ಜಪಾನ್‌ನಲ್ಲಿ ಮತ್ತೆ ಭೂಕಂಪ: ಸುನಾಮಿಯ ಆತಂಕವಿಲ್ಲ ಎಂದ ಸರ್ಕಾರ

Date:

Advertisements

ಕೇಂದ್ರ ಜಪಾನ್‌ನಲ್ಲಿ ಮತ್ತೆ ಪ್ರಬಲವಾಗಿ ಭೂಕಂಪ ಉಂಟಾಗಿದ್ದು, ಆದರೆ ಈ ಬಾರಿ ಸುನಾಮಿ ಉಂಟಾಗುವ ಯಾವುದೇ ಆತಂಕವಿಲ್ಲ ಎಂದು ಸರ್ಕಾರ ತಿಳಿಸಿದೆ.

ಜಪಾನಿನ ಕಡಲ ತೀರದಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.0 ಭೂಮಿ ಕಂಪಿಸಿದೆ. ಇದೇ ಸ್ಥಳದಲ್ಲಿ ಜನವರಿ 1ರಂದು ಪ್ರಬಲ ಭೂಕಂಪನ ಸಂಭವಿಸಿ ಹಲವು ಸಾವುನೋವುಗಳಿಗೆ ಕಾರಣವಾಗಿತ್ತು. ಕಳೆದ ವಾರ ಸಂಭವಿಸಿದ ಭೂಕಂಪನದಲ್ಲಿ ಸಾವಿನ ಪ್ರಮಾಣ 200ಕ್ಕೆ ಏರಿಕೆಯಾಗಿದ್ದು, 100 ಮಂದಿಯ ಮೃತದೇಹ ಪತ್ತೆಯಾಗಿರಲಿಲ್ಲ ಎಂದು ಸ್ಥಳೀಯ ಆಡಳಿತಾಧಿಕಾರಿಗಳು ತಿಳಿಸಿದ್ದರು.

ಹೊಸ ವರ್ಷದ ದಿನದಂದು 7.5ರ ತೀವ್ರತೆಯಲ್ಲಿ ಸಂಭವಿಸಿದ ಕಂಪನದಿಂದ ನೋಟೋ ಪೆನಿನ್ಸುಲಾದಲ್ಲಿ ಹಲವು ಕಟ್ಟಡಗಳು ಉರುಳಿಬಿದ್ದು ಸುಮಾರು ಪ್ರಮಾಣದ ಆಸ್ತಿಪಾಸ್ತಿಗಳು ನಷ್ಟ ಉಂಟಾಗಿದ್ದವು.

Advertisements

ಭೂಕಂಪನದಿಂದಾಗಿ ಇಶಿಕೋವಾ ಪ್ರದೇಶದ ಅವಶೇಷಗಳಡಿ 3,500 ಕ್ಕೂ ಹೆಚ್ಚು ಮಂದಿ ಸಿಲುಕಿದ್ದರು. ಸಾವಿನ ಪ್ರಮಾಣ 200 ದಾಟಿದೆ ಎಂದು ಹೇಳಲಾದರೂ 100ಕ್ಕೂ ಹೆಚ್ಚು ಮೃತದೇಹ ಪತ್ತೆಯಾಗಿಲ್ಲ. ಪರಿಹಾರ ಕಾರ್ಯಾಚರಣೆ ಇನ್ನೂ ಮುಂದುವರೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಡವರ ಭೂಮಿ ಮತ್ತು ನೈಸ್‌ ರಾಜಕಾರಣ

ವಾಜಿಮಾ ಪ್ರದೇಶದಲ್ಲಿ 1,200ಕ್ಕೂ ಹೆಚ್ಚು ಕಂಪನಗಳು ಉಂಟಾಗಿತ್ತು. ಇದರಿಂದ ಸಾವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ.

ಭಾರಿ ಹಿಮ ಬೀಳುತ್ತಿರುವುದರಿಂದ ಭೂಕಂಪ ಉಂಟಾದ ಪ್ರದೇಶದಲ್ಲಿ ಪರಿಹಾರ ಕಾರ್ಯ ಕೈಗೊಳ್ಳುವುದು ಕಷ್ಟವಾಗುತ್ತಿದೆ. 30 ಸಾವಿರ ಮಂದಿ ಸರ್ಕಾರಿ ಆಶ್ರಯ ಪ್ರದೇಶಗಳಲ್ಲಿ ಉಳಿದುಕೊಂಡಿದ್ದಾರೆ. ಅಲ್ಲದೆ ಈ ಪ್ರದೇಶದ 60 ಸಾವಿರ ಮಂದಿಗೆ ನೀರಿನ ಸಮಸ್ಯೆ ಉಂಟಾಗಿದ್ದರೆ, 15 ಸಾವಿರ ಮಂದಿ ವಿದ್ಯುತ್ ಇಲ್ಲದೆ ಪರದಾಡುತ್ತಿದ್ದಾರೆ.

ವಿಪತ್ತು ಪರಿಹಾರ ಸಭೆಯಲ್ಲಿ ಮಾತನಾಡಿದ ಜಪಾನ್ ಪ್ರಧಾನಿ ಫುಮಿಯೊ ಕಿಶಿ, ಭೂಕಂಪನ ಪ್ರದೇಶದಲ್ಲಿ ಎಲ್ಲ ರೀತಿಯ ಪರಿಹಾರ ಕಾರ್ಯಾಚರಣೆ ಕೈಗೊಂಡು ಸಮಸ್ಯೆಯನ್ನು ಪರಿಹರಿಸುವಂತೆ ಸಚಿವರಿಗೆ ಸೂಚನೆ ನೀಡಿದ್ದಾರೆ. ತೊಂದರೆಗೊಳಗಾಗಿರುವ ಸಂತ್ರಸ್ತರನ್ನು ಭೂಕಂಪ ಪೀಡಿತ ಪ್ರದೇಶದಿಂದ ದೂರದ ಪ್ರದೇಶಕ್ಕೆ ಸ್ಥಳಾಂತರಿಸುವಂತೆ ಸೂಚನೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

ಟ್ರಂಪ್‌ ಕೊಟ್ಟ ಏಟಿಗೆ ಚೀನಾದತ್ತ ತಿರುಗಿದ ಪ್ರಧಾನಿ; ಚೀನೀ ಭಜನೆ ಮಾಡುತ್ತಿದೆ ಮೋದಿ ಭಕ್ತ ಗಣ

ಅಮೆರಿಕ ಭಾರೀ ಮೊತ್ತದ ತೆರಿಗೆ ಹೇರಿದ ಬೆನ್ನಲ್ಲೇ, ಭಾರತವು ಚೀನಾದೊಂದಿಗೆ ಆರ್ಥಿಕ...

Download Eedina App Android / iOS

X