12 ವರ್ಷದ ಬಾಲಕಿ ಮೇಲೆ ಅಪ್ರಾಪ್ತರು ಸೇರಿ ನಾಲ್ವರಿಂದ ಅತ್ಯಾಚಾರ

Date:

Advertisements

ಹನ್ನೆರಡು ವರ್ಷದ ಬಾಲಕಿಯೊಬ್ಬಳ ಮೇಲೆ ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾಮೂಹಿಕ ಅತ್ಯಾಚಾರವೆಸಗಿದ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ.

ಅತ್ಯಾಚಾರಕ್ಕೆ ಸಹಕರಿಸಿದ ಓರ್ವ ಮಹಿಳೆಯು ಸೇರಿ  ಎಲ್ಲ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಅಪ್ರಾಪ್ತರಲ್ಲಿ 12,14 ಹಾಗೂ 15 ವರ್ಷದವರಾಗಿದ್ದಾರೆ.

ಹಳೆಯ ದೆಹಲಿಯ ಸಾದಾರ್‌ ಬಜಾರ್‌ನಲ್ಲಿ ಟೀ ಅಂಗಡಿ ಇಟ್ಟುಕೊಂಡಿರುವ ಪ್ರಮುಖ ಆರೋಪಿಯೊಬ್ಬ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುವ ಮಹಿಳೆಯೊಬ್ಬಳಿಗೆ ಹಣದ ಆಮಿಷವೊಡ್ಡಿ ಜನವರಿ ಒಂದರಂದು ಸಂತ್ರಸ್ತ 12 ವರ್ಷದ ಬಾಲಕಿಯನ್ನು ಕರೆದುಕೊಂಡು ಬರುವಂತೆ ತಿಳಿಸಿದ್ದಾನೆ.

Advertisements

ಆರೋಪಿಗಳು ದುಷ್ಕೃತ್ಯವೆಸಗುವ ಸಲುವಾಗಿಯೆ ಪ್ಲಾಸ್ಟಿಕ್‌ ಟಾರ್ಪಲ್‌ನಿಂದ ತಾತ್ಕಾಲಿಕ ಗುಡಿಸಲು ನಿರ್ಮಿಸಿಕೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಲಾ ಸಿಬ್ಬಂದಿಗೆ ‘ನಡತೆ ಸರ್ಟಿಫಿಕೇಟ್‌ʼ ಮಕ್ಕಳೇ ಕೊಡುವಂತಾಗಬೇಕು

ಪಕ್ಕದ ಕಟ್ಟಡದಲ್ಲಿ ಪ್ಲಾಸ್ಟಿಕ್ ಚಿಂದಿ ಆಯುವಂತೆ ಬಾಲಕಿಯನ್ನು ನಾಲ್ವರು ಆರೋಪಿಗಳಿದ್ದ  ಗುಡಿಸಲಿಗೆ ಕರೆದುಕೊಂಡು ಬಂದಿದ್ದಾಳೆ. ಬಾಲಕಿ ಬಂದ ನಂತರ ನಾಲ್ವರು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ನಂತರದಲ್ಲಿ ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ.

ಬಾಲಕಿ ಮನೆಗೆ ಬಂದ ಎರಡು ದಿನಗಳ ನಂತರ ಡಿ.5 ರಂದು ಪೋಷಕರಿಗೆ ಅತ್ಯಾಚಾರವಾಗಿರುವ ವಿಷಯ ಗೊತ್ತಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಛತ್ತೀಸ್‌ಗಢ ಮೂಲದ ಟೀ ಅಂಗಡಿ ಮಾಲೀಕ, ಉತ್ತರ ಪ್ರದೇಶ, ಮಧ್ಯ ಪ್ರದೇಶದ ಅಪ್ರಾಪ್ತ ಬಾಲಕರು ಹಾಗೂ ಒರ್ವ ಮಹಿಳೆಯನ್ನು ಬಂಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X