ದಾವಣಗೆರೆ | ವಿದ್ಯಾರ್ಥಿ ನಿಲಯದಲ್ಲಿ ಕುಂದುಕೊರತೆ; ವಾರ್ಡನ್‍ಗಳಿಗೆ ಖಡಕ್ ಎಚ್ಚರಿಕೆ

Date:

Advertisements

ದಾವಣಗೆರೆ ನಗರದ ವರ್ತುಲ ರಸ್ತೆಯ ‌ಬಿಸಿಎಂ ಇಲಾಖೆ ಸರ್ಕಾರಿ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ವಸತಿ ನಿಲಯದ ಊಟದಲ್ಲಿ ಕಲ್ಲು ಇರುತ್ತದೆ, ಆಹಾರ ರುಚಿ ಇರುವುದಿಲ್ಲ, ವಾರದಲ್ಲಿ ನಾಲ್ಕು ಬಾರಿ ಫುಲಾವ್ ಮಾಡಿ ಕೊಡುತ್ತಾರೆ ಅದರಲ್ಲೂ ತರಕಾರಿ ಹಾಕುವುದಿಲ್ಲ ಎಂದು ಆರೋಪಿಸಿದ್ದಾರೆ.

ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ್ದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ಅವರೆದುರು ವಸತಿ ನಿಲಯದ ವಿದ್ಯಾರ್ಥಿಗಳು ತಮ್ಮ ಅಳಲು ತೋಡಿಕೊಂಡಿದ್ದಾರೆ. ದಿನನಿತ್ಯ ಮೆನು ಬದಲಾಯಿಸಬೇಕು. ಹಾಸ್ಟೆಲ್ ಸ್ವಚ್ಚತೆ ಕಾಪಾಡಿಕೊಂಡು ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ನಿವಾರಿಸಲು ಅವರು ತಿಳಿಸಿದರು.

ಗ್ರಂಥಾಲಯ ಸೌಲಭ್ಯವಿಲ್ಲ, ಶೌಚಾಲಯದಲ್ಲಿ ಸ್ವಚ್ಛತೆ ಇಲ್ಲ, ಮಂಚಗಳು ಇಲ್ಲದೆ ಕೆಲವು ವಿದ್ಯಾರ್ಥಿಗಳು ನೆಲದ ಮೇಲೆಯೇ ಮಲಗುತ್ತಿದ್ದು, ಹಾಸ್ಟೆಲ್‌ಗೆ ವೈದ್ಯರು ಭೇಟಿ ನೀಡುವುದಿಲ್ಲ. ಒಂದು ಕೊಠಡಿಯಲ್ಲಿ 10ರಿಂದ 20ವಿದ್ಯಾರ್ಥಿಗಳು ಇದ್ದು, ಸೋಲಾರ್ ಇದ್ದರೂ ಸ್ನಾನಕ್ಕೆ ಬಿಸಿನೀರು ದೊರೆಯುವುದಿಲ್ಲ. ಊಟದ ಮೆನು ಬದಲಾಯಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

Advertisements

ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ವಾರ್ಡನ್ ಅವರದ್ದು, ಇಲ್ಲದಿದ್ದರೆ ಮೇಲಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಲಾಗುವುದು ಎಂದು ಮಹಾವೀರ ಮ.ಕರೆಣ್ಣವರ ತಿಳಿಸಿದ್ದಾರೆ.

ಇದೇ ವೇಳೆ ನಗರದ ಶಾಮನೂರು ಗ್ರಾಮದ ಅಂಗನವಾಡಿ ಕೇಂದ್ರಗಳು ಹಾಗೂ ಜೆ.ಎಚ್ ಪಟೇಲ್ ಬಡಾವಣೆಯಲ್ಲಿನ ವಿದ್ಯಾರ್ಥಿನಿಯರ ವಸತಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲಿಸಿ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಬೇಕು ಎಂದು ವಾರ್ಡನ್‍ಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X