ಗದಗ | ಪೊಲೀಸ ಇಲಾಖೆಯಿಂದ ವಾಹನಗಳ ತಪಾಸಣೆಗೆ ʼಥರ್ಡ್‌ ಐʼ

Date:

Advertisements

ಗದಗ ಬೆಟಗೇರಿ ಅವಳಿ ನಗರದಲ್ಲಿ ಸುಗಮ ಸಂಚಾರ ವ್ಯವಸ್ಥೆಗಾಗಿ ಮತ್ತು ಅಪರಾಧ ಪತ್ತೆ ಮಾಡಲು ಗದಗ ಜಿಲ್ಲಾಡಳಿತ ಮತ್ತು ಗದಗ ಜಿಲ್ಲಾ ಪೊಲೀಸ ಇಲಾಖೆ ವತಿಯಿಂದ ಥರ್ಡ್‌ ಐ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ಅನ್ನು ಪ್ರಾರಂಭಿಸಿದೆ.

ಶುಕ್ರವಾರದಂದು (ಜ.5) ಗದಗ ನಗರದಾದ್ಯಂತ ಜಿಲ್ಲಾ ಪೊಲೀಸ ಇಲಾಖೆ ವತಿಯಿಂದ ಒಟ್ಟು 5 ಜನ ಪೊಲೀಸ ನಿರೀಕ್ಷಕರು, 9 ಜನ ಪೊಲೀಸ ಉಪನಿರೀಕ್ಷಕರು, ಸಿಬ್ಬಂದಿ ಹಾಗೂ ಗದಗ ಸಂಚಾರ ಪೊಲೀಸ ಠಾಣೆ ವತಿಯಿಂದ ಥರ್ಡ್‌ ಐ ಸೆಂಟರ್‌ನ ಸಿಸಿ ಕ್ಯಾಮರಾಗಳಿಂದ ದಂಡ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಡಿಫೆಕ್ಟಿವ್ ನಂಬರ್ ಪ್ಲೇಟ್ ಹೊಂದಿದ ಮತ್ತು ನಂಬರ್ ಪ್ಲೇಟ್ ಹೊಂದಿರದ, ನಕಲಿ ನಂಬರ್ ಪ್ಲೇಟ್ ಹೊಂದಿದ ವಾಹನಗಳನ್ನು ಗದಗ ಶಹರದ ಮುಳಗುಂದ ನಾಕಾ, ಲದ್ವಾ ಸರ್ಕಲ್, ಭೂಮರಡ್ಡಿ ಸರ್ಕಲ್, ಮಹಾತ್ಮಾ ಗಾಂಧಿ ಸರ್ಕಲ್, ಹಾತಲಗೇರಿ ಆಕಾದ ಹತ್ತಿರ ಹಾಗೂ ಇತರೆ ಸ್ಥಳಗಳಲ್ಲಿ ಒಟ್ಟು 145 ವಾಹನಗಳನ್ನು ವಶಪಡಿಸಿಕೊಂಡು ದಂಡ ವಿಧಿಸುವ ಮೂಲಕ ಹಾಗೂ ಕಠಿಣ ಕಾನೂನು ಕ್ರಮ ಕೈಗೊಂಡಿದೆ.

ಗದಗ ಜಿಲ್ಲೆಯಾದ್ಯಂತ ಸುಗಮ ಸಂಚಾರ ವ್ಯವಸ್ಥೆ ರೂಪಿಸಲು 2023ರಲ್ಲಿ ಥರ್ಡ್‌ ಐ ಕಮಾಂಡ್ ಆಂಡ್ ಕಂಟ್ರೋಲ್ ಸೆಂಟರ್‌ನ ಮೂಲಕ ಸಿಸಿ ಕ್ಯಾಮರಾಗಳನ್ನು ಅಳವಡಿಸಿದ್ದು ಸಂಚಾರ ನಿಯಮ ಉಲ್ಲಂಘನೆ ಮಾಡಿದ ಹಾಗೂ ಕಣ್ಣು ತಪ್ಪಿಸಿಕೊಳ್ಳುತ್ತಿರುವ ವಾಹನಗಳ ಚಾಲಕರ ಮೇಲೆ ಪ್ರಸ್ತುತ ಹಾಗೂ ಮುಂದಿನ ದಿನಮಾನಗಳಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿ ದಂಡ ವಿಧಿಸುವ ಮೂಲಕ ಕಾನೂನು ಕ್ರಮ ಕೈಗೊಳ್ಳಲಾಗುವುದು ಜಿಲ್ಲಾ ಪೊಲೀಸ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X