ಕೋಚಿಮುಲ್ ನಿರ್ದೇಶಕ ಅಶ್ವತ್ಥನಾರಾಯಣ ಬಾಬು, ಅಧ್ಯಕ್ಷ ಕೆ ವೈ ನಂಜೇಗೌಡ ಮನೆ ಮೇಲೆ ಇ.ಡಿ ದಾಳಿ

Date:

Advertisements

ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಸೋಮವಾರ ಬೆಳಗ್ಗೆಯೇ ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ (ಕೋಚಿಮುಲ್) ನಿರ್ದೇಶಕ ಅಶ್ವತ್ಥನಾರಾಯಣ ಬಾಬು ಅವರ ಚಿಂತಾಮಣಿಯ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.

ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್ ಅವರ ಆಪ್ತರಾಗಿರುವ ಅಶ್ವತ್ಥನಾರಾಯಣ ಬಾಬು ಅವರು ಎರಡು ಬಾರಿ ಪಕ್ಷೇತರರಾಗಿ (ಡಾ.ಎಂ.ಸಿ.ಸುಧಾಕರ್ ಬಣ) ಕೋಚಿಮುಲ್ ನಿರ್ದೇಶಕರಾಗಿದ್ದಾರೆ.

ಕೋಚಿಮುಲ್‌ ಇತ್ತೀಚೆಗೆ ನಡೆಸಿದ ನೇಮಕಾತಿ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ನೇಮಕಾತಿಯ ಪಟ್ಟಿಯೊಂದು ಅಭ್ಯರ್ಥಿಗಳ ಹೆಸರು ಮತ್ತು ಅಂಕಗಳೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.ʼ

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಲಾ ಸಿಬ್ಬಂದಿಗೆ ‘ನಡತೆ ಸರ್ಟಿಫಿಕೇಟ್‌ʼ ಮಕ್ಕಳೇ ಕೊಡುವಂತಾಗಬೇಕು

ಶಾಸಕ ಕೆ ವೈ ನಂಜೇಗೌಡ ನಿವಾಸದ ಮೇಲೂ ದಾಳಿ

ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆ ಹಾಲು ಒಕ್ಕೂಟದ (ಕೋಚಿಮುಲ್) ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ್ದಾರೆ.

ಶಾಸಕರ ಮಾಲೂರು ತಾಲ್ಲೂಕಿನ ಕೊಮ್ಮನಹಳ್ಳಿ ನಿವಾಸ, ಶಾಸಕರ ಆಪ್ತ ಸಹಾಯಕ ಹರೀಶ್ ನಿವಾಸ, ಕೊಮ್ಮನಹಳ್ಳಿ ನಂಜುಂಡೇಶ್ವರ ಸ್ಟೋನ್ ಕ್ರಷರ್, ಕೋಚಿಮುಲ್ ಕಚೇರಿ, ಕೋಚಿಮುಲ್ ವ್ಯವಸ್ಥಾಪಕ ನಿರ್ದೇಶಕ ಗೋಪಾಲಮೂರ್ತಿ ನಿವಾಸ, ಆಡಳಿತಾತ್ಮಕ ನಿರ್ದೇಶಕ ನಾಗೇಶ್ ಅವರ ನಿವಾಸ ಸೇರಿದಂತೆ 10ಕ್ಕೂ ಹೆಚ್ಚು ಕಡೆ ಶೋಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X