ಗಣರಾಜ್ಯೋತ್ಸವ | ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಕೇಂದ್ರ ನಿರಾಕರಣೆ; ನಾಡಿನ ಅಸ್ಮಿತೆಯ ಮೇಲೆ ದಾಳಿ ಎಂದ ಸಿದ್ದರಾಮಯ್ಯ

Date:

Advertisements

ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು, ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ” ಎಂದು ಆರೋಪಿಸಿದ್ದಾರೆ.

“ನವಕರ್ನಾಟಕದ ಅಭಿವೃದ್ಧಿಯ ದೃಷ್ಠಾರ, ಸಾಮಾಜಿಕ ನ್ಯಾಯದ ಹರಿಕಾರ, ನೀರಾವರಿ, ಬ್ಯಾಂಕಿಂಗ್‌, ಮೂಲಸೌಕರ್ಯದ ಕ್ಷೇತ್ರಗಳ ಅಭಿವೃದ್ದಿಯ ಮೂಲಕ ಮೈಸೂರನ್ನು ಒಂದು ಮಾದರಿ ರಾಜ್ಯವಾಗಿ ಕಟ್ಟಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಸ್ತಬ್ಧಚಿತ್ರ, ರಾಜಧಾನಿ ಬೆಂಗಳೂರಿನ ಗ್ರಾಮದೇವತೆ, ಸುಮಾರು 10ನೇ ಶತಮಾನದಲ್ಲಿ ನಿರ್ಮಿಸಿಲ್ಪಟ್ಟ ಅಣ್ಣಮ್ಮದೇವಿಯ ದೇವಸ್ಥಾನದ ಸ್ತಬ್ಧಚಿತ್ರ, ಕಿತ್ತೂರು ಚೆನ್ನಮ್ಮ, ಬ್ರಾಂಡ್ ಬೆಂಗಳೂರು ಹಾಗೂ ಕರ್ನಾಟಕದ ನೈಸರ್ಗಿಕ ವ್ಯವಸ್ಥೆ ಕುರಿತು ಸ್ತಬ್ಧಚಿತ್ರ ಮಾದರಿಗಳಿಗೆ ಅವಕಾಶ ಕೋರಿ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ ಕೇಂದ್ರದ ಆಯ್ಕೆ ಸಮಿತಿಯು ನಮ್ಮ ಮನವಿಯನ್ನು ತಿರಸ್ಕರಿಸಿ, ನಾಡಿನ ಅಸೀಮ ಸಾಧನೆ ಮತ್ತು ಮಾದರಿ ಸಾಧಕರನ್ನು ದೇಶಕ್ಕೆ ಪರಿಚಯಿಸುವ ಅವಕಾಶವನ್ನು ಕಸಿದುಕೊಂಡಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಡುದ್ವೇಷದ ಕತ್ತಲ ಯುಗದಲ್ಲಿ ಬೆಳ್ಳಂಬೆಳಕಿನ ತೀರ್ಪು

“ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ತೆರಿಗೆ ಪಾಲಿನಲ್ಲಿ ವಂಚನೆ, ಬರಪರಿಹಾರದಲ್ಲಿ ಅನ್ಯಾಯ, ಕನ್ನಡಿಗರು ಕಟ್ಟಿರುವ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳ ಮಾರಾಟ ಹೀಗೆ ಹೆಜ್ಜೆಹೆಜ್ಜೆಗೂ ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ ಪ್ರಹಾರ ಮಾಡುತ್ತಿದೆ. ಇದರ ಜೊತೆಗೆ ಈಗ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ರಾಜ್ಯಕ್ಕೆ ಅವಕಾಶ ನಿರಾಕರಿಸಿ ನಮ್ಮ ಅಸ್ಮಿತೆಯ ಮೇಲೆ ದಾಳಿಗೆ ಇಳಿದಿದೆ” ಎಂದು ದೂರಿದ್ದಾರೆ.

“ಕನ್ನಡ-ಕನ್ನಡಿಗ ಮತ್ತು ಕರ್ನಾಟಕಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದಿಂದ ಕನ್ನಡಿಗರು ಈಗಾಗಲೇ ರೋಸಿಹೋಗಿದ್ದಾರೆ. ಅವರ ತಾಳ್ಮೆಯನ್ನು ಪರೀಕ್ಷಿಸಲು ಕೇಂದ್ರ ಸರ್ಕಾರ ಹೋಗಬಾರದು. ಈಗಲೂ ಕಾಲ ಮಿಂಚಿಲ್ಲ, ಕೇಂದ್ರ ಸರ್ಕಾರ ತಕ್ಷಣ ತನ್ನ ತಪ್ಪನ್ನು ತಿದ್ದಿಕೊಂಡು ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿಕೊಂಡು ದೇಶದ ಹೆಮ್ಮೆಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ನಮಗೆ ಅವಕಾಶ ನೀಡಬೇಕು” ಎಂದು ಒಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X