ಬೀದರ | ಜ.26 ರಂದು ಪ್ರಜಾಪ್ರಭುತ್ವ ಉಳುವಿಗಾಗಿ ಜಾಗೃತಿ ಸಮಾವೇಶ ; ಕರಪತ್ರ ಬಿಡುಗಡೆ

Date:

Advertisements

75ನೇ ಗಣರಾಜ್ಯೋತ್ಸವದ ಅಂಗವಾಗಿ ಪ್ರಜಾಪ್ರಭುತ್ವದ ಉಳಿವಿಗಾಗಿ ಬೃಹತ್ ಬಹಿರಂಗ ಸಮಾವೇಶವನ್ನು ‌ಜನವರಿ 26ರಂದು ಬೀದರ್ ನಗರದ ಡಾ.ಬಾಬಾ ಅಂಬೇಡ್ಕರ್ ವೃತ್ತದ ಎದುರುಗಡೆ ಆಯೋಜಿಸಲಾಗಿದ್ದು, ಕಾರ್ಯಕ್ರಮದ ಕರಪತ್ರವನ್ನು ನಗರದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದ ಎದುರುಗಡೆ ಬಿಡುಗಡೆ ಮಾಡಲಾಯಿತು.

“ಸಂವಿಧಾನ ಸಂರಕ್ಷಣಾ ಸಮಿತಿ ಮತ್ತು ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿವರ್ಷದಂತೆ ಈ ವರ್ಷವೂ ಆಯೋಜಿಸಿದ ಪ್ರಜಾಪ್ರಭುತ್ವದ ಉಳಿವಿಗಾಗಿ ಬೃಹತ್ ಬಹಿರಂಗ ಸಮಾವೇಶಕ್ಕೆ ವಿಚಾರವಾದಿಗಳಾದ ಕನ್ಹಯ್ಯಾಕುಮಾರ, ಅಮೂಲ ಮಿಠಕರಿ ಮತ್ತು ರಾಜ್ಯದ ಸಚಿವರಾದ ಡಾ.ಜಿ.ಪರಮೇಶ್ವರ, ಡಾ.ಹೆಚ್.ಸಿ. ಮಹದೇವಪ್ಪ, ಸತೀಶ ಜಾರಕಿಹೊಳಿ, ಸಂತೋಷ ಲಾಡ್, ಪ್ರಿಯಾಂಕ್‌ ಖರ್ಗೆ, ಈಶ್ವರ್ ಖಂಡ್ರೆ, ರಹೀಂ ಖಾನ್ ಸೇರಿದಂತೆ ಇತರೆ ಗಣ್ಯರು ಭಾಗವಹಿಸಲಿದ್ದಾರೆ” ಎಂದು ಆಯೋಜಕರು ತಿಳಿಸಿದ್ದಾರೆ.

ಕಾರ್ಯಕ್ರಮವು ಜನವರಿ 26 ರಂದು ಸಂಜೆ 5 ಗಂಟೆಗೆ ಡಾ.ಬಾಬಾ ಅಂಬೇಡ್ಕರ್ ವೃತ್ತದ ಎದುರುಗಡೆ ನಡೆಯಲಿದೆ. ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾವೇಶ ಯಶಸ್ವಿಗೊಳಿಸಬೇಕೆಂದು ಪದಾಧಿಕಾರಿಗಳು ಕೋರಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಗದಗ | ನಟ ಯಶ್ ಜನ್ಮದಿನದ ಬ್ಯಾನರ್​ ಹಾಕುವಾಗ ವಿದ್ಯುತ್​ ಸ್ಪರ್ಶ ; ಮೂವರು ಸಾವು

ಈ ಸಂದರ್ಭದಲ್ಲಿ ಸಲಹೆಗಾರರಾದ ಅಮೃತರಾವ ಚಿಮಕೋಡೆ, ಬಸವರಾಜ ಮಾಳಗೆ, ಅಬ್ದುಲ್ ಮನ್ನಾನ್ ಸೇಠ್, ಸುಮಂತ ಕಟ್ಟಿಮನಿ, ಶಿವಾಜಿರಾವ ಪಾಟೀಲ ಮುಂಗನಾಳ, ವಿಠಲರಾವ ಪ್ಯಾಗೆ ಹಾಗೂ ಕಾರ್ಯಕ್ರಮದ ಅಧ್ಯಕ್ಷ ನ್ಯಾಯವಾದಿ ನಾರಾಯಣ ಗಣೇಶ್, ಗೌರವ ಅಧ್ಯಕ್ಷ ಗೋರ‍್ಧನ್ ರಾಥೋಡ್, ಕಾರ್ಯಾಧ್ಯಕ್ಷ ಬಾಬು ಪಾಸ್ವಾನ್, ಪ್ರಧಾನ ಕಾರ್ಯದರ್ಶಿ ಜಾನ ವೆಸ್ಲಿ, ಸಂಚಾಲಕ ಅನಿಲಕುಮಾರ ಬೆಲ್ದಾರ್, ಖಜಾಂಚಿ ಶ್ರೀಪತರಾವ ದೀನೆ, ಉಪಾಧ್ಯಕ್ಷ ಶಿವಕುಮಾರ ನೀಲಿಕಟ್ಟಿ ಸೇರಿದಂತೆ ಪ್ರಮುಖರಾದ ಅಶೋಕಕುಮಾರ ಮಾಳಗೆ ಅವಿನಾಶ ದೀನೆ, ಮಾರುತಿ ಕಂಠಿ, ಸಂದೀಪ ಕಾಂಟೆ, ಶಾಲಿವಾನ ಬಡಿಗೇರ, ಬಾಬುರಾವ ಮಿಠಾರೆ, ವೈಜಿನಾಥ ನಿಡೋದಾ, ರಾಜಕುಮಾರ ಶೇರಿಕಾರ, ಮಲ್ಲಿಕಾರ್ಜುನ ಮೊಳಕೆರೆ, ವಿನೋದ ಬಂದಗೆ, ಗುಣವಂತ ಶಿಂಧೆ, ಮೋಹನ ಡಾಂಗೆ, ಮುಕೇಶ ರಾಯ, ಮೌಲಪ್ಪ ಮಾಳಗೆ, ವಿನೋದ ಸಿಂದೆ, ಸುನೀಲ ಕಡ್ಡೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X