ನಮ್ಮ ದ್ವೀಪವನ್ನು ಭಾರತ ಗುರಿಯಾಗಿಸಿದೆ: ಮಾಲ್ಡಿವ್ಸ್ ಸಚಿವ ಆರೋಪ

Date:

Advertisements

ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷದ್ವೀಪ ದ್ವೀಪ ಸಮೂಹಕ್ಕೆ ಭೇಟಿ ನೀಡಿದ ಕೆಲವು ದಿನಗಳ ನಂತರ ಮಾಲ್ಡೀವ್ಸ್ ಸಚಿವರೊಬ್ಬರು ಮಾಡಿದ ಟ್ವೀಟ್ ಸಾಮಾಜಿಕ ಮಾಧ್ಯಮದಲ್ಲಿ ವಿವಾದಕ್ಕೆ ಕಾರಣವಾಗಿದೆ

ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಾಗೂ ಲಕ್ಷದ್ವೀಪದಲ್ಲಿ ಹಲವಾರು ಯೋಜನೆಗಳಿಗೆ ಹಸಿರು ನಿಶಾನೆ ತೋರಲು ಈ ತಿಂಗಳ ಆರಂಭದಲ್ಲಿ ಪ್ರಧಾನಿ ಮೋದಿ ಕೇಂದ್ರಾಡಳಿತ ಪ್ರದೇಶವಾದ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದರು.

ಈ ಕುರಿತು ಪೋಸ್ಟ್ ಮಾಡಿದ್ದ ಮಾಲ್ಡೀವ್ಸ್ ಸಚಿವರೊಬ್ಬರು, ಭಾರತವು ಪ್ರವಾಸೋದ್ಯಮದಲ್ಲಿ ಮಾಲ್ದೀವ್ಸ್ ಅನ್ನು ಗುರಿಯಾಗಿಸಿಕೊಂಡಿದೆ. ಆದರೆ, ಸಮುದ್ರ ತೀರದ ಪ್ರವಾಸೋದ್ಯಮದಲ್ಲಿ ಮಾಲ್ದೀವ್ಸ್ ನೊಂದಿಗೆ ಸ್ಪರ್ಧಿಸಲು ಭಾರತವು ಸವಾಲುಗಳನ್ನು ಎದುರಿಸಲಿದೆ ಎಂದು ಹೇಳಿದ್ದರು.

Advertisements

ಲಕ್ಷದ್ವೀಪದಲ್ಲಿ ಸಮುದ್ರ ತೀರದ ಪ್ರವಾಸೋದ್ಯಮವನ್ನು ಉತ್ತೇಜಿಸಲಾಗುವುದು ಎಂಬ ಇತ್ತೀಚಿನ ಪೋಸ್ಟ್ ಗಳ ಹಿನ್ನೆಲೆಯಲ್ಲಿ ಸಚಿವರ ಈ ಪೋಸ್ಟ್ ಪ್ರಕಟವಾಗಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಲಾ ಸಿಬ್ಬಂದಿಗೆ ‘ನಡತೆ ಸರ್ಟಿಫಿಕೇಟ್‌ʼ ಮಕ್ಕಳೇ ಕೊಡುವಂತಾಗಬೇಕು

ಕೆಲವು ತಿಂಗಳ ಹಿಂದೆ ಮಾಲ್ದೀವ್ಸ್ ನ ನೂತನ ಅಧ್ಯಕ್ಷರಾಗಿ ಮುಹಮ್ಮದ್ ಮುಯಿಝು ಆಯ್ಕೆಯಾದಾಗಿನಿಂದ ಭಾರತ ಹಾಗೂ ಮಾಲ್ದೀವ್ಸ್ ನಡುವಿನ ಸಂಬಂಧ ಹಂತಹಂತವಾಗಿ ಹದಗೆಡುತ್ತಿದೆ.

ವಿವಿಧ ಮಾಧ್ಯಮ ವರದಿಗಳ ಪ್ರಕಾರ, ಮಾಲ್ದೀವ್ಸ್ ಚುನಾವಣೆಯ ಸಂದರ್ಭದಲ್ಲಿ ಹಾಲಿ ಅಧ್ಯಕ್ಷರಾದ ಮುಹಮ್ಮದ್ ಮುಯಿಝು 75 ಭಾರತೀಯ ಸೇನಾ ಸಿಬ್ಬಂದಿಗಳ ತುಕಡಿಯನ್ನು ಮಾಲ್ದೀವ್ಸ್ ನಿಂದ ತೆರವುಗೊಳಿಸಲಾಗುವುದು ಹಾಗೂ ಮಾಲ್ದೀವ್ಸ್ ನ ‘ಭಾರತ ಮೊದಲು’ ಎಂಬ ವಿದೇಶಾಂಗ ನೀತಿಯನ್ನು ಮಾರ್ಪಾಡು ಮಾಡಲಾಗುವುದು ಎಂದು ಪ್ರತಿಜ್ಞೆ ಮಾಡಿದ್ದರು ಎಂದು ಹೇಳಲಾಗಿದೆ.

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ಹಿಂಸಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಜಾಮೀನು

ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೇ 9, 2023ರ ಹಿಂಸಾಚಾರ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X