ಚಾಮರಾಜನಗರ | ಚರಂಡಿ ಕಾಮಗಾರಿ ವೇಳೆ ವೀರಗಲ್ಲು ಮತ್ತು ಶಾಸನಗಳು ಪತ್ತೆ

Date:

Advertisements

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪಟ್ಟಣದ ಜನತಾ ಕಾಲೋನಿಯಲ್ಲಿ ನಗರೋತ್ಥಾನ ಯೋಜನೆಯಡಿ ಚರಂಡಿ ಕಾಮಗಾರಿ ನಡೆಸುತ್ತಿದ್ದ ವೇಳೆ ವೀರಗಲ್ಲು ಮತ್ತು ಶಾಸನಗಳು ಪತ್ತೆಯಾದ ಸ್ಥಳಕ್ಕೆ ಶಾಸಕ ಎಚ್ ಎಂ ಗಣೇಶಪ್ರಸಾದ್ ಹಾಗೂ ಜಿಲ್ಲಾಧಿಕಾರಿ ಶಿಲ್ಪನಾಗ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚರಂಡಿ ಕಾಮಗಾರಿ ನಡೆಯುತ್ತಿದ್ದ ಸಮಯದಲ್ಲಿ ಶುಕ್ರವಾರ ಸುಮಾರು 5 ವೀರಗಲ್ಲು ಪತ್ತೆಯಾಗಿದ್ದು, ಇನ್ನಷ್ಟು ವೀರಗಲ್ಲುಗಳು ಮಣ್ಣಿನಲ್ಲಿ ಹುದುಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ದೊರಕಿರುವ ವೀರಗಲ್ಲುಗಳನ್ನು ಪುರಸಭೆಯವರು ಸ್ವಚ್ಛಗೊಳಿಸಿ ಮೈಸೂರಿನ ಪ್ರಾಚ್ಯ ವಸ್ತು ಸಂಗ್ರಹಾಲಯಕ್ಕೆ ರವಾನಿಸುವುದಾಗಿ ತಿಳಿಸಿದ್ದು, ಉಳಿದ ವೀರಗಲ್ಲುಗಳನ್ನು ಪಟ್ಟಣದ ಪರವಾಸು ದೇವಾಲಯದಲ್ಲಿ ಸಂರಕ್ಷಣೆ ಮಾಡಲು ತೀರ್ಮಾನಿಸಿದ್ದಾರೆ.

“ಪಟ್ಟಣದ ಜನತಾ ಕಾಲೋನಿಯಲ್ಲಿ ದೊರೆತಿರುವ ವೀರಗಲ್ಲು ಮತ್ತು ಶಾಸನಗಳು ಬಹಳ ಪುರಾತನ ಕಾಲದವುಗಳಾಗಿದ್ದು, ಯಾರ ಕಾಲ ಮತ್ತು ಯಾವ ರಾಜರ ಅವಧಿ ಶಾಸನಗಳು ಎಂಬುದನ್ನು ಪತ್ತೆ ಹಚ್ಚಿ ಹಾಗೂ ಮಣ್ಣಿನಲ್ಲಿ ಹುದುಗಿ ಹೋಗಿರುವ ಇಂತಹ ಬಹಳಷ್ಟು ಶಾಸನಗಳನ್ನು ತೆಗೆಯಲು ಉತ್ಖನನ ನಡೆಸಿ ಅವುಗಳನ್ನು ರಕ್ಷಣೆ ಮಾಡಬೇಕು” ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಸುರೇಶ್ ನಾಯಕ್ ಒತ್ತಾಯಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಮೈಸೂರು | ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ

“ಈಗಾಗಲೇ ಪ್ರಾಚ್ಯ ವಸ್ತು ಸಂಗ್ರಹಾಲಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಅಲ್ಲಿ ದೊರೆತ ವೀರಗಲ್ಲು ಮತ್ತು ಶಾಸನಗಳನ್ನು ಸಂಗ್ರಹಿಸಿ ಪರೀಕ್ಷಿಸಲಿದ್ದಾರೆ. ನಂತರ ಅವುಗಳ ಕುರಿತು ನಿಖರ ಮಾಹಿರಿ ತಿಳಿಯಲಿದೆ” ಎಂದು ತಹಶೀಲ್ದಾರ್ ಟಿ ರಮೇಶ್ ಬಾಬು ಪ್ರತಿಕ್ರಿಯೆ ನೀಡಿದರು.

ಈ ವೇಳೆ ಪುರಸಭೆ ಮುಖ್ಯಾಧಿಕಾರಿ ವಸಂತಕುಮಾರಿ, ಪುರಸಭೆ ಸದಸ್ಯ ಮಧುಸೂದನ್, ಪೊಲೀಸ್ ಇನ್ಸ್‌ಪೆಕ್ಟರ್ ಪರಶಿವಮೂರ್ತಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X