ದ್ವೀಪ ರಾಷ್ಟ್ರದೊಂದಿಗೆ ರಾಜತಾಂತ್ರಿಕ ಬಿಕ್ಕಟ್ಟು ಉಲ್ಬಣ: ಭಾರತದ ರಾಯಭಾರಿಗೆ ಮಾಲ್ಡೀವ್ಸ್ ಸಮನ್ಸ್

Date:

Advertisements

ಭಾರತದ ರಾಯಭಾರಿ ನವದೆಹಲಿಯಲ್ಲಿರುವ ಮಾಲ್ಡೀವ್ಸ್ ವಿದೇಶಾಂಗ ಇಲಾಖೆ ಸಿಬ್ಬಂದಿಗೆ ಸಮನ್ಸ್ ನೀಡಿದ ನಂತರ ದ್ವೀಪ ರಾಷ್ಟ್ರದೊಂದಿಗೆ ರಾಜತಾಂತ್ರಿಕ ಬಿಕ್ಕಟ್ಟು ಉಲ್ಬಣಗೊಂಡಿದೆ.

ಭಾರತ ಸಮನ್ಸ್ ನೀಡಿದ ಕೆಲವೆ ಗಂಟೆಗಳಲ್ಲಿ ಮಾಲ್ಡೀವ್ಸ್ ಸರ್ಕಾರ ಕೂಡ ತನ್ನ ದೇಶದ ಭಾರತದ ರಾಯಬಾರಿಗೆ ಸಮನ್ಸ್ ನೀಡಿದೆ. ಇವೆಲ್ಲ ಬೆಳವಣಿಗೆಗಳು ವಿವಾದಾತ್ಮಕ ಹೇಳಿಕೆ ನೀಡಿದ ಮೂವರು ಸಚಿವರನ್ನು ಮಾಲ್ಡೀವ್ಸ್ ಸರ್ಕಾರ ಅಮಾನತುಗೊಳಿಸಿದ ನಂತರ ತೀವ್ರಗೊಂಡಿದೆ.

ಭಾರತದ ಮಾಲ್ಡೀವ್ಸ್‌ನ ರಾಯಭಾರಿಯಾಗಿರುವ ಇಬ್ರಾಹಿಂ ಶಾಹೀಬ್‌ ಅವರನ್ನು ನವದೆಹಲಿಯ ವಿದೇಶಾಂಗ ಇಲಾಖೆಯ ಅಧಿಕಾರಿಗಳು ಕರೆಸಿಕೊಂಡು ಸಂಪೂರ್ಣ ಆಕ್ಷೇಪಾರ್ಹ ನಡವಳಿಕೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಡವರ ಭೂಮಿ ಮತ್ತು ನೈಸ್‌ ರಾಜಕಾರಣ

ಭಾರತ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹವಾಗಿ ಪೋಸ್ಟ್‌ ಮಾಡಿ ಚೀನಾಕ್ಕೆ ಆರ್ಥಿಕ ನೆರವು ಕೋರಿದ್ದ ಮಾಲ್ಡೀವ್ಸ್ ಮೂವರು ಸಚಿವರನ್ನು ಅಧ್ಯಕ್ಷ ಮೊಹಮದ್ ಮುಯಿಜು ಅಮಾನತುಗೊಳಿಸಿದ್ದರು. ಅಲ್ಲದೆ ಸರ್ಕಾರವು ವಿವಾದಾತ್ಮಕ ಹೇಳಿಕೆಯಿಂದ ಅಂತರ ಕಾಯ್ದುಕೊಂಡು, ಪೋಸ್ಟ್‌ಗಳು ವೈಯಕ್ತಿಕ ಹೇಳಿಕೆ ಎಂದು ಪ್ರಕಟಣೆ ಹೊರಡಿಸಿತ್ತು.

ಮೂವರು ಸಚಿವರು ಆಕ್ಷೇಪಾರ್ಹ ಟ್ವೀಟ್‌ ಪೋಸ್ಟ್ ಪ್ರಕಟಿಸಿದ ನಂತರ ಭಾರತದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಸ್ವತಃ ಮಾಲ್ಡೀವ್ಸ್ ನ ಮಾಜಿ ಅಧ್ಯಕ್ಷರು ಹಾಗೂ ಮಾಜಿ ಸಚಿವರು ಹೇಳಿಕೆಯನ್ನು ಖಂಡಿಸಿದ್ದರು.

ಮಾಲ್ಡೀವ್ಸ್‌ನ ಪ್ರವಾಸವನ್ನು ಬಹಿಷ್ಕರಿಸಿ ಎಂದು ಭಾರತದ ವಿವಿಧ ಕ್ಷೇತ್ರದ ಪ್ರಖ್ಯಾತರಾದ ಅಕ್ಷಯ್ ಕುಮಾರ್, ಸಲ್ಮಾನ್ ಖಾನ್, ಸಾಹೀದ್ ಕಪೂರ್, ಹಾರ್ದಿಕ್ ಪಾಂಡ್ಯ, ಸಚಿನ್ ತೆಂಡೂಲ್ಕರ್ ಸೇರಿದಂತೆ ಹಲವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿಂಸಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಜಾಮೀನು

ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೇ 9, 2023ರ ಹಿಂಸಾಚಾರ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಅಮೆರಿಕದ ‘ಅಕ್ಕರೆಯ ನ್ಯಾಯಾಧೀಶ’ ಫ್ರಾಂಕ್ ಕ್ಯಾಪ್ರಿಯೊ ನಿಧನ

ರೋಡ್ ಐಲ್ಯಾಂಡ್‌ನ ನಿವೃತ್ತ ಮುನಿಸಿಪಲ್ ನ್ಯಾಯಾಧೀಶರಾಗಿದ್ದ, ಸಾಮಾಜಿಕ ಜಾಲತಾಣಗಳಲ್ಲಿ 'ಅಕ್ಕರೆಯ ನ್ಯಾಯಾಧೀಶ'...

Download Eedina App Android / iOS

X