ನೆಹರು ಓಲೇಕಾರ್ ದಾಖಲೆ ಸಹಿತ 1,500 ಕೋಟಿ ಆರೋಪ ಸಾಬೀತು ಮಾಡಲಿ: ಸಿಎಂ ಬೊಮ್ಮಾಯಿ

Date:

Advertisements
  • ನೆಹರೂ ಓಲೇಕಾರ್ ಆರೋಪ ಅಲ್ಲಗಳೆದ ಮುಖ್ಯಮಂತ್ರಿ
  • ಬಹುತೇಕ ಕಡೆ ಪಕ್ಷದ ಭಿನ್ನಮತ ಶಮನ ಆಗಲಿದೆ: ಬೊಮ್ಮಾಯಿ

ನೆಹರು ಓಲೇಕಾರ್ ಯಾವ ಆರೋಪ ಬೇಕಾದರೂ ಮಾಡಲಿ. ದಾಖಲೆ ಸಹಿತ 1,500 ಕೋಟಿ ಆರೋಪ ಸಾಬೀತು ಮಾಡಲಿ. ಕೇವಲ ಹೇಳಿಕೆ ಬೇಡ, ದಾಖಲೆ ನೀಡಲಿ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಮಂಗಳೂರಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ನೆಹರೂ ಓಲೇಕಾರ್ ಆರೋಪಗಳಲ್ಲಿ ಹುರುಳಿಲ್ಲ” ಎಂದರು.

“ಅಸಮಾಧಾನಗೊಂಡ ನಾಯಕರ ಜೊತೆ ಪಕ್ಷದ ಹಿರಿಯರು ಮಾತನಾಡುತ್ತಿದ್ದು, ಭಿನ್ನಮತ ಶಮನವಾಗುತ್ತದೆ. ಲಕ್ಷ್ಮಣ ಸವದಿ ಜನರ ವಿಶ್ವಾಸ ಉಳಿಸಿಕೊಳ್ಳಬೇಕು. ಅವರು ಹಿರಿಯರು. ಅವರಿಗೂ ಭಾವನೆಗಳಿವೆ. ಸುದೀರ್ಘ ಕಾಲ ಸಾರ್ವಜನಿಕ ಜೀವನದಲ್ಲಿದ್ದಾರೆ. ಆದ್ದರಿಂದ ಕ್ಷೇತ್ರದ ಜನರ ವಿಶ್ವಾಸವನ್ನು ಅವರು ಉಳಿಸಬೇಕಾಗಿದ್ದು, ಆ ಕಡೆಯಿಂದಲೂ ಒತ್ತಡವಿದೆ. ಎಲ್ಲ ಸರಿಯಾಗುತ್ತದೆ” ಎಂದರು.

Advertisements

“ಬಿಜೆಪಿ ಎರಡನೇ ಪಟ್ಟಿ ಬಿಡುಗಡೆಯಾಗಿದೆ. ಇನ್ನೂ 12 ಕ್ಷೇತ್ರ ಉಳಿದಿದೆ. ಕೆಲವೆಡೆ ಆಕಾಂಕ್ಷಿಗಳು, ವಿಧಾನ ಪರಿಷತ್ ಸದಸ್ಯರು ರಾಜೀನಾಮೆ ಕೊಟ್ಟಿದ್ದಾರೆ. ಬದಲಿಸೋದು ಸಾಮಾನ್ಯ, ಆಗ್ತಾ ಇರುತ್ತೆ. ಅಸಮಾಧಾನಗೊಂಡವರ ಮನವೊಲಿಕೆ ಮಾಡುತ್ತೇವೆ.  ಪಕ್ಷದಲ್ಲಿ ಎದ್ದಿರುವ ಅಸಮಾಧಾನ ಸರಿಪಡಿಸಲಾಗುತ್ತಿದೆ. ಕಾರ್ಯಕರ್ತರು ಗಟ್ಟಿ ಇದ್ದಾರೆ, ಇದರಿಂದ ಯಾವುದೇ ಹಾನಿಯಾಗುವುದಿಲ್ಲ ಬಹುತೇಕ ಕಡೆ ಪಕ್ಷದ ಭಿನ್ನಮತ ಶಮನ ಆಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ಕಾಂಗ್ರೆಸ್ ನವರಿಗೆ 60ರಿಂದ 65 ಕ್ಷೇತ್ರಗಳಿಗೆ ಅಭ್ಯರ್ಥಿಗಳೇ ಇಲ್ಲ. ಈಗ ಆಮದು ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿ ಇದ್ದಾರೆ. ಅವರು ಅಧಿಕಾರಕ್ಕೆ ಬರುವುದಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

Download Eedina App Android / iOS

X