಾಜ್, ಲಿಯೋಗ್ರಾಫ್, ಡೂಡಲ್ ಎಂಬೋಸಿಂಗ್, ವಿಡಿಯೋ ಕಲೆ, ಗ್ರಾಫಿಕ್ ಕಲೆ , ಶಿಲ್ಪ ಕಲೆ, ಸೇರಿದಂತೆ ಹಲವು ರೀತಿಯ ಕಲೆಗಳಿಗೆ ಹೆಚ್ಚು ಒತ್ತು ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X