ಕಲ್ಲಡ್ಕ ಪ್ರಭಾಕರ್ ಭಟ್‌ ನಿರೀಕ್ಷಣಾ ಜಾಮೀನಿಗೆ ಅನರ್ಹನೆಂದು ವಾದ ಮಂಡನೆ; ಜ.17ಕ್ಕೆ ತೀರ್ಪು

Date:

Advertisements

ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೀಡಲಾಗಿರುವ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಬೇಕು. ಆತನ ನಿರೀಕ್ಷಣಾ ಜಾಮೀನಿಗೆ ಅನರ್ಹರಾಗಿದ್ದಾರೆ ಎಂದು ಹಿರಿಯ ವಕೀಲ ಎಸ್‌ ಬಾಲನ್ ವಾದ ಮಂಡಿಸಿದ್ದಾರೆ. ಜಾಮೀನು ಅರ್ಜಿ ಕುರಿತು ತೀರ್ಪನ್ನು ಜನವರಿ 17ಕ್ಕೆ ನ್ಯಾಯಾಲಯ ಕಾಯ್ದಿರಿಸಿದೆ.

ಕಲ್ಲಡ್ಕ ಭಟ್‌ಗೆ ಕಳೆದ ತಿಂಗಳು ನಿರೀಕ್ಷಣಾ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಶ್ರೀರಂಗಪಟ್ಟಣ 3ನೇ ಅಪರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ದೂರುದಾರೆ ನಜ್ಮಾ ನಝೀರ್ ಅರ್ಜಿ ಸಲ್ಲಿಸಿದ್ದಾರೆ. ನಜ್ಮಾ ಪರವಾಗಿ ವಕೀಲ ಬಾಲನ್ ವಾದ ಮಂಡಿಸಿದ್ದಾರೆ.

“ಸುಪ್ರಿಂ ಕೋರ್ಟ್ ಮತ್ತು ಹಲವು ಹೈಕೋರ್ಟ್‌ಗಳ ತೀರ್ಪುಗಳ ಪ್ರಕಾರ ಆರೋಪಿ ಕಲ್ಲಡ್ಕ ಪ್ರಭಾಕರ್ ಭಟ್ ನಿರೀಕ್ಷಣಾ ಜಾಮೀನಿಗೆ ಅನರ್ಹನಾಗಿದ್ದಾನೆ. ದೇಶದ ಭದ್ರತೆ, ಸೌಹಾರ್ದತೆಗೆ ಈ ಆರೋಪಿ ಕಂಟಕವಾಗಿದ್ದಾನೆ. ಈ ಹಿಂದಿನ ಐಪಿಸಿ ಮಾತ್ರವಲ್ಲ, ಈಗಿನ ನ್ಯಾಯ ಸಂಹಿತಾ ಮತ್ತು ಸಾಕ್ಷ್ಯ ಅಧಿನಿಯಮದ ಪ್ರಕಾರವೂ ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ ನಿರೀಕ್ಷಣಾ ಜಾಮೀನಿಗೆ ಅನರ್ಹ” ಎಂದು ಕಾನೂನು, ಕಾಯ್ದೆಗಳನ್ನು ಉಲ್ಲೇಖಿಸಿ ವಾದ ಮಂಡಿಸಿದ್ದಾರೆ.

Advertisements

“ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ ದೇಶ ಒಡೆಯುವ ಸಂಘಟಿತ ಕೃತ್ಯ ಮಾಡಿದ್ದಾನೆ. ಆ ಕಾರಣಕ್ಕಾಗಿ ಆತನ ವಿರುದ್ದ ಹೆಚ್ಚುವರಿಯಾಗಿ ಕೋಕಾ ಅ್ಯಕ್ಟ್ ಮತ್ತು ಯುಎಪಿಎ ಅ್ಯಕ್ಟ್, ಟೆರರಿಸ್ಟ್ ಅ್ಯಕ್ಟ್ ಗಳನ್ನು ಸೇರಿಸಬೇಕಿದೆ. ಆದ್ದರಿಂದ ಆರೋಪಿ ಪೊಲೀಸ್ ಕಸ್ಟಡಿಗೆ ಬೇಕಾಗಿದ್ದಾನೆ. ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ಟ ಹೇಳಿರುವ ಹೇಳಿಕೆಯನ್ನು ಆತನಿಂದ ದೃಢಪಡಿಸಿಕೊಂಡು, ಹೇಳಿಕೆಯ ಮಾದರಿ ಪಡೆದುಕೊಂಡು ಫೊರೆನ್ಸಿಕ್ ಲ್ಯಾಬ್ ಗೆ ಕಳಿಸಬೇಕಿದೆ. ಆರೋಪಿ ಮೇಲೆ ರೌಡಿ ಹಾಳೆ ತೆರೆಯಲು ಎಲ್ಲ ಆಧಾರಗಳಿದ್ದು, ಇವುಗಳ ಹಿನ್ನಲೆಯಲ್ಲಿ ಆರೋಪಿಯನ್ನು ತನಿಖೆಗೆ ಒಳಪಡಿಸಬೇಕಿದೆ. ಹಾಗಾಗಿ ಜಾಮೀನು ನಿರಾಕರಿಸಬೇಕು” ಎಂದು ವಾದ ಮಂಡಿಸಿದರು.

ಕಲ್ಲಡ್ಕ ಪ್ರಭಾಕರ ಭಟ್ ಪರ ವಕೀಲರು ಮತ್ತು ಸರ್ಕಾರಿ ವಕೀಲರು ವಾದ ಮಂಡಿಸಿದರು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ ಆದೇಶವನ್ನು ಜನವರಿ 17ಕ್ಕೆ ಕಾಯ್ದಿರಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X