ಏಕನಾಥ್ ಶಿಂಧೆ ಬಣ ನಿಜವಾದ ಶಿವಸೇನೆ, ಉಚ್ಚಾಟಿಸಲು ಉದ್ಧವ್‌ಗೆ ಅಧಿಕಾರವಿಲ್ಲ: ಸ್ಪೀಕರ್ ತೀರ್ಪು

Date:

Advertisements

ಶಿವಸೇನೆ ಶಾಸಕರ ಅನರ್ಹತೆ ಪ್ರಕರಣದಲ್ಲಿ ಮುಖ್ಯಮಂತ್ರಿ ಏಕ್‌ನಾಥ್ ಶಿಂಧೆ ಪರವಾಗಿ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನರ್ವೇಕರ್‌ ತೀರ್ಪು ನೀಡಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆಯಲ್ಲಿ ತೀರ್ಪನ್ನು ಪ್ರಕಟಿಸಿದ ಸ್ಪೀಕರ್ ರಾಹುಲ್ ನರ್ವೇಕರ್, ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣವೆ ನಿಜವಾದ ಶಿವಸೇನೆಯಾಗಿದ್ದು, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಉಚ್ಚಾಟಿಸಲು ಉದ್ದವ್ ಠಾಕ್ರೆ ಅವರಿಗೆ ಅಧಿಕಾರವಿಲ್ಲ ಎಂದು ತಿಳಿಸಿದ್ದಾರೆ.

ಶಿವಸೇ ನಾದ ಎರಡೂ ಬಣಗಳು ಚುನಾವಣಾ ಆಯೋ ಗಕ್ಕೆ ಸಲ್ಲಿಸಿರುವ ತಮ್ಮ ಸಂಘಟನೆಯ ವಿಧಾನದಲ್ಲಿ
ಯಾವುದೇ ಒಮ್ಮತವಿಲ್ಲ. ನಾಯಕತ್ವ ರಚನೆಯ ಬಗ್ಗೆ ಎರಡು ಪಕ್ಷಗಳು ವಿಭಿನ್ನ ದೃಷ್ಟಿಕೋನಗಳನ್ನು ಹೊಂ ದಿವೆ. ಪರಿಗಣಿಸಬೇ ಕಾದ ಏಕೈ ಕ ಅಂ ಶವೆಂ ದರೆ ಶಾಸಕಾಂಗ ಪಕ್ಷದ ಬಹುಮತ ಎಂ ದು ನಾರ್ವೇ ಕರ್ ತೀ ರ್ಪಿ ನಲ್ಲಿ ಹೇಳಿದ್ದಾರೆ.

Advertisements

ಶಾಸಕ ಭರತ್‌ ಸೇಠ್ ಗೋಗ್‌ವಾಲೆ ಅವರು ನಿಜವಾದ ವಿಪ್‌ ಅಧಿಕಾರ ಹೊಂದಿದ್ದು, ಉದ್ಧವ್ ಬಣದ ಸುನಿಲ್‌ ಪ್ರಭು ಅವರಿಗೆ ಸಭೆ ಕರೆಯುವ ಯಾವುದೇ ಅಧಿಕಾರವಿಲ್ಲ ಎಂದು ರಾಹುಲ್ ನರ್ವೇಕರ್‌ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಭಿಮಾನ ಅಂಧಾಭಿಮಾನವಾಗದಿರಲಿ; ಬಡವರ ಮಕ್ಕಳು ಬಲಿಯಾಗದಿರಲಿ

ಜೂನ್‌ 2022ರಲ್ಲಿ ಏಕ್‌ನಾಥ್‌ ಶಿಂಧೆ ನೇತೃತ್ವದಲ್ಲಿ 35ಕ್ಕೂ ಹೆಚ್ಚು ಶಿವಸೇವೆ ಶಾಸಕರು ಆಗಿನ ಮುಖ್ಯಮಂತ್ರಿಯಾಗಿದ್ದ ಉದ್ದವ್ ಠಾಕ್ರೆ ವಿರುದ್ಧ ಬಂಡೆದ್ದು ಬಿಜೆಪಿಯೊಂದಿಗೆ ಕೈಜೋಡಿಸಿ ಸರ್ಕಾರ ರಚಿಸಿದ್ದರು.

ತಮ್ಮದು ನಿಜವಾದ ಶಿವಸೇನೆ ಎಂದು ಘೋಷಿಸಿ 40 ಶಾಸಕರನ್ನು ಅನರ್ಹಗೊಳಿಸಬೇಕೆಂದು ಉದ್ದವ್ ಠಾಕ್ರೆ ಚುನಾವಣಾ ಆಯೋಗ ಹಾಗೂ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಎರಡೂ ಕಡೆಯೂ ಏಕ್‌ನಾಥ್ ಶಿಂಧೆ ಪರ ತೀರ್ಪು ಬಂದಿತ್ತು. ಮೂಲ ಚಿಹ್ನೆಯನ್ನು ಕೂಡ ಏಕ್‌ನಾಥ್ ಬಣಕ್ಕೆ ನೀಡಲಾಗಿತ್ತು.

ಒಟ್ಟು 34 ಅರ್ಜಿಗಳಿಗೆ ಸಂಬಂಧಿಸಿ ಸ್ಪೀಕರ್ 6 ವಿಭಾಗಗಳಲ್ಲಿ ತೀರ್ಪು ಪ್ರಕಟಿಸಿದ್ದಾರೆ. ಪ್ರತಿ ಭಾಗವೂ ತಲಾ 200 ಪುಟಗಳನ್ನು ಹೊಂದಿದ್ದು, ಒಟ್ಟು ತೀರ್ಪು 1,200 ಪುಟಗಳನ್ನು ಒಳಗೊಂಡಿದೆ.

ತೀರ್ಪಿನ ವಿರುದ್ಧ ಹೈಕೋರ್ಟ್‌ ಅಥವಾ ಸುಪ್ರೀಂ ಕೋರ್ಟ್‌ ಮೆಟ್ಟಿಲೇರುವ ಅವಕಾಶವೂ ಎರಡೂ ಕಡೆಯವರಿಗೆ ಇರುತ್ತದೆ. ಈ ಹಿಂದೆಯೇ ಸುಪ್ರೀಂ ಕೋರ್ಟ್‌ ತೀರ್ಪು ಪ್ರಕಟಿಸಲು ಸ್ಪೀಕರ್‌ಗೆ ಜ.10ರ ಗಡುವು ವಿಧಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X